ಹುಬ್ಬಳ್ಳಿ: ಕಿರುಕುಳ ತಾಳಲಾರದೆ ಮಗನಿಗೆ ಚಾಕುವಿನಿಂದ ಇರಿದ ತಂದೆ!
Team Udayavani, Jul 12, 2022, 2:36 PM IST
ಹುಬ್ಬಳ್ಳಿ: ಮಗನ ಅತಿಯಾದ ಕಿರುಕುಳಕ್ಕೆ ರೋಸಿಹೋದ ತಂದೆಯೇ ಚಾಕುವಿನಿಂದ ಇರಿದು ಮಗನನ್ನು ಗಾಯಗೊಳಿಸಿದ ಘಟನೆ ಮಂಗಳವಾರ ಬೆಳಗಿನ ಜಾವ ಇಲ್ಲಿನ ಹಳೇಹುಬ್ಬಳ್ಳಿ ಹೆಗ್ಗೇರಿಯ ಆಯುರ್ವೇದ ಕಾಲೇಜ್ ಬಳಿ ನಡೆದಿದೆ.
ಜಗದೀಶ ಸುಗೂರ ಗಾಯಗೊಂಡಿದ್ದು, ಕ್ಷೌರಿಕ ಕೆಲಸ ಮಾಡಿಕೊಂಡಿರುವ ಈತನ ತಂದೆ ಶಂಕರ ಸುಗೂರ ಹಲ್ಲೆ ಮಾಡಿದವರು.
ಜಗದೀಶನು ಮಾನಸಿಕ ತೊಂದರೆಯಿಂದ ಬಳಲುತ್ತಿದ್ದು, ತಂದೆ-ತಾಯಿಗೆ ಪದೇ ಪದೇ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುವುದು ಹಾಗೂ ಜಗಳ ಮಾಡುವುದು, ಕೈಗೆ ಸಿಕ್ಕ ವಸ್ತುಗಳನ್ನು ಒಗೆಯುವುದು, ಹೊಡೆಯುವುದು ಮಾಡುತ್ತಿದ್ದ ಎನ್ನಲಾಗಿದೆ.
ಇದನ್ನೂ ಓದಿ:ಸ್ಪಾ,ಸಲೂನ್ ಹೆಸರಿನಲ್ಲಿ ವೇಶ್ಯಾವಾಟಿಕೆ: ನೌಕರಿ ಕೊಡಿಸುವುದಾಗಿ ನಂಬಿಸಿ ದಂಧೆಗೆ ಬಳಕೆ
ಮಂಗಳವಾರ ಬೆಳಗ್ಗೆಯೂ ಇದೇ ರೀತಿ ಮಾಡುತ್ತಿದ್ದಾಗ ಸಿಟ್ಟಾದ ಶಂಕರ ಮನೆಯಲ್ಲಿದ್ದ ಚಾಕುವಿನಿಂದ ಬೆನ್ನಿಗೆ ಇರಿದಿದ್ದು, ಚಾಕು ಅಲ್ಲಿಯೇ ಸಿಕ್ಕಿ ಹಾಕಿಕೊಂಡಿದ್ದು, ಹಿಡಕಿ ಮಾತ್ರ ಬಂದಿದೆ. ಗಾಯಗೊಂಡಿರುವ ಜಗದೀಶ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹಳೇಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ