ನ್ಯಾಯಕ್ಕಾಗಿ ಎದುರು ನೋಡುತ್ತಿದ್ದೇವೆ
Team Udayavani, Sep 17, 2018, 6:20 AM IST
ಧಾರವಾಡ: “ನಮ್ಮ ತಂದೆ ಡಾ| ಎಂ.ಎಂ. ಕಲಬುರ್ಗಿ ಸಾವಿಗೆ ನ್ಯಾಯ ಸಿಗುತ್ತದೆ ಎಂಬ ಆಸೆಯನ್ನೇ ಕೈಬಿಟ್ಟು ಕುಳಿತಿದ್ದೆವು. ಆದರೆ, ಕಳೆದ ಮೂರು ತಿಂಗಳಿನಿಂದ ಪ್ರಕರಣದಲ್ಲಿ ಪ್ರಗತಿ ಕಾಣುತ್ತಿದ್ದು, ನ್ಯಾಯಕ್ಕಾಗಿ ಎದುರು
ನೋಡುತ್ತಿದ್ದೇವೆ’ ಎಂದು ಶ್ರೀವಿಜಯ ಕಲಬುರ್ಗಿ ಹೇಳಿದರು.
ಕಲ್ಯಾಣನಗರದ ಸ್ವಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಂದೆ ಕಲಬುರ್ಗಿ ಅವರ ಹತ್ಯೆಯಾದಾಗಿನಿಂದ ಯಾವ ರೀತಿ ತನಿಖೆ ನಡೆಯುತ್ತಿದೆ? ಏನಾಗುತ್ತಿದೆ ಎಂಬುದೇ ನಮಗೆ ಗೊತ್ತಾಗುತ್ತಿರಲಿಲ್ಲ. ಕಳೆದ ಎರಡೂವರೆ ವರ್ಷಗಳಿಂದಲೂ ಪ್ರಕರಣದ ತನಿಖೆ ಬಗ್ಗೆ ನಮಗೆ ಏನೂ ಗೊತ್ತಿರಲಿಲ್ಲ. ಆದರೆ, ಈಗ ಮೂರು ತಿಂಗಳಿನಿಂದ ನಡೆಯುತ್ತಿರುವ ತನಿಖೆಯಲ್ಲಿ ಪ್ರಗತಿ ಕಾಣುತ್ತಿದೆ ಎಂದರು.
ನಮ್ಮ ತಂದೆ ಸಾವಿಗೆ ನ್ಯಾಯ ಸಿಗುತ್ತದೆ ಎಂಬ ಆಸೆಯನ್ನು ಎರಡೂವರೆ ವರ್ಷಗಳಿಂದ ನಾವು ಬಿಟ್ಟಿದ್ದೆವು.ಆದರೆ, ಈಗ ಸಿಐಡಿ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ತೆಗೆದುಕೊಂಡಿರುವುದು ಮಾಧ್ಯಮಗಳ ಮುಖಾಂತರ ಗೊತ್ತಾಗಿದೆ. ಸದ್ಯ ಸಿಐಡಿ ಪೊಲೀಸರು ವಶಕ್ಕೆ ಪಡೆದಿರುವ ಇಬ್ಬರು ಆರೋಪಿತರ ಮುಖವನ್ನು ನಾವು ನೋಡಿಲ್ಲ.
ತನಿಖೆ ನಂತರ ಪೊಲೀಸರು ಅವರನ್ನು ನಮಗೆ ತೋರಿಸಬಹುದು. ಈ ಬಗ್ಗೆ ಸಿಐಡಿ ಅಧಿಕಾರಿಗಳು ಏನೂ ಮಾಹಿತಿ ನೀಡಿಲ್ಲ. ನಮಗೆ ಪೊಲೀಸ್ ಇಲಾಖೆ ಹಾಗೂ ನ್ಯಾಯಾಂಗದ ಮೇಲೆ ನಂಬಿಕೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!
ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼKGF -3ʼ.. ಬಿಗ್ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ
Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”