ನವೋದ್ಯಮಿಗಳಿಗೆ ಮೆಗಾ ಉತ್ಸವ ವೇದಿಕೆ


Team Udayavani, Oct 19, 2019, 11:42 AM IST

huballi-tdy-2

ಹುಬ್ಬಳ್ಳಿ: ಒಂದೇ ಸೂರಿನಡಿ ಬಟ್ಟೆ, ಯಂತ್ರಗಳು, ಬೆಳ್ಳಿ ಸಾಮಗ್ರಿಗಳು, ಸಿಹಿ ತಿನಿಸುಗಳು ಬೇಕೆ? ಹಾಗಿದ್ದಲ್ಲಿ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾಭವನಕ್ಕೆ ಬನ್ನಿ.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ದೇಶಪಾಂಡೆ ಫೌಂಡೇಶನ್‌ ಆಶ್ರಯದಲ್ಲಿ ದೀಪಾವಳಿ ಹಬ್ಬದ ನಿಮಿತ್ತ ನವೋದ್ಯಮಿ ಮೆಗಾ ಉತ್ಸವ ಆಯೋಜಿಸಲಾಗಿದೆ.

ಇದರಲ್ಲಿ ವಿವಿಧ ಜಿಲ್ಲೆಯಿಂದ ಆಗಮಿಸಿರುವ ವ್ಯಾಪಾರಸ್ಥರು ತಮ್ಮ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಹಾಗೂ ಪ್ರದರ್ಶನಕ್ಕೆ ಅಣಿಗೊಳಿಸಿದ್ದಾರೆ. ಹಾಸನ, ಶಿವಮೊಗ್ಗ, ಗಂಗಾವತಿ, ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಿಂದ ವಾಪಾರಸ್ಥರು ಆಗಮಿಸಿದ್ದಾರೆ.

ವಿಶೇಷವಾಗಿ ಮನೆಯಲ್ಲಿಯೇ ಶುದ್ಧವಾದ ಎಣ್ಣೆ ತಯಾರಿಸುವ ಯಂತ್ರ, ತರಕಾರಿ ಸಂಸ್ಕರಣೆ ಮಾಡುವ ಯಂತ್ರಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಡಲಾಗಿದೆ. ಈ ಯಂತ್ರದ ಮೂಲಕ ಮನೆಯಲ್ಲಿ ಬೇಕಾದ ಬೀಜಗಳ ಎಣ್ಣೆಯನ್ನು ತಯಾರಿಸಿಕೊಳ್ಳುವ ಮೂಲಕ ಶುದ್ಧತೆಗೆ ಆದ್ಯತೆ ನೀಡಬಹುದು.

ತರಕಾರಿ ಹಾಗೂ ಹಣ್ಣು-ಹಂಪಲ ಶುದ್ಧೀಕರಣ ಯಂತ್ರದ ಮೂಲಕ ತರಕಾರಿಗಳಿಗೆ ಅಂಟಿಕೊಂಡಿರುವ ಕ್ರಿಮಿನಾಶಕ-ಬ್ಯಾಕ್ಟಿರಿಯಾಗಳನ್ನು ಸ್ವತ್ಛಗೊಳಿಸಬಹುದು ಎಂದು ಪೋರ್ಟೆಬಲ್‌ ಹೋಮ್‌ ಯೂಸ್‌ ಕೋಲ್ಡ್‌ಪ್ರಸ್‌ ಆಯಿಲ್‌ ಪ್ರಸ್‌ ಯಂತ್ರದ ಕುರಿತು ಡಾ| ನಾಗರಾಜ ಮಾಹಿತಿ ನೀಡುತ್ತಾರೆ.

ದೀಪಾವಳಿ ಸಮೀಪಿಸುತ್ತಿದ್ದು, ಮನೆಯ ಅಲಂಕಾರಕ್ಕೆ ಬೇಕಾಗುವ ಮಣ್ಣಿನ ವಿವಿಧ ಬಗೆಯ ಹಣತೆಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಡಲಾಗಿದೆ. ಮ್ಯಾಜಿಕ್‌ ಲ್ಯಾಂಪ್‌, ಗಣೇಶ ದೀಪ, ಮಣ್ಣಿನ ಗ್ಲಾಸ್‌, ಐದು ದೀಪಗಳ ಸೆಟ್‌, ಬೋಟ್‌ ಗಣೇಶ ಸೇರಿದಂತೆ ದೀಪಾವಳಿ ಹಬ್ಬಕ್ಕೆ ಬೇಕಾಗುವ ವಿವಿಧ ಬಗೆಯ ವಸ್ತುಗಳನ್ನು ಮಾರಾಟಕ್ಕೆ ಇಡಲಾಗಿದೆ. ಈ ಹಣತೆಗಳ ದರ 50 ರೂ.ಗಳಿಂದ ಹಿಡಿದು 200ರ ವರೆಗೂ ಇದೆ ಎಂದು ಧನ್ಯ ಟೆರ್ರಾಕೋಟ್‌ನ ಮುಖ್ಯಸ್ಥ ಎಸ್‌.ಬಿ. ಹಾಲೇಶ ಹೇಳುತ್ತಾರೆ.

ಪ್ಲಾಸ್ಟಿಕ್‌ ನಿಷೇಧಿಸಿರುವ ಹಿನ್ನೆಲೆಯಲ್ಲಿ ಬಟ್ಟೆಯ ಬ್ಯಾಗ್‌ ಗಳು ಹೆಚ್ಚಿನ ಪ್ರಚಾರ ಪಡೆಯುತ್ತಿವೆ. ಹಲವು ಮಳಿಗೆದಾರರು ಪ್ಲಾಸ್ಟಿಕ್‌ ಬದಲಾಗಿ ಬಟ್ಟೆಯ ಬ್ಯಾಗ್‌ಗಳನ್ನು ಮಾರಾಟ ಹಾಗೂ ಪ್ರದರ್ಶನಕ್ಕೆ ಇಟ್ಟಿದ್ದಾರೆ. ಗೋಕಾಕ ಕರದಂಟು, ಐನಾಪುರ ಬಾಳು ಮಾಮಾ ಪೇಡೆ, ಬಿದಿರಿನ ವಸ್ತುಗಳು, ವಿವಿಧ ಬಗೆ ಬಟ್ಟೆಗಳು, ಮಹಿಳೆಯರಿಗಾಗಿ ವಿಶೇಷ ಜ್ಯುವೆಲರಿ ಸಾಮಗ್ರಿಗಳು, ನೋವು ನಿವಾರಕ ತೈಲಗಳು, ಗೃಹೋಪಯೋಗಿ ವಸ್ತುಗಳು ಗಮನ ಸೆಳೆಯುತ್ತಿವೆ. ಶುಕ್ರವಾರದಿಂದ ಆರಂಭಗೊಂಡಿರುವ ಮೆಗಾ ಉತ್ಸವ ನಾಲ್ಕು ದಿನಗಳವರೆಗೆ ನಡೆಯಲಿದ್ದು, ಕೆಲ ಸಾಮಗ್ರಿಗಳಿಗೆ ವಿಶೇಷ ರಿಯಾಯಿತಿ ಸಹ ನೀಡಲಾಗುತ್ತಿದೆ.

 

-ಬಸವರಾಜ ಹೂಗಾರ

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.