ಬರಡಾಯ್ತು ಬಿದಿರು ಉತ್ಪನ್ನ ತಯಾರಕರ ಬದುಕು

ತೀವ್ರ ಸಂಕಷ್ಟದಲ್ಲಿ ಮೇದಾರ ಸಮಾಜ | ಪ್ಯಾಕೇಜ್‌ನಡಿ ದೊರೆಯದ ಪರಿಹಾರ | ನಿತ್ಯದ ಕೂಳಿಗೂ ಕೊರೊನಾ ಸಂಚಕಾರ

Team Udayavani, May 30, 2021, 6:47 PM IST

262726hub-2

ವರದಿ : ­ಅಮರೇಗೌಡ ಗೋನವಾರ

ಹುಬ್ಬಳ್ಳಿ: ಮದುವೆ ಸೀಜನ್‌ನಲ್ಲಿ ಉತ್ತಮ ವ್ಯಾಪಾರ- ವಹಿವಾಟಿನಿಂದ ಖುಷಿಯಲ್ಲಿರಬೇಕಾಗಿದ್ದ ಬಿದಿರು ಉತ್ಪನ್ನಗಳ ತಯಾರಿಕೆ, ಮಾರಾಟ ವೃತ್ತಿಯಲ್ಲಿರುವ ಮೇದಾರ ಸಮಾಜದವರು, ಕೋವಿಡ್‌ ಲಾಕ್‌ಡೌನ್‌ ನಿಂದ ವ್ಯಾಪಾರವಿಲ್ಲದೆ ಪರದಾಡುವಂತಾಗಿದೆ.

ಸರಕಾರ ಘೋಷಿಸಿದ ವಿಶೇಷ ಪ್ಯಾಕೇಜ್‌ ನಡಿ ತಮಗೆ ಯಾವುದೇ ಪರಿಹಾರ ದೊರೆಯದಿರುವ ಬಗ್ಗೆ ಸಂಕಷ್ಟ ಪಡುತ್ತಿದ್ದಾರೆ. ಲಾಕ್‌ಡೌನ್‌ನಿಂದ ಬಿದಿರು ಉತ್ಪನ್ನಗಳಿಗೆ ಅಗತ್ಯವಾದ ಬಾಂಬೂ ಸಾಗಣೆ ವಾಹನಗಳ ಸಂಚಾರ ಇಲ್ಲವಾಗಿದೆ. ಬಿದಿರು ಉತ್ಪನ್ನಗಳ ವಹಿವಾಟು ಸಹ ಇಲ್ಲವಾಗಿದೆ. ಹಲವು ದಶಕಗಳಿಂದ ಇದೇ ವೃತ್ತಿ ನಂಬಿಕೊಂಡ ಅನೇಕ ಕುಟುಂಬಗಳು ಸಂಕಷ್ಟಕ್ಕೀಡಾಗಿವೆ. ಕೋವಿಡ್‌ ಮೊದಲ ಅಲೆಯಲ್ಲಿಯೂ ಪರಿಹಾರ ದೊರೆತಿಲ್ಲ ಎಂಬುದು ಇವರ ಅಳಲಾಗಿದೆ.

500 ಕುಟುಂಬ ಅತಂತ್ರ: ಏಪ್ರಿಲ್‌-ಮೇ ಮದುವೆ ಸೀಜನ್‌ ಆಗಿದ್ದು, ಜನರು ಬಿದಿರಿನ ಬುಟ್ಟಿ, ಮೊರ ಇನ್ನಿತರ ಉತ್ಪನ್ನ ಖರೀದಿಸುತ್ತಾರೆ. ಆದರೆ, ಈ ಬಾರಿ ಕೋವಿಡ್‌ ಹಿನ್ನೆಲೆಯಲ್ಲಿ ಮದುವೆಗಳೇ ನಡೆಯುತ್ತಿಲ್ಲ. ಅಲ್ಲಲ್ಲಿ ನಡೆದರೂ ಬಿದಿರಿನ ಉತ್ಪನ್ನಗಳ ಖರೀದಿಗೆ ಜನ ಬಾರದ ಸ್ಥಿತಿ ಇದೆ. ಲಾಕ್‌ಡೌನ್‌ ಹಿನ್ನೆಲೆಯಲ್ಲೂ ಜನರು ಖರೀದಿಗೆ ಮುಂದಾಗುತ್ತಿಲ್ಲ. ಬಿದಿರು ಉತ್ಪನ್ನಗಳ ಖರೀದಿಗೆ ಗ್ರಾಮೀಣ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತಿದ್ದರು, ಅವರೂ ಬರುತ್ತಿಲ್ಲ. ಕಳೆದ ವರ್ಷ ಕೋವಿಡ್‌ ಮೊದಲ ಅಲೆಯೂ ಏಪ್ರಿಲ್‌-ಮೇ ವೇಳೆಯಲ್ಲಿ ವಕ್ಕರಿಸಿದ್ದರಿಂದ ವ್ಯಾಪಾರ ಇಲ್ಲದೆ ಮೇದಾರ ಸಮಾಜದವರು ಸಂಕಷ್ಟ ಪಟ್ಟಿದ್ದರು. ಈ ವರ್ಷವೂ ಅದು ಮುಂದುವರಿದಿದೆ. ಮದುವೆ ಸೀಜನ್‌, ಸಾಮಾನ್ಯ ಮಾರಾಟ ಅಲ್ಲದೆ, ವಿವಿಧ ಜಾತ್ರೆ-ಮೇಳಗಳಲ್ಲಿಯೂ ತಮ್ಮ ಉತ್ಪನ್ನಗಳೊಂದಿಗೆ ಮಳಿಗೆ ಹಾಕಿ ಒಂದಿಷ್ಟು ಆದಾಯ ಕಂಡುಕೊಳ್ಳುತ್ತಿದ್ದರು. ಕಳೆದ 2 ವರ್ಷಗಳಿಂದ ಅದು ಇಲ್ಲವಾಗಿದೆ.

ಹಳೇ ಹುಬ್ಬಳ್ಳಿ ಸೇರಿದಂತೆ ನಗರದಲ್ಲಿ ಸುಮಾರು 500 ಕುಟುಂಬಗಳು ಬಿದಿರು ಉತ್ಪನ್ನಗಳ ತಯಾರಿಕೆ, ಮಾರಾಟವನ್ನೇ ನಂಬಿಕೊಂಡಿದ್ದಾರೆ. ಈ ಎಲ್ಲ ಕುಟುಂಬಗಳು ಇದೀಗ ವ್ಯಾಪಾರ-ವಹಿವಾಟು ಇಲ್ಲದೆ ಸಂಕಷ್ಟ ಪಡುವಂತಾಗಿದೆ. ತಯಾರಿಸಿದ ಉತ್ಪನ್ನಗಳು ಮಾರಾಟವಾಗದೆ ಉಳಿದಿವೆ. ಅಲಂಕಾರಿಕ, ಹೂ ಕುಂಡಗಳು, ಬೆತ್ತದ ಕುರ್ಚಿ, ಮಂಚ ಸೇರಿದಂತೆ ವಿವಿಧ ಉತ್ಪನ್ನ ತಯಾರಿಸುವವರು ಸೀಜನ್‌ನಲ್ಲಿ ಹಾಗೂ ಸಾಮಾನ್ಯವಾಗಿ ದಿನಕ್ಕೆ 2,000-3000 ಸಾವಿರ ರೂ. ವಹಿವಾಟು ನಡೆಸುತ್ತಿದರು. ಕೊರೊನಾ ಹೊಡೆತದ ನಂತರ ನಿತ್ಯ 200-300 ರೂ. ವಹಿವಾಟಿಗೂ ಪರದಾಡುವಂತಾಗಿದೆ. ಮುಂದೇನು ಎಂಬ ಚಿಂತೆ ಕಾಡುತ್ತಿದೆ.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.