22ರ ನಂತರ ಸ್ಥಿತಿ ನೋಡಿ ಲಾಕ್‌ಡೌನ್ : ಸಚಿವ ಪ್ರಹ್ಲಾದ ಜೋಶಿ

15 ದಿನಗಳಿಗಾಗುವಷ್ಟು ದಿನಸಿ ಖರೀದಿಸಿ, ಮನೆಯಲ್ಲೇ ಇರಿ!  ­ಪದೇ ಪದೇ ಹೊರಗಡೆ ತೆರಳಬೇಡಿ: ಜೋಶಿ ಮನವಿ

Team Udayavani, May 18, 2021, 1:24 PM IST

17hub-21

ಹುಬ್ಬಳ್ಳಿ:ಸರಕಾರ ಮೇ 22ರ ನಂತರ ಪರಿಸ್ಥಿತಿ ನೋಡಿಕೊಂಡು ರಾಜ್ಯದಲ್ಲಿ ಲಾಕ್‌ಡೌನ್‌ ಮುಂದುವರಿಸುವ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಬೇಕೆಂಬುದು ನನ್ನ ಸಲಹೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಇಲ್ಲಿನ ಕಿಮ್ಸ್‌ ಆಸ್ಪತ್ರೆಗೆ ಜೈನ್‌ ಇಂಟರ್‌ ನ್ಯಾಷನಲ್‌ ಟ್ರೇಡ್‌ ಆರ್ಗನೈಜೇಶನ್‌ (ಜಿತೋ)ವತಿಯಿಂದ ಸೋಮವಾರ ಕೊಡಮಾಡಲಾದ ಆಕ್ಸಿಜನ್‌ ಆನ್‌ ವ್ಹೀಲ್ಸ್‌ ವಾಹನವನ್ನು ಕಿಮ್ಸ್‌ ನಿರ್ದೇಶಕರಿಗೆ ಹಸ್ತಾಂತರಿಸಿ ಅವರು ಮಾತನಾಡಿದರು.

ಲಾಕ್‌ಡೌನ್‌ ಇನ್ನಷ್ಟು ದಿನ ಮುಂದುವರಿಸಬೇಕೆಂದು ತಜ್ಞರು ನೀಡಿದ ವರದಿ ನಾನು ನೋಡಿಲ್ಲ. ಸದ್ಯ ಮೇ 24ರವರೆಗೆ ಕಠಿಣ ಲಾಕ್‌ಡೌನ್‌ ಜಾರಿಯಲ್ಲಿದೆ. ಮೇ 20-22ರವರೆಗೆ ಪರಿಸ್ಥಿತಿ ನೋಡಿಕೊಂಡು, ಆಕಸ್ಮಾತ್‌ ಸೋಂಕಿತರ ಸಂಖ್ಯೆ ಕಡಿಮೆಯಾಗದಿದ್ದರೆ ಆಗ ಲಾಕ್‌ಡೌನ್‌ ಮುಂದುವರಿಸುವ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಬೇಕು. ಲಾಕ್‌ಡೌನ್‌ ಪರಿಣಾಮದಿಂದ ಕೋವಿಡ್‌ ಪ್ರಕರಣಗಳ ಸಂಖ್ಯೆ ಇಳಿಮುಖವಾಗಲು ಸಮಯ ಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ. 15 ದಿನಗಳಿಗೆ ಆಗುವಷ್ಟು ದಿನಸಿ ಖರೀದಿಸಿ, ಮನೆಯಲ್ಲೇ ಇರಿ. ಪದೇ ಪದೇ ಹೊರಗಡೆ ತೆರಳಬೇಡಿ ಎಂದು ಮನವಿ ಮಾಡಿದರು.

ಆಕ್ಸಿಜನ್‌ ಕೊರತೆಯಿಲ್ಲ: ಕಿಮ್ಸ್‌ಗೆ 25 ಬಿಎಲ್‌ ವೆಂಟಿಲೇಟರ್‌ ಹೊಸದಾಗಿ ಆಗಮಿಸಿವೆ. ಜಿಲ್ಲೆಯಲ್ಲಿ 8-10 ದಿನಗಳಿಗೆ ಆಗುವಷ್ಟು ಆಕ್ಸಿಜನ್‌ ಇದೆ. ಜಿಲ್ಲೆಗೆ ಅವಶ್ಯಕತೆ ಇರುವಷ್ಟು ಆಕ್ಸಿಜನ್‌ ಬೆಡ್‌ಗಳ ಪ್ರಮಾಣ ಹೆಚ್ಚಿಸ ಲಾಗುವುದು. ಕುವೈತ್‌ನಿಂದ ಆಗಮಿಸಿದ 50 ಮೆಟ್ರಿಕ್‌ ಟನ್‌ ಆಕ್ಸಿಜನ್‌ ಅನ್ನು ವಿವಿಧ ಜಿಲ್ಲೆಗೆ ಹಂಚಲಾಗುವುದು. ಸಾರ್ವಜನಿಕರು ಕೋವಿಡ್‌ ಆಗಮಿಸಿದ ತಕ್ಷಣ ಹತ್ತಿರದ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆಯಿರಿ. ಆರಂಭದಲ್ಲಿ ಚಿಕಿತ್ಸೆ ಪಡೆದವರಿಗೆ ಕೋವಿಡ್‌ ನಿಂದ ಹೆಚ್ಚಿನ ತೊಂದರೆಯಾಗಿಲ್ಲ ಎಂದರು.

ತುರ್ತು ಚಿಕಿತ್ಸೆಗೆ ಆಕ್ಸಿಜನ್‌ ಆನ್‌ ವ್ಹೀಲ್‌: ಜಿತೋ ವತಿಯಿಂದ ಸೂಲ್ಕ್ ವಾಹನವನ್ನು ತುರ್ತು ಸಂದರ್ಭದ ಚಿಕಿತ್ಸೆಗಾಗಿ ಮಾರ್ಪಡಿಸಲಾಗಿದೆ. ಕೋವಿಡ್‌ನಿಂದ ಬಳಲುತ್ತಿರುವ ರೋಗಿಗಳು ಕಿಮ್ಸ್‌ನಲ್ಲಿ ಬೆಡ್‌ ಸಿಗುವವರೆಗೆ ವಾಹನದಲ್ಲಿದ್ದು ಚಿಕಿತ್ಸೆ ಪಡೆಯಬಹದು. ಒಟ್ಟು 6 ಜನರಿಗೆ ಆಕ್ಸಿಜನ್‌ ಸಹಿತ ಇತರೆ ಸೌಕರ್ಯಗಳ ವ್ಯವಸ್ಥೆ ಈ ವಾಹನದಲ್ಲಿ ಕಲ್ಪಿಸಲಾಗಿದೆ. 72ಸಾವಿರ ವೆಚ್ಚದ 9 ಲೀಟರ್‌ ಸಾಮರ್ಥಯದ 6 ಆಕ್ಸಿಜನ್‌ ಕಾನ್ಸಂಟ್ರೇಟರ್ಸ್‌ಗಳನ್ನು ಇದರಲ್ಲಿ ಅಳವಡಿಸಲಾಗಿದೆ. ದೇಶದಲ್ಲಿ ಆಕ್ಸಿಜನ್‌ ಕಾನ್ಸಂಟ್ರೇಟರ್ಸ್‌ಗಳ ಕೊರತೆ ಇರುವುದರಿಂದ ದುಬೈನಿಂದ ಆಮದು ಮಾಡಿಕೊಂಡು ವಾಹನ ಸಿದ್ಧಪಡಿಸಲಾಗಿದೆ. ಚೆನ್ನೈನಲ್ಲಿ ಈ ಮಾದರಿಯ 20 ವಾಹನಗಳನ್ನು ಸಿದ್ಧಪಡಿಸಿ ಸರಕಾರಕ್ಕೆ ನೀಡಲಾಗಿದೆ. ಮುಂದಿನ ದಿನದಲ್ಲಿ ಧಾರವಾಡ ಜಿಲ್ಲಾಸ್ಪತ್ರೆಗೂ ಆಕ್ಸಿಜನ್‌ ಆನ್‌ ವ್ಹೀಲ್‌ ವಾಹನ ನೀಡುವುದಾಗಿ ಜಿತೋ ಸಂಘಟನೆ ಹುಬ್ಬಳ್ಳಿ ಅಧ್ಯಕ್ಷ ಶಾಂತಿಲಾಲ ಓಸವಾಲ ಹೇಳಿದರು.

ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ, ಕಿಮ್ಸ್‌ನ ನಿರ್ದೇಶಕ ಡಾ|ರಾಮಲಿಂಗಪ್ಪ ಅಂಟರತಾನಿ, ಪ್ರಾಂಶುಪಾಲ ಡಾ| ಈಶ್ವರ ಹೊಸಮನಿ, ಎಸ್‌.ಎಸ್‌. ಶೆಟ್ಟರ ಫೌಂಡೇಶನ್‌ದ ಸಂಕಲ್ಪ ಶೆಟ್ಟರ, ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಆರ್‌ಎಸ್‌ಎಸ್‌ನ ಪ್ರಮುಖ ಶ್ರೀಧರ ನಾಡಗೇರ, ಜಿತೋದ ರಾಕೇಶ ಕಠಾರಿಯಾ, ಗೌತಮ ಓಸವಾಲ, ಕಿಷನ್‌ ಕಠಾರಿಯಾ, ವಿನೋದ ಪಠವಾ, ಚಿರಾಗ ಭಂಡಾರಿ, ವೈಭವ ಜೈನ, ರಿಷಬ ಇತರರು ಇದ್ದರು.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.