ಮಹದಾಯಿ: ಬಿಎಸ್‌ವೈ ಬದಲು ಪ್ರಧಾನಿ ಮಧ್ಯಸ್ಥಿಕೆಗೆ ಹಕ್ಕೊತ್ತಾಯ


Team Udayavani, Aug 7, 2017, 11:25 AM IST

hub2.jpg

ಹುಬ್ಬಳ್ಳಿ: ಮಹದಾಯಿ ನೀರು ಹಂಚಿಕೆ ವಿಷಯವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಗೋವಾ ಸಿಎಂ ಬದಲು ಪ್ರಧಾನಿ ಮೋದಿ ಭೇಟಿ ಮಾಡಿ ಮಧ್ಯಸ್ಥಿಕೆ ವಹಿಸಿ ಪರಿಹರಿಸಲು ಮನವರಿಕೆ ಮಾಡಬೇಕೆಂದು ಮಹದಾಯಿ, ಕಳಸಾ-ಬಂಡೂರಿ ಹೋರಾಟ ಸಮನ್ವಯ ಸಮಿತಿ ಒತ್ತಾಯಿಸಿದೆ. 

ರವಿವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಮುಖಂಡರಾದ ಮಹೇಶ ಪತ್ತಾರ, ವಿಕಾಸ ಸೊಪ್ಪಿನ, ಮಹದಾಯಿ ನೀರು ಹಂಚಿಕೆ ವಿಷಯವಾಗಿ ಗೋವಾ ಸಿಎಂ ಮನೋಹರ ಪರ್ರಿಕರ್‌ ಅಲ್ಲಿನ ವಿಧಾನಸಭೆಯಲ್ಲಿ ಮಹದಾಯಿ ವಿವಾದಕ್ಕೆ ಪರಿಹಾರವಿಲ್ಲ ಹಾಗೂ ಪಕ್ಷದ ನೆಲೆಯಲ್ಲಿ ಮಾತುಕತೆಗಳ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿ ಹೇಳಿದ್ದಾರೆ.

ಆದರೂ ರಾಜ್ಯದ ರಾಜಕೀಯ ನಾಯಕರು, ಸರಕಾರ ಸುಮ್ಮನಿರುವುದು ಏಕೆ. ಇಂತಹ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಸಂಸದರು, ರೈತ ಮುಖಂಡರೊಂದಿಗೆ ಪರ್ರಿಕರ್‌ ಭೇಟಿ ಮಾಡಿ ಮಾತುಕತೆ ನಡೆಸುವುದರಲ್ಲಿ ಅರ್ಥವಿಲ್ಲ. ಬದಲಿಗೆ ಪ್ರಧಾನಿ ಭೇಟಿ ಮಾಡಿ ರಾಜ್ಯದ ಮಹದಾಯಿ ನೀರಿನ ಹಕ್ಕು, ಅಗತ್ಯತೆ ಕುರಿತು ಮನವರಿಕೆ ಮಾಡಿ, ಮಧ್ಯಸ್ಥಿಕೆ ವಹಿಸುವಂತೆ  ಆಗ್ರಹಿಸುವುದೇ ಸೂಕ್ತ ಎಂದರು.  

ಮಹದಾಯಿ ನೀರು ಹಂಚಿಕೆ ವಿಷಯವಾಗಿ ಈ ಭಾಗದಲ್ಲಿ 2 ವರ್ಷಗಳಿಂದ ಹೋರಾಟ ನಡೆಯುತ್ತಿದ್ದರೂ ಉಭಯ ಸರಕಾರಗಳು ಸ್ಪಂದಿಸುತ್ತಿಲ್ಲ. ಬಿಜೆಪಿ ಸಂಸದರು, ಶಾಸಕರು ಕೂಡ ಪ್ರಧಾನಿ ಬಳಿ ಚಕಾರವೆತ್ತುತ್ತಿಲ್ಲ. ಎಲ್ಲ ಪಕ್ಷದವರು ಇದರಲ್ಲಿ ಮತ ಬ್ಯಾಂಕ್‌ ಮತ್ತು ರಾಜಕಾರಣ ಮಾಡುತ್ತಿದ್ದಾರೆ ಎಂದರು. 

ಪಕ್ಷಗಳಿಗೆ ರಾಜಕೀಯ ಹೊಡೆತ: ರಾಜ್ಯ ಸರಕಾರ ಮಹದಾಯಿ ಯೋಜನೆ ಸರಿಯಾಗಿದೆ ಎಂದು ಸಮರ್ಥನೆ ಮಾಡಿಕೊಳ್ಳುತ್ತಿಲ್ಲ. ಅದು ನ್ಯಾಯಾಧೀಕರಣಕ್ಕೆ ನೀಡುತ್ತಿರುವ ಅಂಕಿ-ಸಂಖ್ಯೆಯೂ ಸರಿಯಾಗಿಲ್ಲ. ಆದ್ದರಿಂದ ಸಮಸ್ಯೆಗೆ ತಾರ್ಕಿಕ ಅಂತ್ಯ ಕಂಡುಕೊಳ್ಳುವ ನಿಟ್ಟಿನಲ್ಲಿ ಸಮಿತಿಯ 4-5 ಸದಸ್ಯರ ನಿಯೋಗ ವಾರದೊಳಗೆ ಜಲ ಸಂಪನ್ಮೂಲ ಇಲಾಖೆಯ ಹಾಲಿ ಮತ್ತು ಮಾಜಿ ಸಚಿವರು,

-ನೀರಾವರಿ ತಜ್ಞರು, ತಾಂತ್ರಿಕ ತಜ್ಞರು, ಕಾನೂನು ತಜ್ಞರು, ಮಹದಾಯಿ ಯೋಜನೆಯ ಪ್ರಮುಖರು, ರೈತ ಮುಖಂಡರು ಹಾಗೂ ಇದಕ್ಕೆ ಸಂಬಂಧಿಸಿದವರನ್ನು ಭೇಟಿ ಮಾಡಿ ಅವರಿಂದ ಮಾಹಿತಿ ಸಂಗ್ರಹಿಸಿ, ಹೋರಾಟದ ರೂಪರೇಷೆಗಳನ್ನು ಬದಲಿಸಲಾಗುವುದು.

ದೆಹಲಿಗೆ ತೆರಳಿ ಪ್ರತಿಭಟನೆ ನಡೆಸಲು ಚಿಂತನೆ ನಡೆಸಲಾಗುವುದು. ಇನ್ನೆರಡು ತಿಂಗಳಲ್ಲಿ ಎಲ್ಲ ಪಕ್ಷದವರಿಗೂ ರಾಜಕೀಯ ಹೊಡೆತ ಕೊಡಲಾಗುವುದು. ಮುಂದಿನ ದಿನಗಳಲ್ಲಿ ಮಹದಾಯಿ ಹೋರಾಟಕ್ಕೆ ಹೊಸ ಸ್ವರೂಪ ನೀಡಲಾಗುವುದು ಎಂದರು.  

ರಾಜ್ಯ ಸರಕಾರವು ಕಳಸಾ- ಬಂಡೂರಿ ತಿರುವು ಯೋಜನೆಯಲ್ಲಿ ಕೆಲವು ತಾಂತ್ರಿಕ ಮಾರ್ಪಾಡು ಮಾಡಬೇಕು. ಅದರಲ್ಲಿನ ನ್ಯೂನತೆಗಳನ್ನು ಸರಿಪಡಿಸಬೇಕು. ಮಹದಾಯಿ ನದಿ ನೀರು ಹರಿವಿಗೆ ಅಡ್ಡಲಾಗಿ ನಿರ್ಮಿಸಲಾದ ತಡೆಗೋಡೆ ತೆರವುಗೊಳಿಸಿದರೆ ರಾಜ್ಯಕ್ಕೆ ನೈಸರ್ಗಿಕವಾಗಿ ಅಂದಾಜು 3.5 ಟಿಎಂಸಿಯಷ್ಟು ನೀರು ಹರಿದು ಬರುತ್ತದೆ ಎಂದರು.

ಟಾಪ್ ನ್ಯೂಸ್

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

prlhad

Hubli; ರಾಜ್ಯ ಸರ್ಕಾರ ಸುಪ್ರೀಂ ಮೆಟ್ಟಿಲೇರಿದ್ದು ಖಂಡನೀಯ: ಪ್ರಹ್ಲಾದ ಜೋಶಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.