ವೀರಶೈವ ಜಂಗಮರೇ ಬೇಡ ಜಂಗಮರು: ಪಾಟೀಲ


Team Udayavani, Aug 5, 2018, 5:14 PM IST

5-agust-21.jpg

ಬನಹಟ್ಟಿ: ಈಗಿನ ಎಲ್ಲ ವೀರಶೈವ ಜಂಗಮರೇ ಕಾನೂನಿನ ಪ್ರಕಾರ ಬೇಡ ಜಂಗಮರು ಎಂದು ಅಖಿಲ ಕರ್ನಾಟಕ ಬೇಡ ಜಂಗಮದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವೀರೇಂದ್ರ ಪಾಟೀಲ ತಿಳಿಸಿದರು.

ಶನಿವಾರ ಬನಹಟ್ಟಿ ಡಾ. ನಾಗಲೋಟಿಮಠ ಸಾಹಿತ್ತಿಕ ಹಾಗೂ ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಂಡ ನಗರಸಭೆ ವ್ಯಾಪ್ತಿಯ ಎಲ್ಲ ನಗರ ಮತ್ತು ಗ್ರಾಮಗಳ ಜಂಗಮ ಸಮಾಜದ ಸಮುದಾಯವರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಜಂಗಮ ಸಮಾಜ ಸಂಘಟನೆ ಇಲ್ಲದ ಕಾರಣ ಇಂದು ಸರ್ಕಾರದ ಅನೇಕ ಸೌಲಭ್ಯಗಳಿಂದ ವಂಚಿತವಾಗುತ್ತಿದೆ. ಸಂವಿಧಾನ ನಮಗೆ ಕರ್ತವ್ಯ ಮತ್ತು ಹಕ್ಕುಗಳನ್ನು ನೀಡಿದೆ. ಆದರೆ ಸಮಾಜಕ್ಕೆ ಸಾಂವಿಧಾನಿಕವಾಗಿ ಜಂಗಮರೆಲ್ಲ ಬೇಡ ಜಂಗಮರೆ ಎಂದರು.

ಆದರೆ ಕೆಲವೇ ಕೆಲವು ಜನಪ್ರತಿನಿಧಿಗಳಿಂದ ನಮ್ಮ ಸಮುದಾಯಕ್ಕೆ ತೊಂದರೆಯಾಗುತ್ತಿದೆ ಎಂದರು. ಬ್ರಿಟಿಷರ ಕಾಲದ 1901ರಲ್ಲಿ ಬೇಡುವ ಜಂಗಮರೆಲ್ಲರನ್ನು ಹಿಂದುಳಿದ ಜನಾಂಗಕ್ಕೆ ಸೇರಿಸಲು ಒಪ್ಪಿಗೆ ದೊರಕಿತ್ತು. ಆದರೆ 1921ರಲ್ಲಿ ಅದು ಅನುಷ್ಠಾನಕ್ಕೆ ತರಲು ಕಾರಣವಾಯಿತು. ನಂತರ 1931ರಲ್ಲಿ ಜಂಗಮರನ್ನು ಪ.ಜಾತಿ ಮತ್ತು ಪ.ಪಂಗಡದ ಗುಂಪಿಗೆ ಸೇರಿಸಿ ಕೇಂದ್ರ ಸರ್ಕಾರ ಕಾನೂನಿನಡಿಯಲ್ಲಿ ಅಧಿಸೂಚನೆ ಹೊರಡಿಸಿತು. ವೀರಶೈವ ಜಂಗಮರೆಲ್ಲರೂ ಸುಮಾರು 90 ವರ್ಷಗಳ ಹಿಂದೆಯೇ ಮೀಸಲಾತಿ ದೊರಕಿದೆ. ಆದರೆ ಇಂದಿನವರೆಗೂ ನಾವ್ಯಾರೂ ಅರ್ಜಿ ಸಲ್ಲಿಸಿ ಜಾತಿ ಪ್ರಮಾಣ ಪತ್ರ ಪಡೆದು ಅದರ ಸದುಪಯೋಗ ಪಡೆದಿಲ್ಲ. ಆದ್ದರಿಂದ ನಾವೆಲ್ಲರೂ ಅರ್ಜಿ ಸಲ್ಲಿಸಿ ಸಮಾಜದ ಅಸ್ತಿತ್ವಕ್ಕಾಗಿ ಹೋರಾಡಬೇಕಿದೆ ಎಂದರು.

1947 ರಿಂದ ಜಂಗಮರೆಲ್ಲರೂ ಮೀಸಲಾತಿಗೆ ಅರ್ಹರಾಗಿದ್ದು, ಇಂದು ಎಲ್ಲರೂ ಸಂಘಟಿತರಾಗಿ ಸರ್ಕಾರ ನಮಗೆ ನೀಡುವ ಹಕ್ಕಿನ ಸೌಲಭ್ಯಗಳನ್ನು ಪಡೆದುಕೊಳ್ಳೋಣ ಎಂದರು. ನಂತರ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಮಖಂಡಿಯ ಸಿದ್ದಲಿಂಗಯ್ಯ ಕಂಬಿ ಮಾತನಾಡಿ, ನಾನು ಬೇಡ ಜಂಗಮನೆಂದು ಅನೇಕ ವರ್ಷಗಳ ಹಿಂದೆಯೇ ಸರ್ಕಾರದಿಂದ ಕಾನೂನಿನಡಿಯಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ಕಳೆದ 10 ವರ್ಷದ ಹಿಂದೆ ಮುಧೋಳ ಮೀಸಲು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದೆ. ಆದ ಕಾರಣ ನಾವೆಲ್ಲರೂ ಪ್ರಜಾಪ್ರಭುತ್ವ ವ್ಯವಸ್ಥೆ ಇರುವ ಈ ದೇಶದಲ್ಲಿರುವರಾಗಿದ್ದು, ನಮ್ಮ ಹಕ್ಕಿಗಾಗಿ ಹೋರಾಟ ಮಾಡಿ ಅದರ ಸದುಪಯೋಗ ಪಡೆದುಕೊಳ್ಳೋಣ ಎಂದರು.

ಮುಧೋಳ ನಗರಸಭೆ ಅಧ್ಯಕ್ಷೆ ದಾಕ್ಷಾಯಣಿ ಹಲಸಂಗಿಮಠ, ಸೋಮಯ್ಯ ಮಠದ, ಬಸಯ್ಯ ಹಿರೇಮಠ, ಈರಯ್ಯ ವಿಭೂತಿ, ಈರಯ್ಯ ಕತ್ತಿ, ಗುರುಪಾದಯ್ಯ ಹುಣಶ್ಯಾಳಮಠ, ಚಂದ್ರಶೇಖರ ಕಾಡದೇವರ, ಕಲ್ಲಯ್ಯ ಕಾಡದೇವರ, ಚನ್ನಮಲ್ಲಯ್ಯ ಹಿರೇಮಠ ಹಾಗೂ ರಬಕವಿ ಆಸಂಗಿ, ಅಸ್ಕಿ, ಹೊಸೂರ ಮತ್ತು ಬನಹಟ್ಟಿ ನಗರ ಸೇರಿದಂತೆ ಅನೇಕ ಗ್ರಾಮಗಳಿಂದ ಆಗಮಿಸಿದ ಜಂಗರು ಸೇರಿದಂತೆ ಅನೇಕರಿದ್ದರು. ಬಸಯ್ಯ ವಸ್ತ್ರದ ಸ್ವಾಗತಿಸಿದರು. ಶಿವರುದ್ರಯ್ಯ ಕಾಡದೇವರ ನಿರೂಪಿಸಿದರು. ಗುರುಬಸಯ್ಯ ಜಮಖಂಡಿಮಠ ವಂದಿಸಿದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.