ಪಂಚಮಸಾಲಿ ಶ್ರೀ ಬಗ್ಗೆ ಹಗುರ ಮಾತು: ಸಭೆಗೆ ತಡೆಯೊಡ್ಡಿ ಪ್ರತಿಭಟನೆ
Team Udayavani, Oct 15, 2022, 12:42 PM IST
ಹುಬ್ಬಳ್ಳಿ: ಪಂಚಮಸಾಲಿ ಸಮಾಜ ಹಾಗೂ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಹಗುರವಾಗಿ ಮಾತನಾಡಿದ್ದಾರೆ ಎಂದು ಪಂಚಮಸಾಲಿ ಸಮಾಜದ ಮುಖಂಡರು ಕಾಯಕ ಸಮಾಜಗಳ ಚಿಂತನ ಮಂಥನ ಸಭೆಗೆ ತಡೆಯೊಡ್ಡಿ ಪ್ರತಿಭಟನೆ ನಡೆಸಿದರು.
ಇಲ್ಲಿನ ಜೆ.ಸಿ.ನಗರದ ಅಕ್ಕನಬಳಗ ಸಭಾಂಗಣದ ಮುಂದೆ ಪ್ರತಿಭಟನೆ ನಡೆಸಿ ಕಾಯಕ ಸಮಾಜಗಳ ಒಕ್ಕೂಟದ ಅಧ್ಯಕ್ಷ ಹಾಗೂ ವಿಧಾನ ಪರಿಷತ್ತು ಮಾಜಿ ಸದಸ್ಯ ಪುಟ್ಟಸಿದ್ದಶೆಟ್ಟಿ ವಿರುದ್ಧ ಘೋಷಣೆ ಕೂಗಿದರು. ಕೂಡಲೇ ಅವರನ್ನು ಕರೆಯಿಸಿ ಸಮಾಜದ ಹಾಗೂ ಶ್ರೀಗಳಲ್ಲಿ ಬಹಿರಂಗ ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದರು. ಪುಟ್ಟಸಿದ್ದಶೆಟ್ಟಿ ಕಾರ್ಯಕ್ರಮಕ್ಕೆ ಆಗಮಿಸಿಲ್ಲ ಎಂದು ಒಕ್ಕೂಟದ ಹಿರಿಯರು ಪ್ರತಿಭಟನಾಕಾರರಿಗೆ ತಿಳಿಸಿ ಅವರ ಪರವಾಗಿ ಕ್ಷಮೆ ಕೇಳುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಪಂಚಮಸಾಲಿ ಸಮಾಜದ ಪ್ರಮುಖರಿಬ್ಬರಿಗೆ ಅವಕಾಶ ನೀಡಬೇಕು. ಕಾರ್ಯಕ್ರಮದಲ್ಲಿ ಸಮಾಜದ ವಿರುದ್ಧ ಮಾತನಾಡಬಾರದು ಎನ್ನುವ ಷರತ್ತಿನ ಮೇಲೆ ಕಾರ್ಯಕ್ರಮಕ್ಕೆ ಅವಕಾಶ ನೀಡಿದರು.
ಇದರ ಮಧ್ಯೆ ಕಿಡಿಗೇಡಿಗಳು ಕಾರ್ಯಕ್ರಮದ ವೇದಿಕೆ ಮೇಲೆ ಹಾಕಿದ್ದ ಬ್ಯಾನರ್ ಹರಿದು ಕುರ್ಚಿಗಳನ್ನು ಚಲ್ಲಾಪಿಲ್ಲಿಯಾಗಿ ಬೀಸಾಡಿದ ಘಟನೆ ನಡೆಯಿತು. ಇಂತಹ ಅವಘಡ ನಡೆಯಬಹುದು ಎನ್ನುವ ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಯಕ್ರಮಕ್ಕೆ ಹಾಗೂ ಸಭಾಂಗಣದ ಸುತ್ತಲಿನ ರಸ್ತೆಯಲ್ಲಿ ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿತ್ತು. ಇದರ ಮಧ್ಯೆಯೂ ಮಹಡಿ ಮೇಲಿನ ಸಭಾಂಗಣಕ್ಕೆ ನುಗ್ಗಿದ ಕಿಡಿಗೇಡಿಗಳು ಬ್ಯಾನರ್ ಹರಿದು ಹಾಕಿದ ಘಟನೆ ನಡೆಯಿತು. ಇದರಿಂದ ಒಕ್ಕೂಟದ ಪದಾಧಿಕಾರಿಗಳು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಮಧ್ಯಪ್ರವೇಶಿಸಿ ಕಾರ್ಯಕ್ರಮಕ್ಕೆ ರಕ್ಷಣೆ ನೀಡುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆರಂಭಿಸಿದ ಘಟನೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
MUST WATCH
ಹೊಸ ಸೇರ್ಪಡೆ
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ
ನಮ್ಮ ವಿರುದ್ಧ ಷಡ್ಯಂತ್ರ: ಎಚ್.ಡಿ. ರೇವಣ್ಣ