ಮಹಾರಾಷ್ಟ್ರ ಮಳೆಗೆ 14 ಸೇತುವೆ ಜಲಾವೃತ
Team Udayavani, Aug 2, 2019, 5:47 AM IST
ಚಿಕ್ಕೋಡಿ: ಕರ್ನಾಟಕ-ಮಹಾರಾಷ್ಟ್ರ ಸಂಪರ್ಕ ಕಲ್ಪಿಸುವ ಯಕ್ಸಂಬಾ-ಧಾನವಾಡ ಸೇತುವೆ ಜಲಾವೃತಗೊಂಡಿದೆ.
ಬೆಂಗಳೂರು/ಹುಬ್ಬಳ್ಳಿ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದ್ದು, ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಈ ಮಧ್ಯೆ, ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೃಷ್ಣಾ ಹಾಗೂ ಅದರ ಉಪನದಿಗಳಲ್ಲಿ ಪ್ರವಾಹ ಬಂದಿದ್ದು, ಬೆಳಗಾವಿ ಹಾಗೂ ಬಾಗಲಕೋಟೆ ಅಕ್ಷರಶಃ ನಲುಗಿ ಹೋಗಿದೆ.
ಗುರುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಬೆಳ್ತಂಗಡಿ, ಕದ್ರಾ, ಜಗಲ್ಬೇಟ್ ಮತ್ತು ಲೋಂಡಾದಲ್ಲಿ ರಾಜ್ಯದಲ್ಲಿಯೇ ಅಧಿಕ, ತಲಾ 5 ಸೆಂ.ಮೀ.ಮಳೆ ಸುರಿಯಿತು.
ಮಹಾರಾಷ್ಟ್ರದ ಕೊಯ್ನಾ, ವಾರಣಾ, ಮಹಾಬಳೇಶ್ವರ ಮತ್ತು ನವಜಾ ಪ್ರದೇಶದಲ್ಲಿ ಕಳೆದ 12 ಗಂಟೆಗಳಲ್ಲಿ 250 ಮಿ.ಮೀ.ಗಿಂತಲೂ ಹೆಚ್ಚಿನ ಮಳೆ ಸುರಿದಿದ್ದು, ಕೃಷ್ಣಾ, ದೂಧಗಂಗಾ, ವೇದಗಂಗಾ, ಘಟಪ್ರಭಾ, ಮಲಪ್ರಭಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. 14 ಸೇತುವೆಗಳು ಮುಳುಗಡೆಯಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಆಲಮಟ್ಟಿ, ನಾರಾಯಣಪೂರ ಜಲಾಶಯಗಳು ಭರ್ತಿಯಾಗಿವೆ.
ಕರ್ನಾಟಕ-ಮಹಾರಾಷ್ಟ್ರ ಸಂಪರ್ಕ ಕಲ್ಪಿಸುವ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಕ್ಸಂಬಾ- ದಾನವಾಡ ಸೇತುವೆ, ರಾಯಬಾಗ ತಾಲೂಕಿನ ಕುಡಚಿ, ಕಲ್ಲೋಳ-ಯಡೂರ, ದೂಧಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಾರದಗಾ-ಭೋಜ, ಸದಲಗಾ-ಬೋರ ಗಾಂವ, ಮಲಿಕವಾಡ-ದತ್ತವಾಡ, ವೇದಗಂಗಾ ನದಿಗೆ ಕಟ್ಟಿರುವ ಭೋಜವಾಡಿ-ಕುನ್ನೂರ, ಅಕ್ಕೋಳ-ಸಿದ್ನಾಳ, ಜತ್ರಾಟ-ಭಿವಸಿ ಸೇತುವೆಗಳು ಮುಳುಗಡೆಗೊಂಡು ಸಂಚಾರ ಕಡಿತಗೊಂಡಿದೆ.
ಇಂಗಳಿ ಗ್ರಾಮದ ತೋಟಪಟ್ಟಿ ಪ್ರದೇಶ ನಡುಗಡ್ಡೆ ಯಾಗಿದ್ದು, ಅಲ್ಲಿ ಸಿಲುಕಿಕೊಂಡಿದ್ದ 25 ಕುಟುಂಬಗಳನ್ನು ತಾಲೂಕಾಡಳಿತ ಸ್ಥಳಾಂತರಿಸಿದೆ. ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಗಜಾನನ ಕೋಳಿ ಎಂಬುವರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಸಂಪರ್ಕ ಕಡಿತ: ಹಿರಣ್ಯಕೇಶಿ ನದಿಯ ನೀರು ಧುಪ ದಾಳ ಜಲಾಶಯ ಮಾರ್ಗವಾಗಿ ಘಟಪ್ರಭಾ ನದಿಗೆ ಭಾರೀ ಪ್ರಮಾಣದಲ್ಲಿ ಹರಿದು ಬರುತ್ತಿರುವುದರಿಂದ ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಢವಳೇಶ್ವರ, ನಂದಗಾಂವ, ಮುಧೋಳ ತಾಲೂಕಿನ ಮಿರ್ಜಿ, ಚನ್ನಾಳ, ಜಾಲಿಬೇರಿ ಸೇರಿದಂತೆ ಒಟ್ಟು ಐದು ಸೇತುವೆಗಳು ಜಲಾವೃತವಾಗಿವೆ. ಘಟಪ್ರಭಾ ನದಿ ಉಕ್ಕಿ ಹರಿಯುತ್ತಿರುವುದರಿಂದ ನಂದಗಾಂವ-ಅವರಾದಿ ಮತ್ತು ಅಕ್ಕಿಮರಡಿ-ಮಿರ್ಜಿ ಸೇತುವೆ ಜಲಾವೃತ ಗೊಂಡು ಸಂಪರ್ಕ ಕಡಿತಗೊಂಡಿದೆ. ಮುಧೋಳ ತಾಲೂಕಿನ ಢವಳೇಶ್ವರ ಸೇತುವೆ ಮುಳುಗಡೆಯಾಗಿದ್ದು, ಗೋಕಾಕ ತಾಲೂಕಿನ ಸಂಚಾರ ಕಡಿತಗೊಂಡಿದೆ. ನದಿ ಪಕ್ಕದ ಹೊಲಗದ್ದೆಗಳಿಗೂ ನೀರು ನುಗ್ಗಿದೆ.
ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳ: ತುಂಗಭದ್ರಾ ಜಲಾಶಯದ ಒಳ ಹರಿವು ಹೆಚ್ಚಿದ್ದು, ಗುರುವಾರ ಸಂಜೆ 22 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬಂದಿದೆ. ಪ್ರಸ್ತುತ ಜಲಾಶಯದಲ್ಲಿ 29 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಈಗಾಗಲೇ, ಶಿವಮೊಗ್ಗದ ತುಂಗಾ ಜಲಾಶಯ ತುಂಬಿದ್ದು, ನದಿಗೆ ನೀರು ಹರಿಸಲಾಗುತ್ತಿದೆ.
ಶನಿವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು