ಮಠ ಪಕ್ಷಕ್ಕೆ ಸೀಮಿತವಲ್ಲ
Team Udayavani, Apr 21, 2019, 12:08 PM IST
ಹುಬ್ಬಳ್ಳಿ: ಮೂರುಸಾವಿರ ಮಠ ಯಾವುದೇ ಒಂದು ಪಕ್ಷಕ್ಕೆ ಸೀಮಿತವಾಗಿಲ್ಲ. ಮಠಕ್ಕೆ ಬರುವ ಯಾವುದೇ ಪಕ್ಷದವರಿಗೂ ಸ್ವಾಮೀಜಿಯವರು ಒಳ್ಳೆಯದಾಗಲಿ ಎಂದು ಆಶೀರ್ವದಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದರು.
ಮೂರುಸಾವಿರಮಠಕ್ಕೆ ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರುಸಾವಿರ ಮಠ ಪಕ್ಷವೊಂದಕ್ಕೆ ಹೆಚ್ಚು ಆದ್ಯತೆ ನೀಡುತ್ತಿದೆ ಎಂಬರ್ಥದಲ್ಲಿ ಕೆಲವರು ಬಿಂಬಿಸಿದ್ದರು. ಆದರೆ, ಶ್ರೀಮಠ ಅಂತಹ ಕಾರ್ಯ ಮಾಡುತ್ತಿಲ್ಲ. ಮಠಕ್ಕೆ ಬರುವವರಿಗೆ ಒಳ್ಳೆಯದಾಗಲಿ ಎಂದು ಸ್ವಾಮೀಜಿಯವರು ಹೇಳುತ್ತಾರೆ ವಿನಃ ಯಾವುದೇ ಪಕ್ಷ-ವ್ಯಕ್ತಿಗಳಿಗೆ ಪರವಾಗಿ ನಿಲ್ಲುವುದಿಲ್ಲ. ಶ್ರೀಮಠವು ಭಕ್ತರು ಹಾಗೂ ಸಮಾಜಕ್ಕೆ ಸೇರಿದ್ದಾಗಿದೆ. ಶ್ರೀಮಠಕ್ಕೆ ತಮ್ಮ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ