ವಾರದಲ್ಲಿ ಮಲೇಷಿಯಾ ಮರಳು ರಾಜ್ಯಕ್ಕೆ: ವಿನಯ
Team Udayavani, Aug 16, 2017, 7:10 AM IST
ಧಾರವಾಡ: ಮರಳಿನ ಕೊರತೆ ನೀಗಿಸುವ ಹಿನ್ನೆಲೆಯಲ್ಲಿ ಇನ್ನು ಒಂದೇ ವಾರದಲ್ಲಿ ಮಲೇಷಿಯಾದಿಂದ ರಾಜ್ಯಕ್ಕೆ ಮರಳು ಬರಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ ಕುಲಕರ್ಣಿ ಹೇಳಿದರು.
ಇಲ್ಲಿನ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಮಾಧ್ಯಮದವ ರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮರಳಿನ ಕೊರತೆ
ನೀಗಿಸಲು ಹೊರ ದೇಶಗಳಿಂದ ಮರಳು ತರಿಸಲಾಗುತ್ತಿದೆ. ಈ ಪೈಕಿ ಮಲೇಶಿಯಾದಿಂದ ಮರಳು ಅತಿ ಕಡಿಮೆ ದರದಲ್ಲಿ
ಲಭ್ಯವಾಗಿದೆ.
ದೇಶದಲ್ಲಿನ ಮರಳನ್ನು ಹಾಗೆಯೇ ಉಳಿಸಿಕೊಳ್ಳುವುದು ಮತ್ತು ರಾಜ್ಯದಲ್ಲಿ ಮರಳಿಗೆ ಉಂಟಾಗಿರುವ ಕೊರತೆ ನೀಗಿಸಲು ಸರ್ಕಾರ ಮೊದಲ ಬಾರಿಗೆ ವಿದೇಶದಿಂದ ಮರಳು ತರುವ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.
ಅನೇಕ ಖಾಸಗಿ ಕಂಪನಿಗಳು ಮರಳು ನೀಡಲು ಮುಂದೆ ಬಂದಿವೆ. ಇದರಿಂದ ಮರಳನ್ನು ಗುಡ್ಡೆ ಹಾಕಿಕೊಂಡು ಮಾರುಕಟ್ಟೆ
ನಿಯಂತ್ರಿಸುವವರ ಮೇಲೆ ಹಿಡಿತ ಸಾಧಿಸಲು ಅನುಕೂಲವಾಗುತ್ತದೆ.
ಈಗಾಗಲೇ ಈ ಬಗ್ಗೆ ರಾಜ್ಯಮಟ್ಟದ ಹಿರಿಯ ಅಧಿಕಾರಿಗಳು ಎಲ್ಲ ಪತ್ರ ವ್ಯವಹಾರ ಮುಗಿಸಿದ್ದು, ವಾರದಲ್ಲಿ ಮಲೇಷಿಯಾದಿಂದ ಮರಳು ರಾಜ್ಯಕ್ಕೆ ತಲುಪಲಿದೆ ಎಂದು ಹೇಳಿದರು.
ಎಂ. ಸ್ಯಾಂಡ್ ಲಭ್ಯ: ಉತ್ಪಾದಕ ಮರಳು (ಎಂ. ಸ್ಯಾಂಡ್) ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ. ರಾಜ್ಯಕ್ಕೆ ಬೇಕಾಗಿರುವ 24 ದಶಲಕ್ಷ ಮೆಟ್ರಿಕ್ ಟನ್ ಪೈಕಿ 13 ದಶಲಕ್ಷ ಮೆಟ್ರಿಕ್ ಟನ್ ಎಂ.ಸ್ಯಾಂಡ್ ರೂಪದಲ್ಲಿ ಲಭ್ಯವಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ