ನಕಲು ತನಿಖೆಗೆ ಹಿಂಜರಿದ ಮೇಜರ್‌


Team Udayavani, Apr 26, 2019, 1:35 PM IST

hub-3

ಬಾಗಲಕೋಟೆ: ಮಕ್ಕಳ ಶೈಕ್ಷಣಿಕ ಹಂತದ ಮಹತ್ವದ ಘಟ್ಟ ಎಂದೇ ಹೇಳಲಾಗುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆದ ಕುರಿತ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಗಂಭೀರ ಕ್ರಮಕ್ಕೆ ಮುಂದಾಗಿದ್ದ, ಸಾರ್ವಜನಿಕ ಶಿಕ್ಷಣ ಇಲಾಖೆಯ ಧಾರವಾಡದ ಆಯುಕ್ತರು ಇದೀಗ ತಮ್ಮ ನಿಲುವು ಸಡಿಲಿಸಿದ್ದಾರೆ.

ಧಾರವಾಡ ಆಯುಕ್ತರ ಕಚೇರಿ ವ್ಯಾಪ್ತಿಯ ಏಳು ಜಿಲ್ಲೆಗಳ 596 ಎಸ್ಸೆಸ್ಸೆಲ್ಸಿ ಪರೀಕ್ಷೆ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ್ದು, ಸಿಸಿ ಟಿವಿ ಫುಟೇಜ್‌ ಅನ್ನು ಕಡ್ಡಾಯವಾಗಿ ಒಪ್ಪಿಸಲು ಆಯುಕ್ತರು ಕಳೆದ ಮಾ.30ರಂದು ಎಲ್ಲ ಜಿಲ್ಲೆಗಳ ಡಿಡಿಪಿಐ ಹಾಗೂ ಬಿಇಒಗಳಿಗೆ ಆದೇಶ ಹೊರಡಿಸಿದ್ದರು. ಇದರಿಂದ ಸಾಮೂಹಿಕ ನಕಲು ನಡೆಸಿದ್ದರು ಎನ್ನಲಾದ ಕೆಲ ಪರೀಕ್ಷೆ ಕೇಂದ್ರಗಳ ಅಧೀಕ್ಷರು, ಶಿಸ್ತುಕ್ರಮದ ಭೀತಿಯಲ್ಲಿದ್ದರು. ಆದರೆ, ಏ.25ರಂದು ಆಯುಕ್ತರು ಪರಿಷ್ಕೃತ ಆದೇಶ ಹೊರಡಿಸಿ, ಸಿಸಿಟಿವಿ ಫುಟೇಜ್‌ ಸದ್ಯಕ್ಕೆ ಪಡೆಯುವುದನ್ನು ತಡೆ ಹಿಡಿದ್ದಾರೆ. ಹೀಗಾಗಿ ಬಹುತೇಕರು ನಿರಾಳರಾಗಿದ್ದಾರೆ.

ಏನಿದು ಫುಟೇಜ್‌?: ಕಳೆದ ಮಾರ್ಚ್‌ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆ ಬಹುತೇಕ ಕೇಂದ್ರಗಳಲ್ಲಿ ಸಾಮೂಹಿಕ ನಕಲು ನಡೆದಿವೆ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ಕೆಲ ಪರೀಕ್ಷೆ ಕೇಂದ್ರಗಳಿಗೆ ಸ್ವತಃ ಆಯುಕ್ತರೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದೇ ವೇಳೆ ಕೆಲ ಸಿಬ್ಬಂದಿಯನ್ನು ಪರೀಕ್ಷೆ ಕಾರ್ಯದಿಂದ ಬಿಡುಗಡೆಗೊಳಿಸಿದ್ದರು. ಇದಾದ ಬಳಿಕ ಧಾರವಾಡ ಆಯುಕ್ತರ ಕಚೇರಿ ವ್ಯಾಪ್ತಿಯ ಎಲ್ಲಾ ಏಳು ಜಿಲ್ಲೆಗಳ ಪರೀಕ್ಷೆ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆ ನಡೆದ ಎಲ್ಲ ಚಟುವಟಿಕೆ ಪರಿಶೀಲಿಸಿ ಸಿಸಿಟಿವಿ ಫುಟೇಜ್‌ ನೀಡಲು ಆದೇಶಿಸಿದ್ದರು. ಜತೆಗೆ ಆಯಾ ಜಿಲ್ಲೆಗಳ ಡಿಡಿಪಿಐ, ಬಿಇಒಗಳು, ತಮ್ಮ ವ್ಯಾಪ್ತಿಯ ಪರೀಕ್ಷೆ ಕೇಂದ್ರಗಳ ಫುಟೇಜ್‌ಗಳನ್ನು ಒಂದು ಪೆನ್‌ಡ್ರೈನ್‌ನಲ್ಲಿ ಹಾಕಿಕೊಂಡು ಬರಲು ಸೂಚಿಸಿ, ಪರಿಶೀಲನೆಗೆ ದಿನಾಂಕ ನಿಗದಿಪಡಿಸಿದ್ದರು.

ಆಯುಕ್ತರ ಹಳೆಯ ಆದೇಶದ ನಿರ್ಧಾರದಂತೆ ಏ.26 ಮತ್ತು 27ರಂದು ಬಾಗಲಕೋಟೆ (96 ಪರೀಕ್ಷೆ ಕೇಂದ್ರ), ಏ.29 ಮತ್ತು 30ರಂದು ವಿಜಯಪುರ (101 ಕೇಂದ್ರ), ಮೇ 2, 3 ಮತ್ತು 4ರಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ (130 ಕೇಂದ್ರ), ಮೇ 8 ಮತ್ತು 9ರಂದು ಬೆಳಗಾವಿ (104 ಕೇಂದ್ರ), ಮೇ 13 ಮತ್ತು 14ರಂದು ಹಾವೇರಿ (73 ಕೇಂದ್ರ), ಮೇ 15 ಮತ್ತು 16ರಂದು ಧಾರವಾಡ ಜಿಲ್ಲೆ (92 ಕೇಂದ್ರ) ಹಾಗೂ ಮೇ 17 ಮತ್ತು 18ರಂದು ಕಾರವಾರ ಹಾಗೂ ಶಿರಸಿ (38 ಮತ್ತು 35) ಶೈಕ್ಷಣಿಕ ಜಿಲ್ಲೆಗಳ ಪರೀಕ್ಷೆ ಕೇಂದ್ರಗಳಲ್ಲಿ ನಡೆದಿದೆ ಎನ್ನಲಾದ ಪರೀಕ್ಷೆ ಅಕ್ರಮ ಕುರಿತು ಪರಿಶೀಲನೆಗೆ ಮುಂದಾಗಿದ್ದರು.

ನಿರ್ಧಾರ ಕೈಬಿಟ್ಟ ಆಯುಕ್ತರು: ಆದರೆ, ಈ ನಿರ್ಧಾರದಿಂದ ಸದ್ಯ ಆಯುಕ್ತರು ಹಿಂದೆ ಸರಿದಿದ್ದಾರೆ. ವಿಭಾಗದ ಎಲ್ಲ ಪರೀಕ್ಷೆ ಕೇಂದ್ರಗಳ ಸಿಸಿಟಿವಿ ಫುಟೇಜ್‌ ಪರಿಶೀಲನೆ ಮಾಡಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಂದ ಈ ಪ್ರಕ್ರಿಯೆ ಕೈ ಬಿಡಲಾಗಿದೆ. ಪರೀಕ್ಷೆ ಕೇಂದ್ರಗಳ ಸಿಸಿ ಕ್ಯಾಮರಾ ಫುಟೇಜ್‌ ಕಾಯ್ದಿರಿಸುವುದು ಆಯಾ ಕೇಂದ್ರಗಳ ಮುಖ್ಯ ಅಧೀಕ್ಷಕರ ಕರ್ತವ್ಯ. ಆದ್ದರಿಂದ ಪರೀಕ್ಷೆ ಕೇಂದ್ರದ ಮುಖ್ಯ ಅಧೀಕ್ಷಕರು, ತಮ್ಮ ಕೇಂದ್ರಗಳ ಸಿಸಿ ಕ್ಯಾಮರಾಗಳ ಫುಟೇಜ್‌ಗಳನ್ನು ತಮ್ಮ ಹಂತದಲ್ಲಿ ಕಡ್ಡಾಯವಾಗಿ ಸಂಗ್ರಹಿಸಿಟ್ಟುಕೊಳ್ಳಬೇಕು. ಮುಂದೆ ಕೈಗೊಳ್ಳಬಹುದಾದ ಶೈಕ್ಷಣಿಕ ಸಂಶೋಧನೆ, ಅಧ್ಯಯನಕ್ಕಾಗಿ ಆಯ್ದ ಪರೀಕ್ಷೆ ಕೇಂದ್ರಗಳ ಫುಟೇಜ್‌ಗಳನ್ನು ಮತ್ತು ದೂರು ಸಲ್ಲಿಕೆಯಾದ, ಅಕ್ರಮ ನಡೆದಂತಹ ಕೇಂದ್ರಗಳ ಫುಟೇಜ್‌ಗಳನ್ನು ಪರಿಶೀಲನೆಗೆ ಒಳಪಡಿಸಲಾಗುವುದು ಎಂದು ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇಜರ್‌ ಸಿದ್ಧಲಿಂಗಯ್ಯ ಹಿರೇಮಠ ಅವರು ಗುರುವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ಶ್ರೀಶೈಲ ಕೆ. ಬಿರಾದಾರ

 

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.