ಲೋಕ ಅದಾಲತ್; 1793 ಕೇಸ್ ರಾಜಿ
38 ನ್ಯಾಯಪೀಠಗಳಲ್ಲಿ ನಡೆಯಿತು ಸಂಧಾನ
Team Udayavani, Jul 14, 2019, 9:28 AM IST
ಧಾರವಾಡ: ಜಿಲ್ಲಾ ನ್ಯಾಯಾಲಯದಲ್ಲಿ ರಾಜಿ ಮೂಲಕ ಪ್ರಕರಣ ಇತ್ಯರ್ಥಪಡಿಸಲಾಯಿತು.
ಧಾರವಾಡ: ಜಿಲ್ಲೆಯಲ್ಲಿ ಶನಿವಾರ ಜರುಗಿದ ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ 1793 ಪ್ರಕರಣಗಳಲ್ಲಿ ರಾಜಿ ಸಂಧಾನ ಮಾಡಿಸಲಾಗಿದ್ದು, ಸುಮಾರು 11,33,27,528 ರೂ. ಪರಿಹಾರ ಚೆಕ್ ವಿತರಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಈಶಪ್ಪ ಕೆ. ಭೂತೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ಕಕ್ಷಿದಾರರ ಒಪ್ಪಿಗೆ ಮೇರೆಗೆ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ ತೀರ್ಪು ಪ್ರಕಟಿಸಲು ಧಾರವಾಡದಲ್ಲಿ 14, ಹುಬ್ಬಳ್ಳಿಯಲ್ಲಿ 18 ಮತ್ತು ಕಲಘಟಗಿ 2, ಕುಂದಗೋಳ 2, ನವಲಗುಂದ 2 ಸೇರಿದಂತೆ ವಿವಿಧ ತಾಲೂಕುಗಳಲ್ಲಿರುವ ಎಲ್ಲ ನ್ಯಾಯಾಲಯಗಳಲ್ಲಿ ಒಟ್ಟು 38 ನ್ಯಾಯಪೀಠಗಳನ್ನು ಸ್ಥಾಪಿಸಲಾಗಿತ್ತು. ಅದರಂತೆ 38 ಜನ ನ್ಯಾಯಾಧಿಧೀಶರು ಕಾರ್ಯ ನಿರ್ವಹಿಸಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿದ್ದಾರೆ ಎಂದರು.
ಎಲ್ಲೆಲ್ಲಿ ಎಷ್ಟೆಷ್ಟು ಪ್ರಕರಣ ಇತ್ಯರ್ಥ?: ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ 704, ಹುಬ್ಬಳ್ಳಿ ನ್ಯಾಯಾಲಯಗಳಲ್ಲಿ 834, ನವಲಗುಂದ ನ್ಯಾಯಾಲಯಗಳಲ್ಲಿ 139, ಕಲಘಟಗಿ ನ್ಯಾಯಾಲಯಗಳಲ್ಲಿ 70 ಮತ್ತು ಕುಂದಗೊಳ ನ್ಯಾಯಾಲಯಗಳಲ್ಲಿ 46 ಪ್ರಕರಣಗಳು ರಾಜಿ ಸಂಧಾನದಲ್ಲಿ ಮುಕ್ತಾಯಗೊಂಡಿವೆ. ಈ ಪೈಕಿ ವಿವಿಧ ಬ್ಯಾಂಕ್ ವಸೂಲಾತಿಯ 213 ಪ್ರಕರಣಗಳಲ್ಲಿ 28,85,557 ರೂ., ವಿದ್ಯುತ್ ಬಾಕಿ ವಸೂಲಾತಿಯ ಆರು ಪ್ರಕರಣಗಳಲ್ಲಿ 10,700 ರೂ., ಮೋಟಾರ್ ವಾಹನ ಅಪಘಾತ ವಿಮೆಯ 142 ಪ್ರಕರಣಗಳಲ್ಲಿ 3,53,47000 ರೂ., ಚೆಕ್ ಅಮಾನ್ಯ ಕುರಿತ 558 ಪ್ರಕರಣಗಳಲ್ಲಿ 2,93,85,907 ರೂ., 418 ದಿವಾನಿ ಪ್ರಕರಣಗಳಲ್ಲಿ 1,95,94,841 ರೂ., 493 ಅಪರಾಧ ಪ್ರಕರಣಗಳಲ್ಲಿ 3,16,000 ರೂ. ಮತ್ತು ಕೌಟುಂಬಿಕ ನ್ಯಾಯಾಲಯದ 105 ಪ್ರಕರಣಗಳು ಸೇರಿದಂತೆ ಒಟ್ಟು 1793 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ