ಮೂರುಸಾವಿರ ಮಠದ ರಕ್ಷಣೆಗೆ ಮುಂದಾಗಿದ್ದಕ್ಕೆ ಜೀವಬೆದರಿಕೆ: ದಿಂಗಾಲೇಶ್ವರ ಸ್ವಾಮೀಜಿ


Team Udayavani, Dec 26, 2020, 2:54 PM IST

ಮೂರುಸಾವಿರ ಮಠದ ರಕ್ಷಣೆಗೆ ಮುಂದಾಗಿದ್ದಕ್ಕೆ ಜೀವಬೆದರಿಕೆ: ದಿಂಗಾಲೇಶ್ವರ ಸ್ವಾಮೀಜಿ

ಹುಬ್ಬಳ್ಳಿ: ಮೂರುಸಾವಿರ ಮಠ ಹಾಗೂ ಮಠದ ಆಸ್ತಿ ರಕ್ಷಣೆಗೆ ಮುಂದಾಗಿರುವುದಕ್ಕೆ ಜೀವ ಬೆದರಿಕೆ ಹಾಗೂ ತೇಜೋವಧೆ ಮಾಡಲಾಗುತ್ತಿದ್ದು, ಪ್ರಾಣ ಹೋದರೂ ಈ ಕಾರ್ಯದಿಂದ ಹಿಂದೆ ಸರಿಯುವುದಿಲ್ಲ ಎಂದು ಬಾಲೆಹೊಸೂರು ಶ್ರೀ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ದಿನಗಳ ಹಿಂದೆ ನಗದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಹೊರಟಾಗ ನಗರದ ಹೊರ ವಲಯದಲ್ಲಿ ಅಪರಿಚತರು ಕಾರು ನಿಲ್ಲಿಸಿ ಜೀವ ಬೆದರಿಕೆ ಹಾಕಿದ್ದಾರೆ. ಕೆಲ ಸ್ವಾಮೀಜಿ ಹಾಗು ಗಣ್ಯರೊಂದಿಗೆ ಫೋನ್ ಮೂಲಕ ಕರೆ ಮಾಡಿ ಮತನಾಡಿಸಿ ಆಸ್ತಿ ದಾನ ಮಾಡಿರುವ ವಿಚಾರದಿಂದ ಹಿಂದೆ ಸರಿಯುವಂತೆ ಮಾತನಾಡಿಸಿದ್ದಾರೆ. ನನ್ನ ದೂರಿಗೆ ಬೆಲೆ ಸಿಗದ ಕಾರಣ ದೂರು ದಾಖಲು ಮಾಡಿಲ್ಲ. ಸರಕಾರದ ರಕ್ಷಣೆ ಸಿಗುವುದಿಲ್ಲ ಎನ್ನುವುದು ಮನವರಿಕೆಯಾಗಿದೆ ಎಂದರು.

ಆರ್ಥಿಕವಾಗಿ ಸಂಕಷ್ಟದಲ್ಲಿರುವ ಮಠ 25 ಎಕರೆ ದಾನ ಮಾಡುವುದು ಎಷ್ಟು ಸರಿ. ಈ ಹಿಂದೆ ಕೇವಲ 10 ಲಕ್ಷ ರೂ. ಆರ್ಥಿಕ ಸಮಸ್ಯೆಯಿಂದ ಕೇಶ್ವಾಪುರದಲ್ಲಿನ 2 ಎಕರೆ ಭೂಮಿ ಮಾರಾಟ ಮಾಡಿದ್ದಾರೆ. ಹೀಗಿರುವಾಗ 25 ಎಕರೆ ಮಠದ ಭೂಮಿಯನ್ನು ದಾನ ಮಾಡಿರುವುದರಲ್ಲಿ ಯಾವ ಅರ್ಥವಿದೆ. ಇಂದು ಯಾವ ಸಂಸ್ಥೆ ಉಚಿತ ಸೇವೆ ನೀಡುತ್ತಿವೆ ಎನ್ನುವ ಪ್ರಶ್ನೆ ಮೂಡುತ್ತದೆ. ಸೇವೆ ಅರ್ಥ ಕಳೆದುಕೊಂಡಿದೆ. ದಾನ ಪಡೆದಿರುವ ಸಂಸ್ಥೆ ಆರ್ಥಿಕವಾಗಿ ಸಾಕಷ್ಟು ಸದೃಢವಾಗಿದೆ ಎಂದರು.

ಇದನ್ನೂ ಓದಿ:ವಿಲೀನ ಚರ್ಚೆ ಬಾಲಿಶ, ಜೆಡಿಎಸ್ ಪಕ್ಷವನ್ನು ಅಲುಗಾಡಿಸಲು ಸಾಧ್ಯವಿಲ್ಲ: ದೇವೇಗೌಡ

2009 ರಲ್ಲಿ ಕೋಲ್ಕತ್ತದಲ್ಲಿ ನ್ಯಾಯ ನಿರ್ಣಯ ಸಂದರ್ಭದಲ್ಲಿ ಮಠದ ಆಸ್ತಿ ಪರಭಾರೆ ಮಾಡಬಾರದು ಎನ್ನುವ ದಾಖಲೆಯಿದೆ. ಸುಪ್ರೀಂ ಕೋರ್ಟ್ ನೇಮಿಸಿದ ಅರ್ಬಿಟೇಟರ್ ಮಾಡಿದ ಆದೇಶವನ್ನು ಧಾರವಾಡದಲ್ಲಿ ಪರಿವರ್ತಿಸಿ ದಾನ ಮಾಡಲಾಗಿದೆ. ಹೀಗಾಗಿ ಈ ದಾನ ಕಾನೂನು, ಧರ್ಮ ಹಾಗೂ ಸಿದ್ದಾಂತಗಳಿಗೆ ವಿರೋಧವಾಗಿದೆ. ಮಠ ಆರ್ಥಿಕ ಸಂಕಷ್ಟದಲ್ಲಿರುವಾಗ ಸುಮಾರು 500 ಕೋಟಿ ರೂ. ಬೆಲೆ ಬಾಳುವ ಆಸ್ತಿಯನ್ನು ಸದೃಢ ಸಂಸ್ಥೆಗೆ ದಾನ ಮಾಡಿರುವುದಲ್ಲಿ ಅರ್ಥವಿಲ್ಲ ಎಂದರು.

ತೋಂಟದ ಶ್ರೀಗಳ ಕುತಂತ್ರ: ಮಠದ ಆಸ್ತಿ ದಾನ ಮಾಡಿಸುವಲ್ಲಿ ಮಠದ ಉನ್ನತ ಮಟ್ಟದ ಸಮಿತಿ ಕೈವಾಡವಿದೆ. ಶ್ರೀಗಳ ಮನಸ್ಸು ಕೆಡಿಸಿದ್ದಾರೆ. ಈ ಉನ್ನತ ಮಟ್ಟದ ಸಮಿತಿ ರಚನೆ ಲಿಂ. ತೋಂಟದ ಸಿದ್ದಲಿಂಗ ಶ್ರೀಗಳ ಕುತಂತ್ರವಾಗಿದೆ. ಮಠದ ಆಸ್ತಿ ನಾಶಕ್ಕೆ ಅವರೇ ಕಾರಣರಾಗಿದ್ದಾರೆ. ನನ್ನನ್ನು ಉತ್ತರಾಧಿಕಾರಿ ಸ್ಥಾನದಿಂದ ಹೊರ ಹಾಕುವಲ್ಲಿ ಅವರ ಪಾತ್ರವಿದೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.