ಲೂಟಿಕೋರ ಬಿಜೆಪಿಗೆ ಅಧಿಕಾರ ಬೇಡ


Team Udayavani, May 18, 2019, 9:48 AM IST

hubali tdy 1

ಹುಬ್ಬಳ್ಳಿ: ಸಾರ್ವಜನಿಕ ಹಣ ಲೂಟಿ ಹೊಡೆಯುವ ಬಿಜೆಪಿಗೆ ಯಾವುದೇ ಕಾರಣಕ್ಕೂ ಅಧಿಕಾರ ನೀಡಬಾರದು. ಈ ಕ್ಷೇತ್ರದ ಅಪರೂಪದ ಜನಸೇವಕ ಸಿ.ಎಸ್‌. ಶಿವಳ್ಳಿ ಅವರ ಆತ್ಮಕ್ಕೆ ಶಾಂತಿ ಕೋರುವ ನಿಟ್ಟಿನಲ್ಲಿ ಕ್ಷೇತ್ರದ ಮತದಾರರು ಮೈತ್ರಿ ಅಭ್ಯರ್ಥಿ ಕುಸುಮಾವತಿ ಅವರಿಗೆ ಮತ ನೀಡುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.

ಕುಂದಗೋಳದ ಗಾಂಧಿ ವೃತ್ತದಲ್ಲಿ ಶುಕ್ರವಾರ ನಡೆದ ಮೈತ್ರಿ ಅಭ್ಯರ್ಥಿ ಪರ ಪ್ರಚಾರಾರ್ಥ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಮಿಸ್ಟರ್‌ ಬಿ.ಎಸ್‌.ಯಡಿಯೂರಪ್ಪ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಈ ರಾಜ್ಯವನ್ನು ಲೂಟಿ ಹೊಡೆದು ಜೈಲಿಗೆ ಹೋಗಿರುವ ಸಂಗತಿ ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ಮತ್ತೂಮ್ಮೆ ವಾಮಮಾರ್ಗದ ಮೂಲಕ ಮುಖ್ಯಮಂತ್ರಿಯಾಗಲು ಹವಣಿಸುತ್ತಿದ್ದಾರೆ. ಇದಕ್ಕೆ ಕುಂದಗೋಳದ ಜನತೆ ಅವಕಾಶ ನೀಡಬಾರದು. ಬಿಜೆಪಿ ಅಭ್ಯರ್ಥಿ ಎಸ್‌.ಐ. ಚಿಕ್ಕನಗೌಡರ ಗೆದ್ದಾಗ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಕ್ಷೇತ್ರಕ್ಕೆ ತರಲಿಲ್ಲ. ಇಂತಹ ವ್ಯಕ್ತಿಯನ್ನು ತಿರಸ್ಕರಿಸಬೇಕೆಂದರು.

ಮೋದಿಗೆ ತಕ್ಕ ಪಾಠ: ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿದ್ದು, ಅಚ್ಛೇ ದಿನ್‌ ಆಯೇಗಾ ಎಂದಿದ್ದ ನರೇಂದ್ರ ಮೋದಿಗೆ ತಕ್ಕ ಪಾಠ ಕಲಿಸುವ ಕಾಲ ಬಂದಿದೆ. ಅಡುಗೆ ಅನಿಲ ನೀಡುವ ಮೂಲಕ ಸೀಮೆಎಣ್ಣೆ ಪೂರೈಕೆ ಸ್ಥಗಿತಗೊಳಿಸಿದ್ದಾರೆ. ಗ್ಯಾಸ್‌ ಬೆಲೆ 900 ರೂ.ಗೆ ಹೆಚ್ಚಳವಾಗಿದೆ. ಇದರಂತೆ ಎಲ್ಲ ವಸ್ತುಗಳು ಬೆಲೆ ಹೆಚ್ಚಾಗಿದ್ದು, ಬಿಜೆಪಿ ಬಡವರ ವಿರೋಧಿ ಪಕ್ಷ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಅಧಿಕಾರಕ್ಕೆ ಬರುವಾಗ ನೀಡಿದ್ದ ಯಾವುದೇ ಭರವಸೆ ಈಡೇರಿಸದೆ ಕೇಂದ್ರ ಸರಕಾರ ಜನವಿರೋಧಿ ಹಾಗೂ ಸುಳ್ಳಿನ ಸರಕಾರವಾಗಿದೆ ಎಂದು ವಾಗ್ಧಾಳಿ ನಡೆಸಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಮಾತನಾಡಿ, ಶಿವಳ್ಳಿ ಅವರು ಅರ್ಧಕ್ಕೆ ಬಿಟ್ಟ ಯೋಜನೆಗಳು ಪೂರ್ಣಗೊಳಿಸುವ ನಿಟ್ಟಿನಲ್ಲಿ ಕುಸುಮಾವತಿ ಅವರಿಗೆ ಕ್ಷೇತ್ರದ ಜನತೆ ಆಶೀರ್ವಾದ ಮಾಡಬೇಕು. ಸುಳ್ಳಿನ ಸರದಾರರ ಪಕ್ಷವಾದ ಬಿಜೆಪಿಗೆ ಈ ಕ್ಷೇತ್ರದ ಜನರು ಉತ್ತಮ ಸಂದೇಶ ನೀಡಬೇಕು ಎಂದು ಹೇಳಿದರು.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ ಮಾತನಾಡಿ, ಕಾಂಗ್ರೆಸ್‌ ತಾನು ಮಾಡಿದ ಅಭಿವೃದ್ಧಿ ಆಧಾರದ ಮೇಲೆ ಮತ ಕೇಳುತ್ತಿದ್ದೆ. ಆದರೆ ಬಿಜೆಪಿ ಸೈನಿಕರು, ಧರ್ಮ, ಜಾತಿ ಹಾಗೂ ಭಾವನಾತ್ಮಕ ವಿಚಾರಗಳ ಮೇಲೆ ಮತಯಾಚನೆ ಮಾಡುತ್ತಿರುವುದು ನಾಚಿಕೆಗೇಡು ಎಂದರು.

ಸಚಿವ ಯು.ಟಿ. ಖಾದರ್‌ ಮಾತನಾಡಿ, ಗಾಂಧಿಯವರನ್ನು ಕಗ್ಗೊಲೆ ಮಾಡಿದ ನಾಥುರಾಮ್‌ ಗೋಡ್ಸೆಯನ್ನು ದೇಶಪ್ರೇಮಿ ಎನ್ನುವ ಮೂಲಕ ಬಿಜೆಪಿಯವರು ತಮ್ಮ ಸಂಸ್ಕೃತಿ ಎಂತಹದ್ದು ಎಂಬುದನ್ನು ಬಹಿರಂಗ ಪಡಿಸಿದ್ದಾರೆ. ಸಂಸದ ನಳಿನಕುಮಾರ ಕಟೀಲು ಹೇಳಿಕೆಗೆ ಪ್ರಜ್ಞಾವಂತ ಸಮಾಜ ತಲೆತಗ್ಗಿಸುವಂತಾಗಿದೆ. ದೇಶದ್ರೋಹಿಗಳನ್ನು ಹೊಗಳುವ ಬಿಜೆಪಿಗೆ ಜನರೇ ತಕ್ಕ ಉತ್ತರ ನೀಡಬೇಕು ಎಂದು ಹೇಳಿದರು.

ಶಾಸಕ ಬಿ.ಸಿ. ಪಾಟೀಲ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್‌.ಎಚ್. ಕೋನರಡ್ಡಿ, ಮುಖಂಡರಾದ ಡಿ.ಕೆ. ಸುರೇಶ, ಡಾ| ಪುಷ್ಪಾ ಅಮರನಾಥ, ಮುನಿರತ್ನ, ವಿ.ಎಸ್‌. ಉಗ್ರಪ್ಪ, ಹಜರತ್‌ ಅಲಿ ಜೋಡಮನಿ, ಶಾಕೀರ ಸನದಿ ಇನ್ನಿತರರಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.