ಶಿಕ್ಷಕಿಯರ ತರಬೇತಿ ಕೇಂದ್ರಕ್ಕೆ ಬೀಗ; ಸರ್ಕಾರಿ ಆದೇಶ ಸರಿಯಲ್ಲ
Team Udayavani, May 5, 2019, 11:17 AM IST
ಧಾರವಾಡ: ಶತಮಾನ ಪೂರೈಸಿದ ಶಿಕ್ಷಕಿಯರ ತರಬೇತಿ ಕೇಂದ್ರಕ್ಕೆ ಬೀಗ ಹಾಕುವಂತೆ ಸರ್ಕಾರ ಆದೇಶ ಹೊರಡಿಸಿರುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
ನಗರದ ಶಿಕ್ಷಕಿಯರ ತರಬೇತಿ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಧಾರವಾಡಿಗರ ಭಾವನೆಯಾಗಿದೆ. ಸಂಖ್ಯೆ ಕಡಿಮೆಯಾಗಿದೆಯೆಂದು ತರಬೇತಿ ಕೇಂದ್ರ ಮುಚ್ಚಲು ಸರ್ಕಾರ ಆದೇಶ ನೀಡಿದ್ದು, ಆದೇಶವನ್ನು ಶೀಘ್ರವೇ ಹಿಂಪಡೆಯುವಂತೆ ಮುಖ್ಯಮಂತ್ರಿಯವರನ್ನು ಒತ್ತಾಯಿಸಲಾಗುವುದು.
ವಿದ್ಯಾಕಾಶಿಯ ಮಹತ್ವದ ತರಬೇತಿ ಸಂಸ್ಥೆ ಇದಾಗಿದ್ದು, 11 ಎಕರೆ ವಿಸ್ತಾರ ಜಾಗ ಹೊಂದಿದೆ. ಮಹಿಳೆಯರ ವಸತಿ ನಿಲಯ, ವಿವಿಧ ರೀತಿಯ ಪರೀಕ್ಷೆ ನಡೆಸಲು ಸಹಾಯಕಾರಿಯಾಗಿದೆ. ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಬ್ರಿಟಿಷ್ ಕಾಲದಲ್ಲಿ ನಿರ್ಮಿಸಲಾದ ಪಾರಂಪರಿಕವಾದ ಕಟ್ಟಡ ನೋಡಲು ಸಿಗಲ್ಲ. ಇದು ಶಿಕ್ಷಣ ಸಂಸ್ಥೆಗೆ ಸೂಕ್ತವಾದ ಜಾಗವಾಗಿದೆ ಎಂದರು.
ಮಕ್ಕಳು ಕಡಿಮೆಯಾಗಿದ್ದಾರೆಂಬ ಕಾರಣಕ್ಕೆ ಬೀಗ ಹಾಕುವ ನಿರ್ಧಾರಕ್ಕೆ ಬರದೇ ಮಕ್ಕಳನ್ನು ಕೇಂದ್ರದತ್ತ ಸೆಳೆಯಲು ಯೋಜನೆಗಳನ್ನು ರೂಪಿಸಬೇಕು. ಒಂದು ವೇಳೆ ಸರ್ಕಾರ ಮುಚ್ಚಲು ಮುಂದಾದರೆ ಧಾರವಾಡದ ಶಿಕ್ಷಣ ಪ್ರೇಮಿಗಳು ಒಂದಾಗಿ ಉಗ್ರ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದರು.
ಬರಗಾಲದ ಸಂಕಷ್ಟದ ಸನ್ನಿವೇಶದಲ್ಲಿ ಮುಖ್ಯಮಂತ್ರಿಗಳು ಹೋಮ, ಹವನವೆಂದು ಸುತ್ತಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆಗೆ ಉತ್ತರಿಸಿದ ಹೊರಟ್ಟಿ, ನಾಲ್ಕೈದು ದಿನಗಳಿಂದ ಆರೋಗ್ಯ ಸರಿ ಇಲ್ಲ ಕಾರಣ ಚಿಕಿತ್ಸೆಗೆಂದು ಹೋಗಿದ್ದಾರೆ. ಆರೋಗ್ಯ ಬಗ್ಗೆ ಗಮನ ಹರಿಸುವುದು ಅತೀ ಮುಖ್ಯ. ಹೀಗಾಗಿ ನಾಳೆ ಬಂದು ಉಳಿದ ಕೆಲಸಗಳಲ್ಲಿ ಕಾರ್ಯಪ್ರವೃತ್ತರಾಗಲಿದ್ದಾರೆ ಎಂದರು.
ಮೈತ್ರಿ ಸರ್ಕಾರದಲ್ಲಿರುವ ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳುವ ಮೂಲಕ ಸಮರ್ಥವಾದ ಆಡಳಿತ ನೀಡಿದ್ದೇವೆ. ಲೋಕಸಭೆ ಚುನಾವಣೆಯಲ್ಲೂ ಮೈತ್ರಿ ಮಾಡಿಕೊಂಡಿದ್ದು, ಅದರಂತೆ ಸ್ಥಳೀಯ ಚುನಾವಣೆಯಲ್ಲೂ ಮುಂದುವರಿಯಲಿ. ಈ ವಿಷಯದಲ್ಲಿ ತಲೆಗೊಬ್ಬರು ಒಂದರಂತೆ ಮಾತನಾಡುವುದು ಸರಿಯಲ್ಲ, ಬಾಯಿಗಳಿಗೆ ಬೀಗ ಹಾಕಿಕೊಂಡು ಕೆಲಸ ಮಾಡಬೇಕು. ಇನ್ನು ಕೋಮುವಾದಿ ಪಕ್ಷ ಆಡಳಿತಕ್ಕೆ ಬರಬಾರದೆನ್ನುವ ದೃಷ್ಟಿಯಿಂದ ಮೈತ್ರಿ ಸರ್ಕಾರ ರಚಿಸಲಾಗಿದ್ದು, ಒಂದು ವೇಳೆ ಮೈತ್ರಿ ಸರ್ಕಾರ ಮುರಿದು ಬಿದ್ದರೆ ನಗೆಪಾಟಲಿಗೆ ಬಲಿಯಾಗಬೇಕಾಗುತ್ತದೆ.
∙ ಬಸವರಾಜ ಹೊರಟ್ಟಿ, ವಿದಾನ ಪರಿಷತ್ ಮಾಜಿ ಸಭಾಪತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ