ಮುಂಡರಗಿ: ಶರಣರ ಚರಿತಾಮೃತ ಪ್ರವಚನ ಮಂಗಲ


Team Udayavani, Aug 6, 2018, 5:12 PM IST

6-agust-22.jpg

ಮುಂಡರಗಿ: ಇಳಕಲ್‌ನ ಮಹಾಂತ ಜೋಳಿಗೆಯ ಸಾಮಾಜಿಕ ಹರಿಕಾರ ಡಾ| ಮಹಾಂತ ಶಿವಯೋಗಿಗಳು ತಾಯಿಯಂತಹ ಅಂತಃಕರಣ ಹೊಂದಿದ್ದರು ಎಂದು ಡಾ| ತೋಂಟದ ಸಿದ್ದಲಿಂಗ ಸ್ವಾಮೀಜಿ ಹೇಳಿದರು. ಪಟ್ಟಣದ ಜ| ತೋಂಟದಾರ್ಯ ಮಠದಲ್ಲಿ ನಡೆದ ಶರಣರ ಚರಿತಾಮೃತ ಪ್ರವಚನ ಮಂಗಲ, ಮಾಸಿಕ ಶಿವಾನುಭವ, ಲಿಂ| ಡಾ| ಮಹಾಂತ ಶಿವಯೋಗಿಗಳ ಸ್ಮರಣೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಮಹಾಂತ ಶಿವಯೋಗಿಗಳು ಕೋಟಿಗೊಬ್ಬರಂತೆ ಸಿಗುತ್ತಾರೆ. ಬಸವ ತತ್ವನಿಷ್ಠರಾಗಿ ಯಾವುದೇ ಸಂದರ್ಭದಲ್ಲಿ ರಾಜಿಮಾಡಿಕೊಳ್ಳದೇ ಸಾಮಾಜಿಕ ಕಳಕಳಿ ಹೊಂದಿದ್ದರು. ಬಸವ ಪರಂಪರೆಯನ್ನು ಮುಂದುವರಿಸಿಕೊಂಡು ಬಂದರು. ಶಿಷ್ಯರನ್ನು ಮಮತಾಮೂರ್ತಿಯಂತೆ ಬೆಳೆಸುವಲ್ಲಿ ಪ್ರಮುಖ ಪತ್ರ ವಹಿಸಿದ್ದರು. ಅಲ್ಲದೇ ಒಂದು ಕಾಲದ ಜನಾಂಗವನ್ನು ಕಟ್ಟುವ ಕೆಲಸವನ್ನು ಮಹಾಂತ ಸ್ವಾಮೀಜಿ ಮಾಡಿದ್ದರು ಎಂದು ಜ| ತೋಂಟದ ಸಿದ್ದಲಿಂಗ ಸ್ವಾಮೀಜಿ ನುಡಿದರು. ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಮಾತನಾಡಿ, ವಿರಕ್ತ ಮಠಗಳ ಪರಂಪರೆಯು ಜಾತ್ಯತೀತ್ಯ ನಿಲುವು, ಸಮಾನತೆಯ ತತ್ವಗಳು ಜನರನ್ನು ಸೆಳೆಯುತ್ತವೆ. ಬಸವ ತತ್ವದ ಅರಿವು, ಆಚಾರ, ಅನುಭಾವ ಹೆಜ್ಜೆಯನ್ನು ಜೀವನದಲ್ಲಿ ಆಚರಣೆಗೆ ಮಹಾಂತ ಸ್ವಾಮೀಜಿ ತಂದಿದ್ದರು ಎಂದ ಅವರು, ಬಸವತತ್ವ ಉಳಿಸುವ ಸವಾಲು ನಮ್ಮೆದುರಿಗೆ ಇದೆ. ಬಸವಧರ್ಮ ಪ್ರಚಾರಕರ ಕೊರತೆಯು ಎದ್ದು ಕಾಣುತ್ತಿದೆ. ಬಸವ ತತ್ವದ ಆಚಾರ, ಸಂಸ್ಕಾರವನ್ನು ಮಕ್ಕಳಿಗೆ ಕಲಿಸಲು ಮುಂದಾಗಬೇಕು ಎಂದರು. 

ಇಳಕಲ್‌ನ ಗುರು ಮಹಾಂತ ಸ್ವಾಮೀಜಿ ಮಾತನಾಡಿ, ಬಸವತತ್ವ ಉಳಿಸಲು ಪ್ರತಿಯೊಬ್ಬರೂ ಎದೆಗೊಟ್ಟು ಕೆಲಸ ಮಾಡುವ ಅಗತ್ಯವಿದೆ. ಬಸವದಿ ಪ್ರಮಥರ ಆಶಯವನ್ನು ಮುಂದುವರಿಸಿಕೊಂಡು ಹೋಗಬೇಕು ಎಂದರು. ಎಸ್‌.ಎಸ್‌. ಪಟ್ಟಣಶೆಟ್ಟರ್‌, ಮುದುಗಲ್‌ನ ಮಹಾಂತ ಸ್ವಾಮೀಜಿ ಮಾತನಾಡಿದರು. ಮಾಜಿ ಸಚಿವ ಎಸ್‌.ಎಸ್‌. ಪಾಟೀಲ, ಶ್ರೀನಿವಾಸ ಉಪ್ಪಿನಬೆಟಗೇರಿ, ಡಾ| ಶಿವಕುಮಾರ ಕುಬಸದ, ಸೊಲಭಣ್ಣ ಜೋಬಾಳಿ, ಎಚ್‌. ವಿರುಪಾಕ್ಷಗೌಡ, ಸೋಮೇಶ್ವರ ಉಪ್ಪಿನಬೆಟ್ಟಗೇರಿ, ಉಮೇಶಯ್ಯ ಹಿರೇಮಠ, ವಿಶ್ವನಾಥ ಉಳ್ಳಾಗಡ್ಡಿ, ಶಿವಾನಂ ಕಡಪಟ್ಟಿ, ಗಿರೀಶಗೌಡ ಪಾಟೀಲ ಮತ್ತಿತರರು ಇದ್ದರು. ಕೊಟ್ರೇಶ ಅಂಗಡಿ, ದ್ರುವಕುಮಾರ ಹೊಸಮನಿ, ನಾಗೇಶ ಹುಬ್ಬಳ್ಳಿ, ಪಾಲಾಕ್ಷಿ ಗಣದಿನ್ನಿ, ಆನಂದಗೌಡ ಪಾಟೀಲ, ಈಶ್ವರಪ್ಪ ಬೆಟಗೇರಿ ಇದ್ದರು. ಎ.ಕೆ. ಮುಲ್ಲಾನವರ ಸ್ವಾಗತಿಸಿ, ನಿರೂಪಿಸಿದರು. ಮುಂಡರಗಿ: ಜ| ತೋಂಟದಾರ್ಯ ಮಠದಲ್ಲಿ ನಡೆದ ಪ್ರವಚನ ಮಂಗಲ, ಡಾ| ಮಹಾಂತ ಶಿವಯೋಗಿಗಳ ಸ್ಮರಣೆ ಕಾರ್ಯಕ್ರಮದಲ್ಲಿ ಡಾ| ತೋಂಟದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿದರು.

ಟಾಪ್ ನ್ಯೂಸ್

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

prlhad

Hubli; ರಾಜ್ಯ ಸರ್ಕಾರ ಸುಪ್ರೀಂ ಮೆಟ್ಟಿಲೇರಿದ್ದು ಖಂಡನೀಯ: ಪ್ರಹ್ಲಾದ ಜೋಶಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.