
ಸಚಿವ ಸ್ಥಾನ ಸಿಗದ್ದಕ್ಕೆ ಬೇಸರವಿದೆ,ಸಹಿಸಿಕೊಳ್ಳುವೆ: ಅರವಿಂದ ಬೆಲ್ಲದ
Team Udayavani, Aug 6, 2021, 1:07 PM IST

ಧಾರವಾಡ: ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸ್ಥಾನಮಾನ ಸಿಗದೇ ಇರುವುದು ಬೇಸರ ತಂದಿದೆ. ಆದರೂ ಪಕ್ಷದ ಚೌಕಟ್ಟಿನಲ್ಲಿ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ. ಕ್ಷೇತ್ರದ ಜನರ ಸೇವೆ ಮಾಡುವಲ್ಲಿ ಇದ್ಯಾವುದೂ ಅಡೆತಡೆಯಾಗುವುದಿಲ್ಲ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸಂಪುಟದ ಎಲ್ಲಾ ಸ್ನೇಹಿತರಿಗೂ ಶುಭಾಶಯ ಕೋರುತ್ತೇನೆ. ನನಗೆ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರೂ ಬೀದಿಗಿಳಿದು ಪ್ರತಿಭಟನೆ ನಡೆಸಬಾರದು. ಏನೇ ಬರಲಿ ಎಲ್ಲರೂ ಒಂದಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡೋಣ. ಮತಕ್ಷೇತ್ರವನ್ನು ಕಳೆದ ಎರಡು ಅವಧಿಯಿಂದ ಪ್ರತಿನಿಧಿಸುತ್ತಿದ್ದೇನೆ. ಕ್ಷೇತ್ರದ ಮತದಾರರ ಪ್ರೀತಿ-ವಿಶ್ವಾಸ, ಬೆಂಬಲದಿಂದ ಇಂದು ನನ್ನ ಹೆಸರು ರಾಜ್ಯದ ಅತ್ಯುನ್ನತ ಹುದ್ದೆಯವರೆಗೆ ಪರಿಗಣಿಸಲ್ಪಟ್ಟು, ಮೋದಿ ಅವರ ಗಮನಕ್ಕೂ ಬರುವಂತಾಗಿದೆ. ಇದು ನಿಮ್ಮೆಲ್ಲರ ಆರ್ಶೀವಾದವೇ ಸರಿ ಎಂದಿದ್ದಾರೆ.
ಶಾಸಕನಾಗಿ ಇಡೀ ರಾಜ್ಯದಲ್ಲೇ ಮೊದಲ ಬಾರಿಗೆ ನನ್ನ ಕ್ಷೇತ್ರದಲ್ಲಿ ಸುಮಾರು 6000 ಪಕ್ಕಾ ಮನೆ ನಿರ್ಮಾಣ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಹಕಾರದಿಂದ ಧಾರವಾಡದಲ್ಲಿ ಐಐಟಿ, ಐಐಐಟಿ ಪ್ರಾರಂಭಿಸಿದ್ದು, ಉನ್ನತ ಶಿಕ್ಷಣ ಕೇಂದ್ರ, ಹಲವು ಕಡೆಗಳಲ್ಲಿ ಕಾಂಕ್ರೀಟ್ ರಸ್ತೆಗಳ ನಿರ್ಮಾಣ, ಗ್ರಾಮೀಣ ಪ್ರದೇಶದಲ್ಲಿ ಬ್ಯಾರೇಜ್ ನಿರ್ಮಾಣ ಸೇರಿದಂತೆ ಅನೇಕ ಯೋಜನೆಗಳನ್ನು ಎಲ್ಲರ ಸಹಕಾರ, ಬೆಂಬಲದಿಂದ ಕಾರ್ಯಗತಗೊಳಿಸಿದ್ದೇನೆ. ಕ್ಷೇತ್ರದ ಜನರ ಸಮಸ್ಯೆ ಬಗೆಹರಿಸುವ ಕಾಯಕದ ಜತೆಗೆ ನಾನು ನಂಬಿಕೊಂಡು ಬಂದ ಸಿದ್ಧಾಂತ, ಸ್ವತ್ಛ ಮತ್ತು ಭ್ರಷ್ಟಾಚಾರ ರಹಿತ ರಾಜಕೀಯ ಅನುಷ್ಠಾನಕ್ಕೆ ಬದ್ಧವಿದ್ದೇನೆ. ಇದಲ್ಲದೇ, ಭ್ರಷ್ಟಾಚಾರಿಗಳ ವಿರುದ್ಧ ಈ ಹಿಂದಿನಂತೆಯೇ ಧ್ವನಿ ಎತ್ತುತ್ತೇನೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Owaisi; ತಾಕತ್ತಿದ್ರೆ ಚೀನಾದ ಮೇಲೆ ಸರ್ಜಿಕಲ್ ದಾಳಿ ನಡೆಸಿ; ಬಿಜೆಪಿಗೆ ಒವೈಸಿ ಸವಾಲು

RamaNagar: ಗುರುವಿನಂತೆ ಶಿಷ್ಯನಿಗೂ ಮುಖ್ಯಮಂತ್ರಿ ಹುದ್ದೆ ಕೈಜಾರಿತಾ?

DK; 27ನೇ ವರ್ಷಕ್ಕೆ ರಾಜಕೀಯ ಪ್ರವೇಶ…ಟ್ರಬಲ್ ಶೂಟರ್ ಡಿಕೆಶಿ ರಾಜಕೀಯದ ಏಳು..ಬೀಳು

DCM Post; ಹೈಕಮಾಂಡ್ ನಿರ್ಧಾರವನ್ನು ಕೋರ್ಟ್ ತೀರ್ಪಿನಂತೆ ಸ್ವೀಕರಿಸಿದ್ದೇನೆ: ಡಿಕೆಶಿ

2ನೇ ಬಾರಿಗೆ ಒಲಿದ ಸಿಎಂ ಪಟ್ಟ…ವಕೀಲ ವೃತ್ತಿಯಿಂದ ಸಿಎಂ ಗದ್ದುಗೆವರೆಗಿನ ಸಿದ್ದು ಪಯಣ…
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
