ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ; ರೈಲ್ವೇ ಆಸ್ತಿ ಹಾನಿ-ಕಂಡಲ್ಲಿ ಗುಂಡು
ರೈಲ್ವೇ ಆಸ್ತಿ ಹಾನಿ ಬಗ್ಗೆ ಸಚಿವ ಸುರೇಶ್ ಅಂಗಡಿ ಆಕ್ರೋಶ
Team Udayavani, Dec 18, 2019, 5:19 AM IST
ಹುಬ್ಬಳ್ಳಿ: ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ರೈಲ್ವೇ ಆಸ್ತಿಗೆ ಹಾನಿ ಮಾಡುತ್ತಿರುವ ಘಟನೆಗಳು ನಡೆಯುತ್ತಿದ್ದು, ಅಗತ್ಯ ಬಿದ್ದರೆ ಇಂತಹ ಸಮಾಜ ಘಾತಕ ಶಕ್ತಿಗಳಿಗೆ ಕಂಡಲ್ಲಿ ಗುಂಡು ಹಾಕಬೇಕು ಎಂದು ರಾಜ್ಯ ಸರಕಾರಗಳಿಗೆ ಸೂಚಿಸುತ್ತೇನೆ ಎಂದು ಕೇಂದ್ರ ರೈಲ್ವೇ ಸಹಾಯಕ ಸಚಿವ ಸುರೇಶ ಅಂಗಡಿ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಂತಿಯುತ ಪ್ರತಿಭಟನೆಗೆ ಎಲ್ಲರ ಬೆಂಬಲವಿರುತ್ತದೆ. ಆದರೆ ಹಿಂಸಾಚಾರದ ಹೋರಾಟ ವನ್ನು ಯಾರೂ ಸಹಿಸುವುದಿಲ್ಲ. ರೈಲ್ವೇ ಆಸ್ತಿ ಹಾನಿ ಮಾಡುವ ದುಷ್ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಸಮಾಜಘಾತುಕ ಶಕ್ತಿಗಳಿಗೆ ಕಂಡಲ್ಲಿ ಗುಂಡು ಹಾಕಬೇಕು. ಹಿಂಸಾಚಾರಕ್ಕೆ ಇಳಿದಿರುವವರು ವಲಸಿಗರೇ ಹೊರತು ನಮ್ಮ ದೇಶದವರಲ್ಲ ಎಂದರು.
ರೈಲುಗಳಿಗೆ ಬೆಂಕಿ ಹಚ್ಚುವುದು, ನಿಲ್ದಾಣಗಳಲ್ಲಿನ ವಸ್ತುಗಳನ್ನು ನಾಶ ಮಾಡುತ್ತಿರುವುದನ್ನು ನೋಡಿದರೆ ಆಕ್ರೋಶ ಉಂಟಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?