ತೋಟಗಾರಿಕಾ ಬೆಳೆಗಾರರಿಗೆ ಗರಿಷ್ಠ 15 ಸಾವಿರ ಪರಿಹಾರ
Team Udayavani, Jun 10, 2020, 11:00 AM IST
ಹುಬ್ಬಳ್ಳಿ: ಲಾಕ್ಡೌನ್ದಿಂದ ಹಣ್ಣು ಮತ್ತು ತರಕಾರಿಗಳನ್ನು ಬೆಳೆದು ನಷ್ಟ ಹೊಂದಿದ ರೈತರಿಗೆ ತೋಟಗಾರಿಕೆ ಇಲಾಖೆ ವತಿಯಿಂದ ಪರಿಹಾರ ಧನ ನೀಡಲಾಗುತ್ತಿದೆ. ಪ್ರತಿ ಹೆಕ್ಟೇರ್ ಗೆ 15,000ರೂ. ನಿಗದಿಪಡಿಸಲಾಗಿದ್ದು, ಗರಿಷ್ಠ 1 ಹೆಕ್ಟೇರ್ಗೆ ಪರಿಹಾರ ನೀಡಲಾಗುವುದು.
ಬಾಳೆ, ಪಪ್ಪಾಯ, ಅಂಜೂರ, ಕಲ್ಲಂಗಡಿ ಮತ್ತು ಕರಬೂಜ, ತರಕಾರಿ ಬೆಳೆಗಳಾದ ಟೊಮೆಟೊ, ಹಸಿ ಮೆಣಸಿನಕಾಯಿ, ಹೂಕೋಸು, ಎಲೆಕೋಸು, ಸಿಹಿಗುಂಬಳ, ಬೂದುಗುಂಬಳ, ಗಜ್ಜರಿ, ಈರುಳ್ಳಿ ಮತ್ತು ಡೊಣ್ಣಮೆಣಸಿನಕಾಯಿ ಬೆಳೆದ ರೈತರು ಇದರ ಸದುಪಯೋಗ ಪಡೆಯಬಹುದು. 2019-20ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಬೆಳೆ ಸಮೀಕ್ಷೆ ಆಧಾರದ ಮೇಲೆ ಫಲಾನುಭವಿಯ ಆಯ್ಕೆ ಮಾಡಲಾಗುವುದು. ಬಾಳೆ ಹಾಗೂ ಈರುಳ್ಳಿ ಬೆಳೆಗೆ ಸಂಬಂಧಿಸಿದಂತೆ ಮಾರ್ಚ್ 2ನೇ ವಾರದ ನಂತರ ಕಟಾವಿಗೆ ಖರೀದಿಸುವ ಫಸಲಿಗೆ ಮಾತ್ರ ಪರಿಹಾರ ನೀಡಲಾಗುವುದು. ಕಲ್ಲಂಗಡಿ ಮತ್ತು ಕರಬೂಜಗಳು ಬೇಸಿಗೆ ಬೆಳೆಯಾಗಿದ್ದು, ಬೆಳೆ ಸಮೀಕ್ಷೆಯಲ್ಲಿ ಇವು ನಮೂದು ಆಗಿರದಿದ್ದರೆ, ನಿಗದಿತ ಅರ್ಜಿ ಜತೆಗೆ 2 ಫೋಟೋ, ಹೊಲದ ಉತಾರ, ಬ್ಯಾಂಕ್ ಪಾಸ್ ಪುಸ್ತಕ, ಆಧಾರ ಕಾರ್ಡ್ ಪ್ರತಿ ಹಾಗೂ ಜಂಟಿ ಖಾತೆ ಇದ್ದಲ್ಲಿ ಮಾತ್ರ 20 ರೂ. ಬಾಂಡ್ ಪೇಪರ್ ನಲ್ಲಿ ನೋಟರಿ ಅವರಿಂದ ದೃಢೀಕರಿಸಿದ ಪತ್ರದೊಂದಿಗೆ ಅರ್ಜಿ ಸಲ್ಲಿಸಬಹುದು. ಜೂನ್ 20 ಅಂತಿಮ ದಿನವಾಗಿದೆ. ಹೀಗೆ ಸಲ್ಲಿಸಿದ ಅರ್ಜಿಗಳನ್ನು ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಹಾಗೂ ತೋಟಗಾರಿಕೆ ಇಲಾಖೆ ಕಚೇರಿ ಸಂಪರ್ಕಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ವಿಜಯ ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್
Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ
Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ
Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ
Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ
MUST WATCH
ಹೊಸ ಸೇರ್ಪಡೆ
ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ
Liquid Nitrogen ಪಾನ್ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ
Arrest: ಬಾರ್ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ
Bengaluru: ಶಾಸಕ ಮಹಾಂತೇಶ್ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ
Road Mishap: ನೈಸ್ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು