ಅವಳಿ ನಗರಕ್ಕೂ ಮೆಟ್ರೋ ಲಗ್ಗೆ


Team Udayavani, Nov 23, 2019, 12:06 PM IST

huballi-tdy-1

ಹುಬ್ಬಳ್ಳಿ: ಹೋಲ್‌ಸೇಲ್‌ ಹಾಗೂ ರಿಟೇಲ್‌ ಮಾರಾಟ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ಮೆಟ್ರೊ ಕ್ಯಾಶ್‌ ಆ್ಯಂಡ್‌ಕ್ಯಾರಿ ವ್ಯಾಪಾರ ಮಳಿಗೆ ಅವಳಿನಗರಕ್ಕೂ ಬರಲಿದೆ.

ಬೆಂಗಳೂರಿನಲ್ಲಿ 6 ವಿತರಣಾ ಕೇಂದ್ರಗಳನ್ನು ವಿಸ್ತರಿಸುವ ಮೂಲಕ ಪ್ರಸಿದ್ಧಿ ಪಡೆದಿರುವ ಮೆಟ್ರೊ ದ್ವಿತೀಯ ಸ್ತರದೆಡೆಗೆ ಮುಖ ಮಾಡಿದ್ದು, ಹುಬ್ಬಳ್ಳಿಯಲ್ಲಿ ತನ್ನ ಕೇಂದ್ರ ಮಾಡಲು ಮುಂದಾಗಿದೆ. ಇದು ಉತ್ತರ ಕರ್ನಾಟಕದಲ್ಲಿ ಮೊದಲ ಮೆಟ್ರೊ ಕೇಂದ್ರವಾಗಲಿದೆ. ಇಲ್ಲಿನ ಅಮರಗೋಳದ ಬಸ್‌ ನಿಲ್ದಾಣ ಹಿಂಭಾಗದಲ್ಲಿ ಕರ್ನಾಟಕ ಗೃಹ ಮಂಡಳಿ ಅಭಿವೃದ್ಧಿಪಡಿಸಿದ ಬಡಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ರಸ್ತೆ ಪಕ್ಕದಲ್ಲಿ ಮೆಟ್ರೊ ಕ್ಯಾಶ್‌ ಆ್ಯಂಡ್‌ ಕ್ಯಾರಿ ತಲೆ ಎತ್ತುತ್ತಿದೆ. ಹುಬ್ಬಳ್ಳಿಯ ಖುಷಿ ರಿಯಲ್‌ ಎಸ್ಟೇಟ್‌ ಕಂಪನಿ ಕಟ್ಟಡ ನಿರ್ಮಾಣ ಕಾಮಗಾರಿ ಗುತ್ತಿಗೆ ಪಡೆದುಕೊಂಡಿದ್ದು, ಕಾಮಗಾರಿ ಕಾರ್ಯ ಭರದಿಂದ ಸಾಗಿದೆ.

ಸುಮಾರು 6 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಮೆಟ್ರೊ ಕಾರ್ಯಾರಂಭ ಮಾಡಲಿದೆ. 2 ಎಕರೆಗಿಂತ ಹೆಚ್ಚು ಜಾಗವಿದ್ದು, ಸದ್ಯಕ್ಕೆ ಒಂದು ಭಾಗದಲ್ಲಿ ಮಾತ್ರ ಕಟ್ಟಡ ನಿರ್ಮಾಣ ಮಾಡಲಾಗುವುದು. ಮುಂದೆ ಉದ್ಯಮದ ಬೆಳವಣಿಗೆ ಪರಿಗಣಿಸಿ ವಿಸ್ತರಿಸುವ ಉದ್ದೇಶವನ್ನು ಸಂಸ್ಥೆ ಹೊಂದಿದೆ. ಎಲ್ಲ ಮೆಟ್ರೊ ಕೇಂದ್ರಗಳಂತೆ ಇಲ್ಲಿ ಕೂಡ ವಿಶಾಲವಾದ ಪಾರ್ಕಿಂಗ್‌ ಜಾಗ ಬಿಡಲಾಗಿದೆ. ಕೆಎಚ್‌ಬಿ ಕಾಲೋನಿಗೆ ಮೆಟ್ರೊ ಬರುವುದರಿಂದ ಖಂಡಿತವಾಗಿಯೂ ಈ ಪ್ರದೇಶದ ಸುತ್ತಮುತ್ತ ಭೂಮಿಯ ಬೆಲೆ ಹೆಚ್ಚಾಗಲಿದೆ.

ಆರ್ಥಿಕ ಮುಗ್ಗಟ್ಟಿನಿಂದಾಗಿ ರಿಯಲ್‌ ಎಸ್ಟೇಟ್‌ ಕುಸಿದಿದ್ದರಿಂದ ನವನಗರದ ಪ್ಲಾಟ್‌ ಖರೀದಿ-ಮಾರಾಟ ಮಂದಗತಿಯಲ್ಲಿತ್ತು. ಬೆಂಗಳೂರಿನಂತೆ ಇಲ್ಲಿ ಕೂಡ ಮೆಟ್ರೊ ಮಾಲ್‌ ಸುತ್ತಮುತ್ತಲಿನ ಭೂಮಿಯ ಬೆಲೆ ಏರುವ ವಿಶ್ವಾಸ ರಿಯಲ್‌ ಎಸ್ಟೇಟ್‌ ಉದ್ಯಮಿಗಳಲ್ಲಿದೆ. ಮೆಟ್ರೋ ಕೇಂದ್ರದಲ್ಲಿ ಹಲವರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷ ಉದ್ಯೋಗ ಸಿಗುವ ಸಾಧ್ಯತೆಯಿದೆ. ಮಾಲ್‌ ನಲ್ಲಿ ಸೇಲ್ಸ್‌ ಬಾಯ್ಸ, ಗರ್ಲ್ಸ್‌, ವಿಂಗಡಣಾ ಸಿಬ್ಬಂದಿ, ಸ್ವಚ್ಛತಾ ಸಿಬ್ಬಂದಿ, ಸಾಗಾಣಿಕೆ ಸಿಬ್ಬಂದಿ, ತಾಂತ್ರಿಕ ಸಿಬ್ಬಂದಿ, ನಿರ್ವಹಣೆ ಸಿಬ್ಬಂದಿ ಸೇರಿದಂತೆ ನೂರಾರು ಜನರಿಗೆ ಉದ್ಯೋಗ ಸಿಗಬಹುದಾಗಿದೆ. ಈಗಾಗಲೇ ಗಬ್ಬೂರ ಕ್ರಾಸ್‌ ಬಳಿ ಹೋಲ್‌ ಸೇಲ್‌ ಹಾಗೂ ರಿಟೇಲ್‌ ಮಾರಾಟಗಾರರಿಗಾಗಿಯೇ ರಿಲಾಯನ್ಸ್‌ ಮಾರ್ಕೆಟ್‌ ರಿಯಾಯಿತಿ ದರದಲ್ಲಿ ಸಾಮಗ್ರಿಗಳ ಮಾರಾಟ ಮಾಡುತ್ತಿದ್ದು, ಈಗ ಮತ್ತೂಂದು ಮಾರುಕಟ್ಟೆ ನಗರಕ್ಕಾಗಮಿಸುತ್ತಿದೆ.

ರೈತರಿಗೂ ಆಗುತ್ತೆ ಅನುಕೂಲ: ಮೆಟ್ರೊ ರೈತರಿಂದ ತರಕಾರಿ, ಹಣ್ಣುಗಳನ್ನು ಮಧ್ಯವರ್ತಿಗಳ ನೆರವಿಲ್ಲದೇ ನೇರವಾಗಿ ಖರೀದಿಸುವುದರಿಂದ ಈ ಭಾಗದ ರೈತರಿಗೆ ಅನುಕೂಲವಾಗಲಿದೆ. ಹಾಸ್ಟೆಲ್‌ಗ‌ಳು, ಹೋಟೆಲ್‌ ಗಳು, ರೆಸ್ಟೋರೆಂಟ್‌ಗಳು, ಕಲ್ಯಾಣ ಮಂಟಪಗಳು, ಆಸ್ಪತ್ರೆಗಳು ಇಲ್ಲಿಂದ ದೊಡ್ಡ ಪ್ರಮಾಣದಲ್ಲಿ ತರಕಾರಿ, ಹಣ್ಣು ಖರೀದಿಸಲಾರಂಭಿಸಿದರೆ ರೈತರ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗಲು ಸಾಧ್ಯವಿದೆ. ಕರ್ನಾಟಕದಲ್ಲಿ 2 ಸಂಗ್ರಹ ಕೇಂದ್ರಗಳಿವೆ. ಅಲ್ಲಿಂದ ರಾಜ್ಯದ ಮೆಟ್ರೊ ವಿತರಣಾ ಕೇಂದ್ರಗಳಿಗೆ ಪೂರೈಸಲಾಗುತ್ತದೆ.

ಏನೇನು ಸಿಗುತ್ತದೆ?:  ಟ್ರೇಡರ್ಸ್‌, ಹೋಟೆಲ್‌ಗ‌ಳು, ರೆಸ್ಟೋರೆಂಟ್‌, ರಿಸೆಲರ್, ಕ್ಯಾಟರರ್ಸ್‌, ಸಣ್ಣ ಉದ್ಯಮಿಗಳು ಇಲ್ಲಿ ಸಾಮಗ್ರಿಗಳನ್ನು ಖರೀದಿಸಬಹುದಾಗಿದೆ. ಸಂಸ್ಥೆ ರಿಯಾಯಿತಿ ದರದಲ್ಲಿ ಪೂರೈಕೆ ಮಾಡುತ್ತದೆ. ದಿನಬಳಕೆ ಸಾಮಗ್ರಿ, ಆಮದು ಸಾಮಗ್ರಿಗಳು, ಇಲೆಕ್ಟ್ರಾನಿಕ್ಸ್‌, ಹೋಮ್‌ ಅಪ್ಲಾಯನ್ಸಸ್‌, ಹೆಲ್ತ್‌ಕೇರ್‌,ಫಿಟ್ನೆಸ್, ಆಫೀಸ್ ಸಲ್ಯುಶನ್ಸ್‌, ಕ್ಲಾಥಿಂಗ್‌ ಅಸೆಸರಿಸ್‌, ಹಣ್ಣುಗಳು, ತರಕಾರಿಗಳು, ಫ್ರಾಜನ್‌ ಹಾಗೂ ಡೇರಿ ಉತ್ಪನ್ನಗಳು ಸೇರಿದಂತೆ ವಿವಿಧ ವಿಶ್ವದರ್ಜೆಯ ಸಾಮಗ್ರಿಗಳು ಇಲ್ಲಿ ಸಿಗಲಿವೆ. ಮೀನು, ಮಾಂಸ, ಕಾನೆಕ್ಷನರಿ, ಡಿಟರ್ಜಂಟ್‌, ಸೌಂದರ್ಯವರ್ಧಕಗಳು ಒಂದೇ ಸೂರಿನಡಿ ದೊರೆಯಲಿವೆ. ಅಲ್ಲದೇ ಮೆಟ್ರೊದ ಸ್ವಂತ ಬ್ರಾಂಡ್‌ಗಳಾದ ಆರೊ, ಫೈನ್‌ಲೈಫ್‌, ರಿಯೊಬಾ, ಮೆಟ್ರೊ ಶೆಫ್‌, ಮೆಟ್ರೊ ಪ್ರೊಫೆಶನಲ್‌, ಸಿಗ್ಮಾ, ಟ್ಯಾರಿಂಗ್ಟನ್‌ ಹೌಸ್‌, ಟೇಲರ್‌ ಆ್ಯಂಡ್‌ ಸನ್‌, ಫೇರ್‌ಲೈನ್‌, ಆಥೆಂಟಿಕ್‌, ಲಂಬರ್ಟಜಿ ಬ್ರಾಂಡ್‌ಗಳ ಉತ್ಪನ್ನಗಳು ಕೂಡ ಇಲ್ಲಿ ಸಿಗಲಿವೆ.

ಸಾಗಾಣಿಕೆ ವೆಚ್ಚ  ಉಳಿತಾಯ : ನವನಗರದಲ್ಲಿ ಮೆಟ್ರೊ ಆರಂಭಿಸುತ್ತಿರುವುದು ನಮಗೆಲ್ಲ ಖುಷಿ ತಂದಿದೆ. ರಿಟೇಲ್‌ ಮಾರಾಟಗಾರರಿಗೆ ಇದರಿಂದ ಅನುಕೂಲವಾಗಲಿದೆ. ರಿಲಾಯನ್ಸ್‌ ಮಾರ್ಕೆಟ್‌ಗೆ ಹೋಗಿ ಸಾಮಗ್ರಿ ತರುವುದು ದುಸ್ತರವಾಗುತ್ತಿತ್ತು. ಇಲ್ಲಿಯೇ ಸಾಮಗ್ರಿ ಸಿಗುವುದರಿಂದ ಸಾಗಾಣಿಕೆ ವೆಚ್ಚ ಉಳಿತಾಯವಾಗಲಿದೆ. ಬೆಂಗಳೂರಿನಲ್ಲಿ ಮೆಟ್ರೊದಿಂದ ಸಣ್ಣ ಪುಟ್ಟ ವ್ಯಾಪಾರಿಗಳಿಗೆ ಅನುಕೂಲವಾಗಿದೆ. ಇಲ್ಲಿ ಕೂಡ ಕಿರಾಣಿ, ದಿನಸಿ ಅಂಗಡಿಗಳ ವ್ಯಾಪಾರಿಗಳು ಮೆಟ್ರೊ ಕಸ್ಟಮರ್‌ ಕಾರ್ಡ್‌ ಮಾಡಿಸಿಕೊಂಡು ಕಡಿಮೆ ದರದಲ್ಲಿ ಉತ್ಪನ್ನಗಳನ್ನು ಖರೀದಿ ಮಾಡಿ ಮಾರಬಹುದಾಗಿದೆ ಎಂದು ವ್ಯಾಪಾರಿ ಶರಣಪ್ಪ ಹೇಳುತ್ತಾರೆ.

ಏನಿದು ಮೆಟ್ರೊ?: ಬ್ಯುಸಿನೆಸ್‌ ಟು ಬ್ಯುಸಿನೆಸ್‌ನಲ್ಲಿ ಅಂತಾರಾಷ್ಟ್ರೀಯ ಲೀಡರ್‌ ಸಂಸ್ಥೆ ಇದಾಗಿದೆ. ಜಗತ್ತಿನ 35 ದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರೊ ತನ್ನ ವಿತರಣಾ ಕೇಂದ್ರಗಳಲ್ಲಿ ಸುಮಾರು 18,000 ವಿವಿಧ ರೀತಿಯ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದೆ. ಮೆಟ್ರೊ ಸಂಸ್ಥೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ 1,50,000 ಜನರಿಗೆ ಉದ್ಯೋಗ ನೀಡಿದೆ. 2016-17ನೇ ಸಾಲಿನಲ್ಲಿ ಸಂಸ್ಥೆ ಜಾಗತಿಕವಾಗಿ 37 ಬಿಲಿಯನ್‌ ಪೌಂಡ್‌ ವಹಿವಾಟು ನಡೆಸಿದೆ. 2003ರಲ್ಲಿ ಭಾರತದಲ್ಲಿ ಮೊದಲ ವಿತರಣಾ ಕೇಂದ್ರ ಆರಂಭಿಸಿದ್ದು, ಸದ್ಯ 27 ಕೇಂದ್ರಗಳನ್ನು ಹೊಂದಿದೆ. ಬೆಂಗಳೂರಿನಲ್ಲಿ 6 ವಿತರಣಾ ಕೇಂದ್ರಗಳಿವೆ.

ಮಳೆಯಿಂದಾಗಿ ಇನ್ನೊಂದು ಕೇಂದ್ರ ವಿಳಂಬ: ಮೆಟ್ರೊ ಸಂಸ್ಥೆಯ ಇನ್ನೊಂದು ಕ್ಯಾಶ್‌ ಆ್ಯಂಡ್‌ ಕ್ಯಾರಿ ವಿತರಣಾ ಕೇಂದ್ರದ ಕಾಮಗಾರಿ ನಡೆದಿದೆ. ಮಳೆಯ ಕಾರಣದಿಂದಾಗಿ 3 ತಿಂಗಳು ವಿಳಂಬವಾಗಿ ಕಾಮಗಾರಿ ಆರಂಭವಾಗುತ್ತಿದೆ.ತೆಗ್ಗಿನಲ್ಲಿ ನೀರು ನಿಂತಿದ್ದರಿಂದ ನೀರನ್ನು ತೆರವುಗೊಳಿಸಬೇ ಕಿದ್ದ ಕಾರಣ ವಿಳಂಬವಾಯಿತು. ಇನ್ನು 6 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಸೇವೆ ಆರಂಭಗೊಳ್ಳಬಹುದಾಗಿದೆ. 5 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಲಾಗಿದೆ ಎಂದು ಕಾಮಗಾರಿ ನಿರ್ವಹಣೆ ಸಿಬ್ಬಂದಿ ಅಭಿಪ್ರಾಯಪಡುತ್ತಾರೆ.

 

-ವಿಶ್ವನಾಥ ಕೋಟಿ

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.