ಮಹದಾಯಿ: ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹಿಸಿ ಪ್ರತಿಭಟನೆ
Team Udayavani, Aug 19, 2017, 12:09 PM IST
ಹುಬ್ಬಳ್ಳಿ: ಮಹದಾಯಿ ಹಾಗೂ ಕಳಸಾ ಬಂಡೂರಿ ಯೋಜನೆ ಹಿನ್ನೆಡೆಗೆ ಎರಡು ರಾಷ್ಟ್ರೀಯ ಪಕ್ಷಗಳು ಕಾರಣವಾಗಿದ್ದು, ಕೂಡಲೇ ಪ್ರಧಾನಿ ಮಧ್ಯಸ್ಥಿಕೆ ವಹಿಸುವಂತೆ ಒತ್ತಾಯಿಸಿ ಕರವೇ ಕಾರ್ಯಕರ್ತರು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಮಹದಾಯಿ ಯೋಜನೆಗೆ ಹಿನ್ನೆಡೆಯಾಗಿದೆ. 2003ರಲ್ಲಿ ಪ್ರಧಾನಿಯಾಗಿದ್ದ ಮನಮೋಹನ್ಸಿಂಗ್ ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡಿದ್ದರು. ಆದರೆ, ಎಸ್.ಎಂ. ಕೃಷ್ಣ ನೇತೃತ್ವದ ರಾಜ್ಯ ಸರ್ಕಾರ ಯೋಜನೆಯನ್ನು ಲಘುವಾಗಿ ಪರಿಗಣಿಸಿದ ಪರಿಣಾಮ ಇಂದು ಇಂತಹ ಪರಿಸ್ಥಿತಿ ಬಂದೊದಗಿದೆ ಎಂದು ಆರೋಪಿಸಿದರು.
ಕರವೇ ಅಧ್ಯಕ್ಷ ಅಮೃತ ಇಜಾರಿ ಮಾತನಾಡಿ, ದಕ್ಷಿಣ ಕರ್ನಾಟಕದಲ್ಲಿ ಯಾವುದೇ ಸಮಸ್ಯೆ ಉದ್ಭವಿಸಿದರೂ ಎಲ್ಲ ಸಂಸದರು ಒಟ್ಟಾಗಿ ಕೇಂದ್ರದ ಮೇಲೆ ಒತ್ತಡ ಹಾಕುವ ಕೆಲಸಕ್ಕೆ ಮುಂದಾಗುತ್ತಾರೆ. ಆದರೆ, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಯಾವ ಜನಪ್ರತಿನಿಧಿಗಳು ಸ್ಪಂದನೆ ತೋರುವುದಿಲ್ಲ.
ಯೋಜನೆಯನ್ನು ರಾಜಕಾರಣಕ್ಕೆ ಬಳಕೆ ಮಾಡಿಕೊಳ್ಳುತ್ತಿರುವುದರಿಂದ ಯಶಸ್ಸು ದೊರೆಯುತ್ತಿಲ್ಲ. ಜನಪ್ರತಿನಿಧಿಗಳ ಕುತಂತ್ರಕ್ಕೆ ಹೋರಾಟಗಾರರು ಹಾಗೂ ಜನರು ರೋಸಿ ಹೋಗಿದ್ದು, ಉಗ್ರ ಹೋರಾಟಕ್ಕೆ ಮುಂದಾಗುವ ಕಾಲ ಹತ್ತಿರ ಬಂದಿದೆ.
ಸಮಸ್ಯೆ ಬಗೆಹರಿಸುವಲ್ಲಿ ಕಾಂಗ್ರೆಸ್-ಬಿಜೆಪಿ ಪ್ರಯತ್ನ ಮಾಡದಿದ್ದರೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಪ್ಪು ಪಟ್ಟಿ ಪ್ರದರ್ಶನ ಮಾಡುವ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಸಿದರು. ರೈತ ಮುಖಂಡ ಶಿವಣ್ಣ ಹುಬ್ಬಳ್ಳಿ ಮಾತನಾಡಿ, ಕುಡಿಯಲು ನೀರು ಕೇಳಿದರೂ ರೈತರ ಮೇಲೆ ಕೇಸು ದಾಖಲಿಸಿ ಜೈಲಿಗೆ ಕಳುಹಿಸುವ ಕೆಲಸ ನಡೆಯುತ್ತಿದೆ.
ಕೇವಲ ಇಬ್ಬರು ಸಂಸದರಿರುವ ಗೋವಾ ಪರವಾಗಿ ಕೇಂದ್ರ ಕೆಲಸ ಮಾಡುತ್ತಿದೆ. 28 ಸಂಸದರಿದ್ದರೂ ಕೇಂದ್ರದ ಮೇಲೆ ಒತ್ತಡ ಹೇರುವ ಧೈರ್ಯ ಒಬ್ಬ ಸಂಸದರಿಗೂ ಇಲ್ಲದಿರುವುದು ವಿಪರ್ಯಾಸ. ಇಂತಹ ಜನಪ್ರತಿನಿಧಿಗಳಿಗೆ ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಾಗುವುದು ಎಂದರು. ಗೋಪಾಲ ಪಾಟೀಲ, ವಿನೋದ ಕ್ಯಾರಕಟ್ಟಿ, ಅಶೋಕ ಹಾದಿಮನಿ, ಸಾಗರ ಗಾಯಕವಾಡ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ