ವ್ಯಾಪಾರಸ್ಥರ ಸ್ವಯಂ ಲಾಕ್‌ಡೌನ್‌


Team Udayavani, Jul 3, 2020, 1:39 PM IST

ವ್ಯಾಪಾರಸ್ಥರ ಸ್ವಯಂ ಲಾಕ್‌ಡೌನ್‌

ನವಲಗುಂದ: ಪಟ್ಟಣದಲ್ಲಿಯೂ ಇಬ್ಬರಿಗೆ ಕೋವಿಡ್ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಸ್ವಯಂಪ್ರೇರಣೆಯಿಂದ ಲಾಕ್‌ಡೌನ್‌ಗೆ ವ್ಯಾಪಾರಸ್ಥರು ಮುಂದಾಗಿದ್ದು, ಶುಕ್ರವಾರದಿಂದ ಬೆಳಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ಮಾತ್ರ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ನಿರ್ಧರಿಸಿದ್ದಾರೆ.

ತಾಲೂಕಿನ ಮೊರಬ ಗ್ರಾಮದಲ್ಲಿ ಎಂಟ್ರಿಕೊಟ್ಟ ಕೋವಿಡ್ 40ಕ್ಕೂ ಹೆಚ್ಚು ಜನರಿಗೆ ತಗುಲಿದ್ದಲ್ಲದೆ ಅಕ್ಕಪಕ್ಕದ ಶಿರಕೋಳ, ಹಾಲಕುಸುಗಲ್ಲಕ್ಕೂ ವ್ಯಾಪಿಸಿದೆ. ಎರಡು ದಿನಗಳ ಹಿಂದಷ್ಟೆ ಪಟ್ಟಣದಲ್ಲಿಯೂ ಇಬ್ಬರಿಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ವ್ಯಾಪಾರ-ವಹಿವಾಟಿನ ಸಮಯವನ್ನು ಅಂಗಡಿಕಾರರೇ ಸ್ವಯಂಕೃತವಾಗಿ ಬದಲಾವಣೆ ಮಾಡಿದ್ದಾರೆ.

ಕ್ಷೌರದಂಗಡಿ ಬಂದ್‌: ಗ್ರಾಹಕರು ಎಲ್ಲಿಂದ ಬಂದರು ಎಂಬ ಮಾಹಿತಿ ಇರುವುದಿಲ್ಲ. ಅಲ್ಲದೇ ಕ್ಷೌರ ಮಾಡುವಾಗ ಅವರನ್ನು ಮುಟ್ಟಿ ಹತ್ತಿರದಿಂದ ಕ್ಷೌರ ಮಾಡಬೇಕಾಗುತ್ತದೆ. ಇದರಿಂದ ನಮಗೂ ಅಪಾಯ ತಪ್ಪಿದ್ದಲ್ಲವೆಂದು ತಿಳಿದ ಕ್ಷೌರಿಕ ಸಂಘದವರು ಸಭೆ ಮಾಡಿ ಜು. 1ರಿಂದ ತಾಲೂಕಿನ ಎಲ್ಲ ಕ್ಷೌರಿಕ ಅಂಗಡಿಗಳನ್ನು ಬಂದ್‌ ಮಾಡಿದ್ದಾರೆ. ಗ್ರಾಮೀಣ ಭಾಗದಿಂದ ಜನರ ಸಂಚಾರ ತಗ್ಗಿದ್ದರಿಂದ ಪಟ್ಟಣದ ಅನೇಕ ಹೋಟೆಲ್‌ಗ‌ಳು ಬಾಗಿಲು ಮುಚ್ಚಿವೆ. ಹೆಚ್ಚಿನ ಬಾಡಿಗೆ ಇದ್ದಂತಹ ಹೋಟೆಲ್‌ಗ‌ಳು ಅಂಗಡಿಯನ್ನು ಬಿಟ್ಟು ಹೋಗಿದ್ದಾರೆ.

ಕೋವಿಡ್ ಪಾಸಿಟಿವ್‌ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸ್ವಯಂ ಪ್ರೇರಣೆಯಿಂದ ಜು. 3ರಿಂದ ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮಾತ್ರ ಅಂಗಡಿಗಳನ್ನು ತೆರೆಯಬೇಕೆಂದು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ವ್ಯಾಪಾರಸ್ಥರು ಅಂಗಡಿಗೆ ಬರುವ ಗ್ರಾಹಕರಿಗೆ ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿ ಸ್ಯಾನಿಟೈಜರ್‌ ನೀಡಿ ವ್ಯಾಪಾರ ಮಾಡಬೇಕು.– ಆರ್‌.ಎನ್‌. ಧಾರವಾಡ, ವರ್ತಕರ ಸಂಘದ ಅಧ್ಯಕ್ಷ

ಲಾಕ್‌ಡೌನ್‌ ಸಡಿಲಿಕೆ ಬಳಿಕ ಸ್ವಲ್ಪಮಟ್ಟಿಗೆ ಜನದಟ್ಟಣೆ ಪ್ರಾರಂಭವಾಗಿದೆ. ಆದರೆ ತಾಲೂಕಿನಲ್ಲಿ ಪ್ರಕರಣಗಳು ಕಂಡುಬಂದಾಗಿನಿಂದ ಹೋಟೆಲ್‌ ವ್ಯಾಪಾರಕ್ಕೆ ಹೊಡೆತ ಬಿದ್ದಿದೆ. ಜವಾಬ್ದಾರಿ ಇರುವುದರಿಂದ ಸೂಕ್ತ ಭದ್ರತೆಯಲ್ಲಿ ಮುಜಾಂಗ್ರತೆ ವಹಿಸಿ ಹೋಟೆಲ್‌ ನಡೆಸುವಂತಾಗಿದೆ. –ಶ್ರೀಶೈಲಯ್ಯ ಮೂಲಿಮನಿ, ಸ್ನೇಹಿತರ ಹೋಟೆಲ್‌ ಮಾಲೀಕ

ಪಟ್ಟಣದಲ್ಲಿ ಕೋವಿಡ್ ಪಾಸಿಟಿವ್‌ ಬಂದಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸಂಘದಿಂದ ಸಭೆ ಮಾಡಿ ಗುರುವಾರದಿಂದ 10 ದಿನ ಸ್ವಯಂಕೃತವಾಗಿ ಕ್ಷೌರದಂಗಡಿಗಳನ್ನು ಬಂದ್‌ ಮಾಡಿದ್ದೇವೆ. –ವಿಜಯ ಕಡ್ಲಸ್ಕರ, ನವಲಗುಂದ ಕ್ಷೌರಿಕ ಸಂಘದ ಅಧ್ಯಕ್ಷ

 

-ಪುಂಡಲೀಕ ಮುಧೋಳೆ

ಟಾಪ್ ನ್ಯೂಸ್

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.