ಸಚಿವ ವಿನಯ ಕುಲಕರ್ಣಿ ಹತ್ಯೆಗೆ ಸಂಚು?
Team Udayavani, Dec 14, 2017, 11:35 AM IST
ಧಾರವಾಡ: ಯೋಗೀಶಗೌಡ ಕೊಲೆ ಪ್ರಕರಣದ ಆರೋಪಿ ಬಸವರಾಜ ಮುತ್ತಗಿ ಅಥವಾ ಜಿಲ್ಲಾ ಉಸ್ತುವಾರಿ ಸಚಿವ ವಿನಯ್
ಕುಲಕರ್ಣಿ ಅವರನ್ನು ಹತ್ಯೆ ಮಾಡಲು ಆದಿತ್ಯ ಮಯೂರ ರೇಸಾರ್ಟ್ನಲ್ಲಿ ಸಂಚು ರೂಪಿಸಿರುವ ಸಂಶಯ ವ್ಯಕ್ತವಾಗಿದೆ ಎಂದು ಮಹಾನಗರ ಪೊಲೀಸ್ ಆಯುಕ್ತ ಎಂ. ಎನ್.ನಾಗರಾಜ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನವಲೂರು ಬಳಿ ಇರುವ ಆದಿತ್ಯ ಮಯೂರ ಹೋಟೆಲ್ ಹೊರಭಾಗದಲ್ಲಿ
ಮಂಗಳವಾರ ತಡರಾತ್ರಿ ಗುಂಡು ಹಾರಿಸಿದ ಘಟನೆ ನಡೆದಿದ್ದು, ಗುಂಡು ಹಾರಿಸಲು ಕಾರಣರಾದ ಮೂವರು ಆರೋಪಿಗಳ ಪೈಕಿ
ಓರ್ವ ತನ್ನ ಬಳಿ ಇದ್ದ ಪಿಸ್ತೂಲಿನಿಂದ ಎರಡು ಸುತ್ತು ಗುಂಡು ಹಾರಿಸಿದ್ದಾನೆ. ಆರೋಪಿಗಳು ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಅಥವಾ ಯೋಗೀಶಗೌಡ ಕೊಲೆಯ ಮುಖ್ಯ ಆರೋಪಿ ಬಸವರಾಜ ಮುತ್ತಗಿಯನ್ನು ಕೊಲೆ ಮಾಡಲು ಸಂಚು ರೂಪಿಸಿ
ದ್ದರಾ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಆದರೆ, ವಿಚಾರಣೆ ನಂತರವೇ ಸತ್ಯಾಸತ್ಯತೆ ಹೊರಬೀಳಲಿದೆ ಎಂದರು. ಮಲಪ್ರಭಾ ನಗರದ ಹನುಮಂತಗೌಡ ಪಾಟೀಲ,
ರಾಘವೇಂದ್ರ ಮತ್ತು ನಾಗರಾಜ್ ಎಂಬುವವರನ್ನು ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ದಂತೆ ವಶಕ್ಕೆ
ಪಡೆಯಲಾಗಿದ್ದು,ಬಂಧಿತ ಹನುಮಂತಗೌಡ ಅವರಿಂದ ಪರವಾನಗಿ ಇರುವ ಪಿಸ್ತೂಲ್, ನಾಲ್ಕು ಸಜೀವ ಗುಂಡು ಮತ್ತು 5 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ. ಯಾವ ಕಾರಣಕ್ಕಾಗಿ ಗುಂಡು ಹಾರಿಸಲಾಗಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು