ಮಾವು ಈ ವರ್ಷವೂ ಹುಳಿ


Team Udayavani, Apr 26, 2019, 1:13 PM IST

hub-1

ಹುಬ್ಬಳ್ಳಿ: ಮಾರುಕಟ್ಟೆಗೆ ಲಗ್ಗೆಯಿಟ್ಟ ಹಣ್ಣುಗಳ ರಾಜನಿಗೆ ಈಗ ಬಂಗಾರದ ಬೆಲೆ ಬಂದಿದೆ. ಹೊರ ರಾಜ್ಯಗಳಿಂದ ಮಾವು ಮಾರುಕಟ್ಟೆಗೆ ಬಂದಿದ್ದು, ಮಳೆಯಿಂದಾಗಿ ಬೆಳೆ ಕ್ಷೀಣಿಸಿದ ಪರಿಣಾಮ ದುಬಾರಿ ಹಣ್ಣು ಬಡವರಿಗೆ ಕೈಗೆಟುಕದಂತಾಗಿದೆ. ಬೆಳೆಗಾರರ ನಿರೀಕ್ಷೆಯಂತೆ ಮಾವು ಬಂದಿದ್ದರೆ ಚನ್ನಮ್ಮ ವೃತ್ತದಲ್ಲಿ ಕಣ್ಣಾಡಿಸಿದಲ್ಲೆಲ್ಲಾ ಮಾವಿನ ಹಣ್ಣಿನ ವ್ಯಾಪಾರದ್ದೇ ಭರಾಟೆ ಇರುತ್ತಿತ್ತು. ಬೆಳೆಗಾರರೇ ನೇರವಾಗಿ ಹಣ್ಣುಗಳನ್ನು ತಂದು ವ್ಯಾಪಾರ ಮಾಡುತ್ತಿದ್ದರು. ಆದರೆ ಹವಾಮಾನ ವೈಪರೀತ್ಯದಿಂದ ಈ ಬಾರಿ ಹಣ್ಣಿನ ಕೊರತೆಯಾಗಿದ್ದು, ಬೆರಳೆಣಿಕೆ ವ್ಯಾಪಾರಿಗಳು ಅಲ್ಪಸ್ವಲ್ಪ ಹಣ್ಣು ಖರೀದಿಸಿ ವ್ಯಾಪಾರದಲ್ಲಿ ತೊಡಗಿದ್ದಾರೆ. ದುಬಾರಿ ಬೆಲೆಯಿಂದ ಚಿಲ್ಲರೆ ವ್ಯಾಪಾರಿಗಳು ವ್ಯಾಪಾರಕ್ಕೆ ಹಿಂದೇಟು ಹಾಕುವಂತಾಗಿದೆ.

ಬೇಸಿಗೆ ಆರಂಭದಲ್ಲಿ ಮಾವು ಬೆಳಗಾರರಲ್ಲಿ ಉತ್ತಮ ಬೆಳೆ ಬರುವ ನಿರೀಕ್ಷೆ ಮೂಡಿತ್ತು. ಮರಗಳು ಹಿಡಿದಿದ್ದ ಹೂವು ಹಾಗೂ ಕಾಯಿ ನೋಡಿ ಈ ಬಾರಿ ಬಂಪರ್‌ ಬೆಳೆ ಕನಸು ಕಂಡಿದ್ದರು. ಆದರೆ ಕೆಲವೆಡೆ ಸುರಿದ ಆಲಿಕಲ್ಲು ಮಳೆಯಿಂದಾಗಿ ಹೂವು, ಕಾಯಿ ಉದುರಿ ಬೆಳೆಗಾರರ ಆಸೆ
ಬುಡಮೇಲು ಮಾಡಿದೆ.

ಮಹಾರಾಷ್ಟ್ರದಿಂದ ಬಂದಿರುವ ದೇವಗಡ ಆಪೂಸ್‌, ರತ್ನಗಿರಿ ಆಪೂಸ್‌ ಹಾಗೂ ಸ್ಥಳೀಯವಾಗಿ ದೊರೆಯುವ ಕಲಿ¾ ತಳಿಯ ಹಣ್ಣುಗಳು ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಿವೆ. ಕೆಲವೇ ತಳಿಯ ಹಣ್ಣುಗಳು ಮಾರುಕಟ್ಟೆಯಲ್ಲಿದ್ದು, ಬೆಲೆ ದುಬಾರಿ ಎನ್ನುವ ಕಾರಣಕ್ಕೆ ವ್ಯಾಪಾರಿಗಳು ಸಂಖ್ಯೆಯೂ ಕಡಿಮೆಯಿದೆ.

ಲೋಕಲ್‌ ಹಣ್ಣಿನ ನಿರೀಕ್ಷೆ: ಸ್ಥಳೀಯ ಹಣ್ಣುಗಳು ಮಾರುಕಟ್ಟೆಗೆ ಆಗಮಿಸುವ ನಿರೀಕ್ಷೆಯಲ್ಲಿ ವ್ಯಾಪಾರಿಗಳಿದ್ದಾರೆ. ಈ ಹಣ್ಣುಗಳ ಆಗಮನದಿಂದ ಗಗನಕ್ಕೇರಿರುವ ಬೆಲೆ ಒಂದಿಷ್ಟು ಕಡಿಮೆಯಾಗುವ ಸಾಧ್ಯತೆಗಳಿವೆ ಎನ್ನುವುದು ವ್ಯಾಪಾರಿಗಳ ನಿರೀಕ್ಷೆ. ಹೊರ ರಾಜ್ಯದ ಹಣ್ಣುಗಳನ್ನು ದುಬಾರಿ ಬೆಲೆ ನೀಡಿ ತಿನ್ನುವ ಬದಲು 15 ದಿನ ಕಳೆದರೆ ಸ್ಥಳೀಯ ಹಣ್ಣು ಮಾರುಕಟ್ಟೆಗೆ ಬರಲಿದೆ ಎಂಬುದು ಕೂಡ ಗ್ರಾಹಕರ ಲೆಕ್ಕಾಚಾರ.

ಸಗಟು ವ್ಯಾಪಾರದ ಹಂತದಲ್ಲೇ ಹಣ್ಣುಗಳು ತುಟ್ಟಿ ಹೊರಗಡೆಯಿಂದ ಬಂದಿರುವ ಹಣ್ಣು ಸಗಟು ವ್ಯಾಪಾರದ ಹಂತದಲ್ಲೇ ದುಬಾರಿಯಾಗಿರುವುದರಿಂದ ಚಿಲ್ಲರೆ ವ್ಯಾಪಾರಿಗಳು ದೊಡ್ಡ ಪ್ರಮಾಣದಲ್ಲಿ ಹಣ್ಣು ತಂದು ಮಾರಾಟ ಮಾಡಲು ಮನಸ್ಸು ಮಾಡುತ್ತಿಲ್ಲ. ಸಣ್ಣ ಪ್ರಮಾಣದಲ್ಲಿ ಖರೀದಿಸಿ ತಂದು ಅದರಲ್ಲಿ ಒಂದಿಷ್ಟು ಲಾಭ ಮಾಡಿಕೊಂಡು ಮಾರಾಟ ಮಾಡುತ್ತಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಹಣ್ಣು ಸಾಕಷ್ಟು ಪ್ರಮಾಣದಲ್ಲಿ ಕಡಿಮೆಯಿದೆ. ನಾವು ಸಗಟು ವ್ಯಾಪಾರಿಗಳಿಂದ ಖರೀದಿಸಿ ಮಾರಾಟ ಮಾಡುತ್ತಿದ್ದೇವೆ. ಸಾರಿಗೆ ವೆಚ್ಚ ಸೇರಿದಂತೆ ನಾವು ಒಂದಿಷ್ಟು ಉಳಿಸಿಕೊಂಡು ವ್ಯಾಪಾರ ಮಾಡಬೇಕು. ಆದರೆ ಗ್ರಾಹಕರು ಕಡಿಮೆ ಬೆಲೆಗೆ ಚೌಕಾಸಿ ಮಾಡುತ್ತಿದ್ದಾರೆ ಎನ್ನುತ್ತಾರೆ ವ್ಯಾಪಾರಿ ಆಲಂ ಸಾಬ ಮುಲ್ಲಾ.

ಗ್ರಾಹಕರು ಅಂಗಡಿಗಳ ಹತ್ತಿರವೇ ಹೋಗುತ್ತಿಲ್ಲ ಬಾಯಲ್ಲಿ ನೀರು ತರುವ ಮಾವಿನ ಹಣ್ಣು ಸವಿಯಬೇಕೆನಿಸುತ್ತದೆ. ಆದರೆ ಹಣ್ಣಿನ
ದರ ಕೇಳಿದರೆ ಗ್ರಾಹಕರು ಅಂಗಡಿಗಳ ಹತ್ತಿರವೇ ಹೋಗುತ್ತಿಲ್ಲ. ಮಧ್ಯಮ ಹಾಗೂ ಕೆಳ ವರ್ಗದ ಜನರು ಹಣ್ಣಿನ ರಾಜನ ಹತ್ತಿರವೇ ಸುಳಿಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಹಣ್ಣಿನ ಮಾರುಕಟ್ಟೆ ಬಣಗುಡುತ್ತಿದೆ. ಆದರೂ ಕೆಲ ಮಾವು ಪ್ರಿಯರು ನಾಲ್ಕೈದು ಡಜನ್‌ ಬದಲಿಗೆ ಎರಡು ಡಜನ್‌ಗೆ ಸೀಮಿತವಾಗುತ್ತಿದ್ದು, ವ್ಯಾಪಾರವೂ ಅಷ್ಟಕ್ಕಷ್ಟೆ ಎಂಬಂತಾಗಿದೆ

ಇತ್ತೀಚೆಗೆ ಸುರಿದ ಮಳೆಯಿಂದಾಗಿ ಈ ಬಾರಿ ಹೊರ ರಾಜ್ಯದಲ್ಲೂ ಬೆಳೆ ಕಡಿಮೆಯಿದೆ. ಉತ್ತಮ ಗುಣಮಟ್ಟದ ಹಣ್ಣು ಬೇರೆಡೆಗೆ
ಕಳುಹಿಸಲಾಗುತ್ತಿದೆ. ಹಣ್ಣಿನ ಕೊರತೆಯಿಂದಾಗಿ ಈ ಬಾರಿ ನಗರದಲ್ಲಿ ಮಾವು ದುಬಾರಿಯಾಗಿದೆ. ನಮ್ಮಲ್ಲೂ ಕೂಡ ಮಳೆಯಿಂದಾಗಿ ಕಳೆದ
ವರ್ಷಕ್ಕೆ ಹೋಲಿಸಿದರೆ ಬೆಳೆ ಪ್ರಮಾಣ ಕಡಿಮೆಯಾಗಲಿದೆ. ಹೀಗಾಗಿ ಸ್ಥಳಿಯ ಹಣ್ಣಿನ ಬೆಲೆಯೂ ದುಬಾರಿಯಾಗುವ ಸಾಧ್ಯತೆಗಳಿವೆ.
 ಜಿಲಾನಿ, ವ್ಯಾಪಾರಿ

ಒಂದೊಂದು ಕಡೆ ಒಂದೊಂದು ದರವಿದೆ. ಹೊರ ರಾಜ್ಯದಿಂದ ತರಿಸಲಾಗಿದೆ, ನಾವು ದುಬಾರಿ ಬೆಲೆಗೆ ಖರೀದಿಸಿದ್ದೇವೆ ಎಂದು ವ್ಯಾಪಾರಿಗಳು ದರ ಕಡಿಮೆ ಮಾಡುತ್ತಿಲ್ಲ. ಬೆಲೆ ನೋಡಿದರೆ ಮಾವು ಮುಟ್ಟಲಿಕ್ಕೂ ಆಗುವುದಿಲ್ಲ. ಆದರೆ ವರ್ಷಕ್ಕೊಮ್ಮೆ ತಿನ್ನುವ
ಹಣ್ಣು ಎನ್ನುವ ಕಾರಣಕ್ಕೆ ಖರೀದಿಸಲೇಬೇಕು. ನಾಲ್ಕೈದು ಡಜನ್‌ ತೆಗೆದುಕೊಳ್ಳುವ ಬದಲು ಎರಡು ಡಜನ್‌ ತೆಗೆದುಕೊಂಡಿದ್ದೇನೆ.
 ಸವಿತಾ ವಸ್ತ್ರದ, ಗ್ರಾಹಕಿ

ಸ್ಥಳೀಯವಾಗಿ ದೊರೆಯುತ್ತಿದ್ದ ಆಪೂಸ್‌ ಈ ಬಾರಿ ಸಾಕಷ್ಟು ಪ್ರಮಾಣದಲ್ಲಿ ಕಡಿಮೆಯಾಗುವ ಸಾಧ್ಯತೆಗಳಿವೆ. ನಿರಂತರ
ಮಳೆಯಿಂದ ಸಾಕಷ್ಟು ಬೆಳೆ ನಾಶವಾಗಿದೆ. ಹೀಗಾಗಿ ಸ್ಥಳೀಯವಾಗಿ ದೊರೆಯುವ ಹಣ್ಣಿನ ಕೊರತೆಯಿಂದಾಗಿ ಕಳೆದ ಬಾರಿಗಿಂತ ಈ
ಬಾರಿ ಹಣ್ಣಿನ ಬೆಲೆ ಹೆಚ್ಚಾಗುವ ಸಾಧ್ಯತೆಯಿದೆ. ಇದರಿಂದ ಮಾವು ಬೆಳೆದ ರೈತನಿಗೆ ಯಾವುದೇ ಲಾಭವಾಗುವುದಿಲ್ಲ.
 ಡಿ.ಟಿ. ಪಾಟೀಲ, ಮಾವು ಬೆಳೆಗಾರ

ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.