ಹೋಟೆಲ್ ನಲ್ಲಿ ಚಟ್ನಿ ವಿಚಾರಕ್ಕೆ ಕಿರಿಕ್;ಪೊಲೀಸರೆದುರು ಬ್ಲೇಡ್ ನಿಂದ ಕುತ್ತಿಗೆ ಕುಯ್ದ ಯುವಕ
Team Udayavani, Sep 23, 2022, 4:03 PM IST
ಹುಬ್ಬಳ್ಳಿ: ಹೊಟೇಲ್ ನಲ್ಲಿ ಊಟದ ವಿಷಯವಾಗಿ ಮಾಲಿಕರೊಂದಿಗೆ ಗಲಾಟೆ ಮಾಡಿಕೊಂಡಿದ್ದ ಓರ್ವನನ್ನು ಠಾಣೆಗೆ ವಿಚಾರಣೆಗೆಂದು ಪೊಲೀಸರ ಬಳಿ ಕರೆದುಕೊಂಡು ಬಂದಾಗ, ಆತ ಕುತ್ತಿಗೆಗೆ ಬ್ಲೇಡ್ ನಿಂದ ಕೊಯ್ದುಕೊಂಡು ಬೆದರಿಕೆ ಹಾಕಲು ಮುಂದಾದ ಘಟನೆ ಇಲ್ಲಿನ ಹಳೇಹುಬ್ಬಳ್ಳಿ ಠಾಣೆಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಇಲ್ಲಿನ ಗಣೇಶಪೇಟೆ ಮೀನು ಮಾರುಕಟ್ಟೆಯ ರಾಘವೇಂದ್ರ ನಾಯಕ ಎಂಬಾತನೆ ಕುತ್ತಿಗೆಗೆ ಬ್ಲೇಡ್ ಇರಿದುಕೊಂಡವ.
ಈತನು ಗುರುವಾರ ಇಂಡಿ ಪಂಪ್ ವೃತ್ತ ಬಳಿಯ ಬಿರಿಯಾನಿ ಹೌಸ್ ಅಂಗಡಿಯ ಮಾಲಕರೊಂದಿಗೆ ತಿಂಡಿಗೆ ಚಟ್ನಿ ಕೊಡಲಿಲ್ಲವೆಂದು ಜಗಳ ಮಾಡಿಕೊಂಡಿದ್ದಾನೆ. ಆಗ ಪೊಲೀಸರು ಅಂಗಡಿಯ ಮಾಲಕ ಮತ್ತು ರಾಘವೇಂದ್ರನನ್ನು ವಿಚಾರಣೆಗೆಂದು ಠಾಣೆಗೆ ಕರೆಯಿಸಿದಾಗ, ಒಮ್ಮೇಲೆ ತನ್ನ ಬಳಿಯಿದ್ದ ಬ್ಲೇಡ್ ನಿಂದ ಕುತ್ತಿಗೆಗೆ ಕೊಯ್ದುಕೊಂಡಿದ್ದಾನೆ. ಏಕಾಏಕಿ ನಡೆದ ಈ ಘಟನೆಯಿಂದ ಠಾಣೆಯಲ್ಲಿನ ಸಿಬ್ಬಂದಿ ಆತಂಕಗೊಂಡಿದ್ದಾರೆ. ನಂತರ ಅಲ್ಲಿದ್ದವರೆಲ್ಲ ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ:ತನ್ನದೇ ಡೆತ್ ಸರ್ಟಿಫಿಕೇಟ್ ಕಳೆದುಕೊಂಡಿದ್ದೇನೆ ಎಂದು ಜಾಹೀರಾತು!: ವೈರಲ್ ಸುದ್ದಿ
22 ವರ್ಷದ ರಾಘವೇಂದ್ರನು ಹಣಕ್ಕಾಗಿ ಆಗಾಗ ತಾಯಿ ಹಾಗೂ ಸ್ನೇಹಿತರ ಬಳಿ ದುಂಬಾಲು ಬೀಳುತ್ತಿದ್ದ. ಕೊಡದಿದ್ದರೆ ಕುತ್ತಿಗೆಗೆ ಬ್ಲೇಡ್ನಿಂದ ಕೊಯ್ದುಕೊಂಡು ಬೆದರಿಕೆ ಹಾಕುತ್ತಿದ್ದ. ಹೊಟೇಲ್ ಗಳಲ್ಲಿ ತಿಂಡಿ ತಿಂದು ಹಣ ಕೊಡದೆ ಜಗಳ ಮಾಡಿಕೊಳ್ಳುತ್ತಿದ್ದ. ಅದೇ ರೀತಿ ಗುರುವಾರವು ಹೊಟೇಲ್ನ ಮಾಲಕರೊಂದಿಗೆ ಜಗಳ ತೆಗೆದಿದ್ದಾಗ ವಿಚಾರಣೆಂದು ಠಾಣೆಗೆ ಕರೆಯಿಸಿದಾಗ ಕುತ್ತಿಗೆಗೆ ಬ್ಲೇಡ್ ನಿಂದ ಕೊಯ್ದುಕೊಂಡು ಬೆದರಿಸಲು ಮುಂದಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹಳೇಹುಬ್ಬಳ್ಳಿ ಪೊಲೀಸರು ರಾಘವೇಂದ್ರನ ವಿರುದ್ಧ ಆತ್ಮಹತ್ಯೆಗೆ ಯತ್ನ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ