ಸದ್ದಿಲ್ಲದೇ ಅಣ್ಣಿಗೇರಿಗೆ ಹರಿದು ಬಂದಳು ಮಲಪ್ರಭೆ


Team Udayavani, Aug 24, 2018, 4:46 PM IST

24-agust-20.jpg

ಅಣ್ಣಿಗೇರಿ: ನೀರಿಗೆ ಹಾಹಾಕಾರ ಆಗುವವರೆಗೆ ತಡೆಯಲಿಲ್ಲ. ಸಂಗ್ರಹಾಗಾರದಲ್ಲಿರುವ ತಳಮಟ್ಟದ ನೀರು ಕುಡಿದು ಜನರು ರೋಗರುಜಿನಕ್ಕೆ ಈಡಾಗುವುದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಜಿಲ್ಲಾ ಧಿಕಾರಿ ಕಚೇರಿಗೆ ಮೇಲಿಂದ ಮೇಲೆ ಅಲೆದಾಡಲಿಲ್ಲ. ಸವದತ್ತಿಯ ನವಿಲುತೀರ್ಥಕ್ಕೆ ಹೋಗಿ ಬಾಗಿನ ಅರ್ಪಿಸಿ ಅದರ ಖರ್ಚು-ವೆಚ್ಚವನ್ನೆಲ್ಲ ಪುರಸಭೆಯ ಲೆಕ್ಕಕ್ಕೆ ಸೇರಿಸಿ, ಅಣ್ಣಿಗೇರಿಗೆ ಮಹದುಪಕಾರ ಮಾಡಿದೆ ಎನ್ನುವ ಪ್ರಚಾರವನ್ನಂತೂ ತೆಗೆದುಕೊಳ್ಳಲೇ ಇಲ್ಲ! ತಾವು ಪಟ್ಟಣಕ್ಕೆ ಕುಡಿಯುವ ನೀರನ್ನು ಮಲಪ್ರಭೆಯಿಂದ ಸರಬರಾಜು ಮಾಡಿಸಿದ ರೀತಿಯನ್ನು ಶಾಸಕ ಶಂಕರಪಾಟೀಲ ಮುನೇನಕೊಪ್ಪ ವ್ಯಾಖ್ಯಾನಿಸಿದ್ದು ಹೀಗೆ.

ಆ. 19ರಿಂದ ಇಲ್ಲಿನ ಜಲಸಂಗ್ರಹಾಗಾರ ಅಂಬಿಗೇರಿಗೆ ಸದ್ದಿಲ್ಲದೇ ಮಲಪ್ರಭೆ ನೀರು ಹರಿಸಲಾಗುತ್ತಿದೆ. ಮಲಪ್ರಭಾ ಬಲದಂಡೆ ಕಾಲುವೆಯಿಂದ 15 ದಿನಗಳ ಕಾಲ ಹರಿಯುವ ಈ ನೀರಿನಲ್ಲಿ ಶೇ. 90 ಕಾಲುವೆಗುಂಟ ಮುಂದೆ ಹರಿದು ಹೋದರೆ, ಅಣ್ಣಿಗೇರಿ ಪಟ್ಟಣಕ್ಕೆ ಶೇ. 10 ಮಾತ್ರ ಪೂರೈಕೆಯಾಗುತ್ತದೆ. ಇದು ಪಟ್ಟಣದ ನೀರಿನ ಕೊರತೆಯನ್ನು ಸದ್ಯಕ್ಕೆ ಒಂದೂವರೆ ತಿಂಗಳವರೆಗೆ ನೀಗಲಿದೆ.

ಒಟ್ಟು 23 ಎಕರೆ 12 ಗುಂಟೆ ವಿಸ್ತೀರ್ಣ ಹೊಂದಿದ ಅಂಬಿಗೇರಿ ಜಲಸಂಗ್ರಹಾಗಾರದಲ್ಲಿ 506.15 ಮಿಲಿಯನ್‌ ಲೀಟರ್‌ ನೀರನ್ನು ಸಂಗ್ರಹಿಸಬಹುದಾಗಿದೆ. ಈ ಹಿಂದೆ ಮಲಪ್ರಭಾ ಕಾಲುವೆಯಿಂದ ನೀರೆತ್ತಿ ಅಂಬಿಗೇರಿಗೆ ತುಂಬಿಸುವುದು ತಾಂತ್ರಿಕ ಕಾರಣಗಳಿಂದ ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಪಟ್ಟಣಕ್ಕೆ ನೀರಿನ ಅಭಾವ ತಲೆದೋರುತ್ತಿತ್ತು.

ಅಣ್ಣಿಗೇರಿಗೆ ಮಲಪ್ರಭಾ ನೀರನ್ನು ಸಮರ್ಪಕವಾಗಿ ಪೂರೈಸುವಲ್ಲಿ ಇದ್ದಿದ್ದ ಅಡೆತಡೆಗಳ ನಿವಾರಣೆಗಾಗಿ ಹೊಸ ಪರಿಕರಗಳನ್ನು ಅಳವಡಿಸಲು ತಾವು ಈ ಹಿಂದೆ ಶಾಸಕರಾಗಿದ್ದ ಅವ ಧಿಯಲ್ಲಿ ಶಂಕರ ಪಾಟೀಲ ಮುನೇನಕೊಪ್ಪ ಅವರು ಸರಕಾರದಿಂದ 1.5 ಕೋಟಿ ರೂ. ಮಂಜೂರಿ ಮಾಡಿಸಿದ್ದರು.

ಹಿಂದೆಯೂ ಬಂದಿದ್ದಳು: ಈ ಹಿಂದೆ ನೀರಿನ ತೊಂದರೆಯಿಂದ ಪರಿತಪಿಸುತ್ತಿದ್ದ ಅಣ್ಣಿಗೇರಿ ಪಟ್ಟಣಕ್ಕೆ ನವಲಗುಂದ ಚನ್ನಮ್ಮನ ಕೆರೆಯಿಂದ ಪೈಪ್‌ಲೈನ್‌ ಮೂಲಕ ನೀರು ಪೂರೈಸಲು ಆಗಿನ ಜಿಲ್ಲಾ ಧಿಕಾರಿ ನಿರ್ಧರಿಸಿದ್ದರು. ಆಗ ನವಲಗುಂದದ ಹಲವಾರು ಪ್ರಮುಖರು ಆ ನಿರ್ಧಾರವನ್ನು ವಿರೋಧಿಸಿದ್ದರು. ರಕ್ತವನ್ನಾದರೂ ಕೊಟ್ಟೇವು, ಆದರೆ ನೀರು ಕೊಡುವುದಿಲ್ಲ ಎನ್ನುವ ಮೂಲಕ ಪ್ರತಿಭಟನೆ ಹಾದಿ ತುಳಿದಿದ್ದರು. ಅಂದು ಶಾಸಕರಾಗಿದ್ದ ಮುನೇನಕೊಪ್ಪ ತಮ್ಮ ಪ್ರಭಾವ ಬಳಸಿ ತಕ್ಷಣ ಅಣ್ಣಿಗೇರಿಗೆ ಮಲಪ್ರಭಾ ನೀರು ಹರಿಸುವಲ್ಲಿ ಯಶಸ್ವಿಯಾಗಿದ್ದರು. ಈಗಲೂ ಸದ್ದಿಲ್ಲದೇ ಮತ್ತೆ ಮಲಪ್ರಭೆಯ ನೀರು ಹರಿಸುವಲ್ಲಿ ಯಶ ಕಂಡಿದ್ದಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.