ಜಿಲ್ಲೆಯ 399 ಹಳ್ಳಿಗಳಿಗೂ ಮಲಪ್ರಭೆ


Team Udayavani, Feb 9, 2020, 11:21 AM IST

huballi-tdy-1

ಧಾರವಾಡ: ಜಿಲ್ಲೆಯ 399 ಹಳ್ಳಿಗಳಿಗೆ ಕುಡಿಯಲು ಮಲಪ್ರಭಾ ನದಿ ನೀರನ್ನು ಸರಬರಾಜು ಮಾಡಲು 1,300 ಕೋಟಿ ಅಂದಾಜು ಮೊತ್ತದ ಯೋಜನೆ ಅನುಷ್ಠಾನಗೊಳಿಸಲು ಈಗಾಗಲೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂಬರುವ ಮಂತ್ರಿ ಮಂಡಲ ಸಭೆಯಲ್ಲಿ ಅನುಮೋದಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಹು-ಧಾ ಮಹಾನಗರ ಪಾಲಿಕೆ ಆಶ್ರಯದಲ್ಲಿ ಅಮ್ಮಿನಬಾವಿಯಲ್ಲಿ ನಿರ್ಮಿಸಿರುವ 40 ಎಂಎಲ್‌ಡಿ ಸಾಮರ್ಥ್ಯದ ನೂತನ ಜಲಶುದ್ಧೀಕರಣ ಘಟಕದ ಉದ್ಘಾಟನೆ ಹಾಗೂ ಯಂತ್ರಾಗಾರದಲ್ಲಿ ಅಳವಡಿಸಿರುವ ನೂತನ ಯಂತ್ರೋಪಕರಣಗಳಿಗೆ ಚಾಲನೆ ನೀಡಿ, ಅವರು ಮಾತನಾಡಿದರು.

ಹು-ಧಾ ಮಹಾನಗರ ಪಾಲಿಕೆಯ ಠೇವಣಿ ಹಣದಲ್ಲಿನ 26 ಕೋಟಿ ರೂ. ಅನುದಾನದಲ್ಲಿ ಅನುಷ್ಠಾನಗೊಳಿಸಿರುವ ಈ ನೂತನ ಜಲಶುದ್ಧೀಕರಣ ಘಟಕ ಯೋಜನೆಯು ಅತ್ಯಂತ ಮಹತ್ವದ್ದಾಗಿದೆ. ಮಹಾನಗರಕ್ಕೆ ಪ್ರತಿ ಮೂರು ದಿನಕ್ಕೊಮ್ಮೆ ಕುಡಿಯುವ ನೀರನ್ನು ಪೂರೈಸಲು ಅನುಕೂಲವಾಗಲಿದೆ ಎಂದರು. ಮಹಾನಗರದ ಒಟ್ಟು 64 ವಾರ್ಡ್‌ಗಳ ಪೈಕಿ ಈಗಾಗಲೇ 11 ವಾರ್ಡ್‌ಗಳಿಗೆ ಪೂರ್ಣ ಪ್ರಮಾಣದಲ್ಲಿ ಮತ್ತು 15 ವಾರ್ಡ್‌ಗಳ ಭಾಗಶಃ ಪ್ರದೇಶಕ್ಕೆ ನಿರಂತರ ಕುಡಿಯುವ ನೀರು ಪೂರೈಸಲಾಗುತ್ತಿದೆ. ಎಲ್ಲ ವಾರ್ಡ್ ಗಳಿಗೂ ನಿರಂತರ ನೀರು ಯೋಜನೆಯನ್ನು ವಿಸ್ತರಿಸಲು ಕ್ರಮ ಕೈಗೊಳ್ಳಲಾಗಿದೆ. ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ನಿರ್ವಹಿಸುವ ಗುತ್ತಿಗೆ ಕಂಪನಿಯ ಅನುಮೋದನೆಗಾಗಿ ಆರ್ಥಿಕ ನೆರವು ನೀಡಲಿರುವ ವಿಶ್ವ ಬ್ಯಾಂಕ್‌ಗೆ ಸಲ್ಲಿಸಲಾಗಿದೆ. ಸದ್ಯದಲ್ಲಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗುವುದು ಎಂದು ತಿಳಿಸಿದರು.

ಮಹಾನಗರದ ಜನಸಂಖ್ಯೆಗೆ ಅನುಗುಣವಾಗಿ ಕುಡಿಯುವ ನೀರು ಸರಬರಾಜು ಮಾಡಲು ಪ್ರತಿದಿನಕ್ಕೆ ಸುಮಾರು 200 ಎಂಎಲ್‌ಡಿ ನೀರಿನ ಅಗತ್ಯವಿದೆ. ಹುಬ್ಬಳ್ಳಿ ಮಹಾನಗರಕ್ಕೆ ನೀರಸಾಗರ ಜಲಾಶಯದಿಂದ ಸುಮಾರು 40 ಎಂಎಲ್‌ಡಿ ನೀರನ್ನು ಪಡೆಯಲಾಗುತ್ತಿತ್ತು. ಆದರೆ ಜಲಾಶಯ ಬತ್ತಿದ್ದರಿಂದ ಮಲಪ್ರಭಾ ಜಲಾಶಯದಿಂದ 160 ಎಂಎಲ್‌ಡಿ ನೀರಿನ ಮೇಲೆ ಅವಳಿನಗರಕ್ಕೆ ನೀರು ಪೂರೈಸಿದ್ದರಿಂದ ಬೇಸಿಗೆ ಕಾಲದಲ್ಲಿ 8-10 ದಿನಗಳಿಗೊಮ್ಮೆ ನೀರು ಸರಬರಾಜು ಮಾಡಬೇಕಾಯಿತು. ಈ ಸಮಸ್ಯೆ ಪರಿಹರಿಸಲು ಸುಮಾರು 26 ಕೋಟಿ ಮೊತ್ತದಲ್ಲಿ ಮಲಪ್ರಭಾ ಜಲಾಶಯದಿಂದ ನೀರು ತರಲು ಸವದತ್ತಿ ಜಾಕ್ವೆಲ್‌ ಹಾಗೂ ಅಮ್ಮಿನಬಾವಿ ಪಂಪ್‌ಹೌಸ್‌ ಹೊಸ ಯಂತ್ರೋಪಕರಣ, ಪಂಪ್‌ಸೆಟ್‌ಗಳ ಅಳವಡಿಕೆ ಹಾಗೂ ಅಮ್ಮಿನಭಾವಿಯಲ್ಲಿ 40 ಎಂಎಲ್‌ಡಿ ಸಾಮರ್ಥ್ಯದ ಹೊಸ ಜಲ ಶುದ್ಧೀಕರಣ ಘಟಕ ಸ್ಥಾಪಿಸಲಾಗಿದೆ.

ಈಗ ಮಲಪ್ರಭಾ ಜಲಾಶಯದಿಂದ 200 ಎಂಲ್‌ಡಿ ಹಾಗೂ ನೀರಸಾಗರ ಜಲಾಶಯದಿಂದ 40 ಎಂಎಲ್‌ಡಿ ಸೇರಿ ಒಟ್ಟು 240 ಎಂಎಲ್‌ಡಿ ನೀರು ಸರಬರಾಜು ಆಗುತ್ತದೆ. ಇದರಿಂದ ಅವಳಿನಗರದ ಜನತೆಗೆ ಪ್ರತಿ ಮೂರು ದಿನಕ್ಕೊಮ್ಮೆ ಕುಡಿಯುವ ನೀರನ್ನು ನಿರಾತಂಕವಾಗಿ ಪೂರೈಸಲಾಗುತ್ತದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಅಮೃತ ದೇಸಾಯಿ ಮಾತನಾಡಿ, ಎಲ್ಲ ಹಳ್ಳಿಗೂ ಮಲಪ್ರಭೆ ನೀರು ಪೂರೈಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಶಾಸಕ ಅರವಿಂದ ಬೆಲ್ಲದ, ಡಿಸಿ ದೀಪಾ ಚೋಳನ್‌, ಮಾಜಿ ಶಾಸಕಿ ಸೀಮಾ ಮಸೂತಿ, ಕಾರ್ಯಪಾಲಕ ಅಭಿಯಂತ ಅಶೋಕ ಮಾಡ್ಯಾಳ, ಸಹಾಯಕ ಕಾರ್ಯ ಅಭಿಯಂತ ವೆಂಕಟರಾವ್‌, ಮಲ್ಲಿಕಾರ್ಜುನ ಹಳೆಮನಿ ಇನ್ನಿತರರಿದ್ದರು.

ಜಲಮಂಡಳಿ ನಿವೃತ್ತ ಮುಖ್ಯ ಅಭಿಯಂತ ಡಿ.ಎಲ್‌. ರಾಜು, ಕಾಮಗಾರಿ ಗುತ್ತಿಗೆ ಪಡೆದಿದ್ದ ಹೈದರಾಬಾದ್‌ ಇನ್‌ಫ್ರಾಟೆಕ್‌ ಸಂಸ್ಥೆಯ ಪ್ರತಿನಿಧಿ ಹಾಗೂ ಪುಣೆ ಮೂಲದ ಮೆ| ಎಸ್‌.ಬಿ.ಎಂ. ಪ್ರಾಜೆಕ್ಟ್ ಸಂಸ್ಥೆಯ ಪ್ರತಿನಿಧಿಯನ್ನು ಗೌರವಿಸಲಾಯಿತು. ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ ಸ್ವಾಗತಿಸಿದರು. ಮುಖ್ಯ ಅಭಿಯಂತ ಎ.ಸಿ. ಚಾಮರಾಜೇಗೌಡ ಪ್ರಾಸ್ತಾವಿಕ ಮಾತನಾಡಿದರು. ಗೌರಿ ನಿರೂಪಿಸಿದರು. ಜಗದೀಶ ಬಳಬಟ್ಟಿ ವಂದಿಸಿದರು.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.