ಆಲ್ಪೋನ್ಸೋ ಮಾವಿಗೆ ಮತ್ತೆ ಕೋವಿಡ್ ಮರ್ಮಾಘಾತ

ತುಂಬಿದ ಗೋದಾಮು, ಬಂದ್‌ ಆದ ಮಾರುಕಟ್ಟೆ | ಹೊರ ರಾಜ್ಯ, ವಿದೇಶಿ ರಫ್ತಿಗೂ ಕಂಟಕ | ಈ ಬಾರಿಯೂ ಸೀಕರಣಿ ಹುಳಿ ಹುಳಿ

Team Udayavani, Apr 30, 2021, 6:47 PM IST

fghdtgr

ವರದಿ: ಡಾ|ಬಸವರಾಜ ಹೊಂಗಲ್‌

ಧಾರವಾಡ: ಆಲೊ³ನ್ಸೋ ಮಾವಿನ ಸುಗ್ಗಿಗೂ ರೋಗ ರುಜಿನಗಳಿಗೂ ಅವಿನಾಭಾವ ಸಂಬಂಧವೋ ಏನೋ ಗೊತ್ತಿಲ್ಲ. ಸತತ ನಾಲ್ಕು ವರ್ಷಗಳಿಂದ ಒಂದಿಲ್ಲೊಂದು ಕಾರಣಕ್ಕೆ ಮಾವು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದು, 2021ನೇ ವರ್ಷ ಕೂಡ ಮಾವು ಬೆಳೆಗಾರರು ಅಷ್ಟೇ ಏಕೆ ವ್ಯಾಪಾರಿಗಳಿಗೂ ಆಘಾತವನ್ನುಂಟು ಮಾಡಿದೆ.

ಕೋವಿಡ್ ಎರಡನೇ ಅಲೆಗೆ ತತ್ತರಿಸುವ ಮಾರುಕಟ್ಟೆ ಮಾವು ಬೆಳೆಗಾರರಿಗೆ ಮಾರ್ಮಾಘಾತ ನೀಡಿದ್ದು, ಇದರಿಂದ ಚೇತರಿಸಿಕೊಳ್ಳುವುದು ಹೇಗೆ ಎನ್ನುವ ಸ್ಥಿತಿಗೆ ಬಂದಿದ್ದಾರೆ ರೈತರು. ಕಳೆದ ವರ್ಷ ಕೊರೊನಾಘಾತಕ್ಕೆ ಸಂಪೂರ್ಣ ಮಕಾಡೆ ಮಲಗಿದ್ದ ಮಾವು ಉತ್ಪನ್ನ ಮತ್ತು ಮಾರುಕಟ್ಟೆ ಈ ವರ್ಷದ ಮಾರ್ಚ್‌ ತಿಂಗಳಾಂತ್ಯದಿಂದ ಏಪ್ರಿಲ್‌ ಮಧ್ಯದವರೆಗೂ ಸುಸ್ಥಿತಿಯಲ್ಲಿತ್ತು. ಇದೀಗ ಇದ್ದಕ್ಕಿದ್ದಂತೆ ಕೋವಿಡ್  ಕರ್ಫ್ಯೂ ಜಾರಿಯಾಗಿದ್ದರಿಂದ ಮಾವು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ. ರೈತರಿಂದ ದಲ್ಲಾಳಿಗಳು, ದಲ್ಲಾಳಿಗಳಿಂದ ವ್ಯಾಪಾರಿಗಳು, ವ್ಯಾಪಾರಿಗಳಿಂದ ಗ್ರಾಹಕರ ಕೈ ಸೇರುವ ಮಾವು ಅತಿ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವುದೇ ಮೇ ತಿಂಗಳ ಮೊದಲ ಎರಡು ವಾರದಲ್ಲಿ. ಇದೀಗ ಸರಿಯಾಗಿ ಈ ಎರಡೂ ವಾರಗಳನ್ನು ಕೊರೊನಾ 2ನೇ ಅಲೆ ನುಂಗಿ ಹಾಕಿದ್ದು, ಸಂಪೂರ್ಣ ಕರ್ಫ್ಯೂ ಮಧ್ಯೆ ಮಾವು ಈ ಮೂರು ಹಂತಗಳನ್ನು ದಾಟಿ ಗ್ರಾಹಕರ ನಾಲಿಗೆ ತಣಿಸುವುದು ಕೊಂಚ ಕಷ್ಟವೇ ಆಗಿದೆ ಎನ್ನುತ್ತಿದ್ದಾರೆ ಮಾವು ಬೆಳೆಗಾರರು.

ತೋಟದಲ್ಲೇ ಉಳಿದ ಶೇ.30ರಷ್ಟು ಮಾವು:

ಇನ್ನು ಆಲೊ³ನ್ಸೊ ಮಾವಿನ ಹಣ್ಣಿನ ಸುಗ್ಗಿ ಆರಂಭಗೊಳ್ಳುವುದೇ ಏಪ್ರಿಲ್‌ನಲ್ಲಿ, ಮುಕ್ತಾಯವಾಗುವುದು ಮೇ ಅಂತ್ಯಕ್ಕೆ. ಈ ಎರಡು ತಿಂಗಳು ಮಾವಿನ ಹಣ್ಣು ಯಥೇತ್ಛವಾಗಿ ಮಾರುಕಟ್ಟೆಗಳಿಗೆ ಸಾಗಬೇಕು. ಏಪ್ರಿಲ್‌ ತಿಂಗಳು ಮುಗಿದಂತಾಗಿದ್ದು ಅರ್ಧದಷ್ಟು ಮಾವು ಮಾರುಕಟ್ಟೆಯತ್ತ ಮುಖ ಮಾಡಿದೆ. ತೋಟಗಳಲ್ಲಿನ ಶೇ.70 ಕಾಯಿ ಇದೀಗ ತೋಟಗಳಿಂದ ಹೊರ ಬಂದು ಗೋದಾಮುಗಳಲ್ಲಿ ಹಣ್ಣಾಗುತ್ತಿದೆ. ಸರಿಯಾಗಿ ಮೇ ಮೊದಲ ವಾರದಲ್ಲಿ ಮಾವು ಮಾರುಕಟ್ಟೆಗೆ ಅತೀ ಹೆಚ್ಚಿನ ಪ್ರಮಾಣದಲ್ಲಿ ಲಗ್ಗೆ ಹಾಕಬೇಕಿತ್ತು. ಇದೀಗ ಮಾರುಕಟ್ಟೆ ಬಂದ್‌ ಆಗಿದ್ದರಿಂದ ಉಳಿದ ಮಾವನ್ನು ಯಾರು ಕೇಳುತ್ತಾರೆ ಎನ್ನುವ ಆತಂಕ ರೈತರು ಮತ್ತು ದಲ್ಲಾಳಿಗಳನ್ನು ಕಾಡುತ್ತಿದೆ.

ಧಾರವಾಡ ಜಿಲ್ಲೆಯಲ್ಲಿಯೇ ಪ್ರಸ್ತಕ ವರ್ಷ ಅಂದಾಜು 97 ಸಾವಿರ ಟನ್‌ ಮಾವು ಉತ್ಪಾದನೆ ಗುರಿ ಹೊಂದಲಾಗಿತ್ತು. ಆದರೆ ಫೆಬ್ರವರಿ ತಿಂಗಳಿನಲ್ಲಿ ಸತತ ಒಂದು ವಾರಗಳ ಕಾಲ ಬಿದ್ದ ಇಬ್ಬನಿ ಮತ್ತು ಅಕಾಲಿಕ ಮಳೆಯಿಂದ ಶೇ.40 ಮಾವಿನ ಹೂವು, ಹೀಚು ಉದುರಿ ಹೋಗಿದ್ದು, ಉತ್ಪಾದನೆ ತೀವ್ರ ಕುಸಿತ ಕಂಡಿದೆ. ಉತ್ಪಾದನೆ ಕುಸಿತದ ಮಧ್ಯೆಯೂ ಹಾಗೋ ಹೀಗೋ ಸುಧಾರಿಸಿಕೊಂಡು ಮೇಲೆದ್ದ ಮಾವಿಗೆ ವಾರಾಂತ್ಯ ಕರ್ಫ್ಯೂ, ಮೇ 12ರವರೆಗಿನ 2ನೇ ಅಲೆಯ ಕರ್ಫ್ಯೂ ಮರ್ಮಾಘಾತ ನೀಡಿದಂತಾಗಿದೆ.

ಮಹಾರಾಷ್ಟ್ರ ಬಂದ್‌ ಆಘಾತ:

ಇನ್ನು ಕರ್ನಾಟಕದ ಅದರಲ್ಲೂ ಧಾರವಾಡ ಮತ್ತು ಬೆಳಗಾವಿ ಭಾಗದಲ್ಲಿ ಬೆಳೆಯುವ ಆಲೊ³ನ್ಸೊ ಮಾವಿನ ಹಣ್ಣಿಗೆ ಅತ್ಯಂತ ಹೆಚ್ಚಿನ ಬೇಡಿಕೆ ಇರುವುದೇ ಮುಂಬೈ, ಪುಣೆ, ನಾಗಪೂರ, ಕೊಲ್ಲಾಪೂರ, ಸೊಲ್ಲಾಪೂರ ಮತ್ತು ಔರಂಗಾಬಾದ ಜಿಲ್ಲೆಗಳಲ್ಲಿ. ಆದರೆ ಕಳೆದ 15 ದಿನಗಳ ಹಿಂದೆಯೇ ಕೊರೊನಾ ಮಾಹಾಮಾರಿಗೆ ಅಂಜಿ ಮಹಾರಾಷ್ಟ್ರ ಸರ್ಕಾರ ಸಂಪೂರ್ಣ ಲಾಕ್‌ಡೌನ್‌ ಘೋಷಣೆ ಮಾಡಿದ್ದರಿಂದ ಅಲ್ಲಿಗೆ ಅತೀ ಹೆಚ್ಚಿನ ಪ್ರಮಾಣದಲ್ಲಿ ಸಾಗಣೆಯಾಗಬೇಕಿದ್ದ ಮಾವು ಹುಬ್ಬಳ್ಳಿ, ಧಾರವಾಡ ಮತ್ತು ಬೆಳಗಾವಿ ಗೋದಾಮುಗಳಲ್ಲಿಯೇ ಉಳಿದುಕೊಂಡಿದೆ.

 ದಲ್ಲಾಳಿಗಳಿಗೂ ಬಿತ್ತು ಹೊಡೆತ:

ಪ್ರತಿ ವರ್ಷ ರೈತರು ಮಾತ್ರ ಮಾವಿನ ಹಾನಿ ಅನುಭವಿಸುತ್ತಿದ್ದರು. ಆದರೆ ಈ ವರ್ಷ ಕೊರೊನಾ ಸಂಪೂರ್ಣ ಕರ್ಫ್ಯೂನಿಂದ ನೇರವಾಗಿ ದಲ್ಲಾಳಿಗಳಿಗೂ ಹೊಡೆತ ಬಿದ್ದಿದೆ. ಸಂಕ್ರಾಂತಿ ಸುತ್ತ ತೋಟಗಳನ್ನು ಮುಂಗಡ ಕೊಟ್ಟು ಖರೀದಿಸಿಟ್ಟುಕೊಂಡ ದಲ್ಲಾಳಿಗಳು ರೈತರಿಗೆ ಅರ್ಧ ಹಣ ನೀಡಿ ಉಳಿದ ಹಣವನ್ನು ಸುಗ್ಗಿ ಸಂದರ್ಭದಲ್ಲಿ ನೀಡುತ್ತಾರೆ. ಈ ವರ್ಷ ಹೇಗೋ ಕೊರೊನಾ ಸಂಕಷ್ಟದಿಂದ ಮರಳಿ ಮಾರುಕಟ್ಟೆ ಹಳಿಗೆ ಬಂದಿದೆ ಎನ್ನುವ ಧೈರ್ಯದಲ್ಲಿ ದಲ್ಲಾಳಿಗಳು ಕೊಂಚ ಹೂಡಿಕೆ ಮಾಡಿದ್ದಾರೆ. ಇದೀಗ ಲಾಕ್‌ಡೌನ್‌ ಬಂದಿದ್ದರಿಂದ ಅವರ ಬಳಿಯೇ ಮಾವು ಉಳಿದುಕೊಳ್ಳಬೇಕಿದೆ.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.