Hubli; ಶೆಟ್ಟರ್ ಯಾರಿಗೆ ಹೇಗೆ ಟಿಕೆಟ್ ನೀಡಿದ್ದಾರೆಂದು ನಮಗೆ ಗೊತ್ತಿದೆ: ಮಹೇಶ ಟೆಂಗಿನಕಾಯಿ
Team Udayavani, Sep 18, 2023, 3:08 PM IST
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಈ ಹಿಂದೆ ಹೇಗೆ ಟಿಕೆಟ್ ಪಡೆದುಕೊಂಡಿದ್ದಾರೆ ಹಾಗೂ ಹೇಗೆ ಟಿಕೆಟ್ ನೀಡಿದ್ದಾರೆ ಎಂಬುದು ಎಲ್ಲವೂ ಗೊತ್ತಿದೆ ಎಂದು ಶಾಸಕ ಮಹೇಶ ತೆಂಗಿನಕಾಯಿ ಕಿಡಿಕಾರಿದರು.
ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಸೋಮವಾರ ನಡೆದ ಹಂದರ ಕಂಬ ಹಾಗೂ ಭಗವಾಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕಳೆದ 30 ವರ್ಷಗಳಿಂದ ಜಗದೀಶ ಶೆಟ್ಟರ ಅವರಿಗೆ ಬಿಜೆಪಿ ಪಕ್ಷ ಎಲ್ಲವನ್ನೂ ಕೊಟ್ಟಿದೆ. ಅತಿ ಹೆಚ್ಚು ಲಿಂಗಾಯತ ಸಮುದಾಯದವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದು ಬಿಜೆಪಿ. ರಾಜಕೀಯಕ್ಕೆ ಸಮಾಜವನ್ನು ಎಳೆದು ತರುವ ಕೆಲಸ ಮಾಡಬಾರದು ಎಂದು ಶೆಟ್ಟರ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:World Cup 23; ಅಕ್ಷರ್ ಪಟೇಲ್ ಬದಲು ಬೇರೆ ಸ್ಪಿನ್ನರ್ ಆಯ್ಕೆ? ಸುಳಿವು ನೀಡಿದ ನಾಯಕ ರೋಹಿತ್
ಶೆಟ್ಟರ ಅವರಿಗೆ ಅನ್ಯಾಯವಾಗಿದ್ದರೆ ತಾಕತ್ತಿದ್ದರೆ ಅದನ್ನು ಸರಿಪಡಿಸಿಕೊಳ್ಳಿ. ಅದು ಬಿಟ್ಟು ರಾಜಕೀಯಕ್ಕೂ ಸಮಾಜಕ್ಕೂ ಸಂಬಂಧ ಕಲ್ಪಿಸುವ ಕೆಲಸ ಮಾಡುವುದು ಬೇಡ. ಕಾಂಗ್ರೆಸ್ ನಲ್ಲಿ ಶೆಟ್ಟರ ಅವರನ್ನು ಗುರುತಿಸುತ್ತಿಲ್ಲ ಎಂಬ ನೋವಿನಿಂದ ಅವರು ಬಿಜೆಪಿ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಬಿಜೆಪಿಯಲ್ಲಿ ಯಾವುದೇ ಟಿಕೆಟ್ ಮಾರಾಟಕ್ಕಿಲ್ಲ. ಕೆಲವರು ಪ್ರಚಾರದ ಚಟಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಖಾರವಾಗಿ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ