ರಸ್ತೆ ಗುಂಡಿ ಮುಚ್ಚಿಸಲು ಶಾಸಕರ ತಾಕೀತು

ಪ್ರತಿ ತಿಂಗಳು ಮೂರು ಸಾವಿರ ರೂ. ನಿರ್ವಹಣೆ ವೆಚ್ಚ ನೀಡಲಾಗುತ್ತಿದೆ ಎಂದು ವೀರಕರ ಹೇಳಿದರು.

Team Udayavani, Jul 20, 2021, 5:11 PM IST

Dharwad

ಕುಂದಗೋಳ: ಮಳೆ ಪರಿಣಾಮ ಅನೇಕ ರಸ್ತೆಗಳಲ್ಲಿ ತಗ್ಗು ಗುಂಡಿಗಳು ಬಿದ್ದಿದ್ದು, ಅಧಿಕಾರಿಗಳು ಗುಂಡಿಗಳನ್ನು ಮುಚ್ಚಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕೆಂದು ಜಿಪಂ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಶಾಸಕಿ ಕುಸುಮಾವತಿ ಶಿವಳ್ಳಿ ತಾಕೀತು ಮಾಡಿದರು. ಪಟ್ಟಣದ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ಬಹುತೇಕ ರಸ್ತೆಗಳ ಮಧ್ಯೆ
ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ ಎಂದು ಜನರು ದೂರುತ್ತಿದ್ದಾರೆ. ಇಲಾಖೆಯಲ್ಲಿ ಕುಳಿತುಕೊಂಡು ಕಾಲಹರಣ ಮಾಡಬೇಡಿ. ಮೊದಲು ಎಲ್ಲ ರಸ್ತೆಗಳ ಗುಂಡಿ ಮುಚ್ಚಿ ಜನರಿಗೆ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಸೂಚಿಸಿದರು.

ಲೋಕೋಪಯೋಗಿ ಇಲಾಖೆ ಅಧಿಕಾರಿ ವರದಿ ಮಂಡಿಸುವಾಗ ಶಾಸಕಿ ಮಧ್ಯೆ ಪ್ರವೇಶಿಸಿ, ಶಿರೂರ ಬಳಿ ಇರುವ ರೈಲ್ವೆ ಸೇತುವೆ ಶಿಥಿಲಗೊಂಡು 6 ತಿಂಗಳು ಗತಿಸಿದರೂ ಇದುವರೆಗೂ ದುರಸ್ತಿ ಕಾರ್ಯ ಆರಂಭಿಸಿಲ್ಲ ಎಂದು ತರಾಟೆ ತೆಗೆದುಕೊಂಡರು. ಕೂಡಲೇ ದುರಸ್ತಿ ಕಾರ್ಯ ಆರಂಭಿಸಬೇಕೆಂದು ಎಚ್ಚರಿಸಿದರು. ಕೃಷಿ ಇಲಾಖೆ ಅಧಿಕಾರಿ ಸದಾಶಿವ ಕಾನೋಜಿ ವರದಿ ಮಂಡಿಸಿ, ವಿವಿಧ ಮುಂಗಾರು ಬೆಳೆಗಳಿಗೆ ರೋಗ ಬಾಧೆ ಕಂಡುಬಂದಿದೆ. ಹತೋಟಿಗೆ ಔಷಧಗಳನ್ನು ಸಿಂಪಡಿಸಲು ರೈತರಿಗೆ ವಾಟ್ಸ್‌ ಆ್ಯಪ್‌ ಗ್ರುಪಿನಲ್ಲಿ ಮಾಹಿತಿ ರವಾನಿಸುತ್ತಿದ್ದೇವೆ ಎಂದು ಹೇಳಿದಾಗ ಶಾಸಕಿ ಗ್ರಾಮದಲ್ಲಿ ಪ್ರಚಾರ ವಾಹನ ಮೂಲಕ ಅರಿವು ಮೂಡಿಸಬೇಕೆಂದು ಹೇಳಿದರು.

ಲ್ಯಾಂಡ್‌ ಆರ್ಮಿ ಇಲಾಖೆ ಅಧಿಕಾರಿಗಳು ಬರದೇ ಕೆಳ ಅಧಿಕಾರಿಗಳನ್ನು ಕಳಿಸಿದ್ದರಿಂದ ಸಭೆಗೆ ಸಮರ್ಪಕ ಉತ್ತರ ಹೇಳಲು ತಡವರಿಸಿದರು. ಅಬಕಾರಿ ಇಲಾಖೆ ಅಧಿಕಾರಿ ಹಾಗೂ ಪೊಲೀಸ್‌ ಇಲಾಖೆ ಅಧಿಕಾರಿಗಳು ಸಭೆಗೆ ಬಾರದೆ ತಮ್ಮ ಕೆಳಗಿನ ಅಧಿ ಕಾರಿಗಳನ್ನು ಕಳಿಸಿದ್ದರಿಂದ ಶಾಸಕರು ಸಿಡಿಮಿಡಿಗೊಂಡು ಅವರ ಜೊತೆಗೆ ಮುಖ್ಯವಾದ ವಿಷಯಗಳನ್ನು ಚರ್ಚಿಸಬೇಕಾಗಿತ್ತು. ಕೂಡಲೇ ಅವರನ್ನು ಸಭೆಗೆ ಬರುವಂತೆ ತಾಕೀತು ಮಾಡಿದರು.

ಆರೋಗ್ಯ ಇಲಾಖೆ ಅಧಿಕಾರಿ ಭಾಗೀರಥಿ ಮಡ್ಲೆರಿ ಇಲಾಖೆ ವರದಿ ಮಂಡಿಸಿ, ಇದುವರೆಗೂ ತಾಲೂಕಿನಲ್ಲಿ 45,545 ಕೋವಿಡ್‌ ಲಸಿಕೆ ನೀಡಲಾಗಿದ್ದು 3ನೇ ಅಲೆಯ ಮುನ್ನೆಚ್ಚರಿಕೆವಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮಕ್ಕಳಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ನೀರಿನ ಘಟಕಗಳು ಸ್ಥಗಿತ
ಜಿಪಂ ಸಹಾಯಕ ಅಧಿಕಾರಿ ಎಸ್‌.ಆರ್‌. ವೀರಕರ ತಮ್ಮ ಇಲಾಖೆ ವರದಿಯನ್ನು ಮಂಡಿಸುವಾಗ ಶಾಸಕಿ ಕುಸುಮಾವತಿ ಶಿವಳ್ಳಿ ಮಧ್ಯಪ್ರವೇಶಿಸಿ, ಅನೇಕ
ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕಗಳು ಸ್ಥಗಿತವಾಗಿವೆ ಏನು ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು. ಇದಕ್ಕೆ ಸಂಬಂಧಿಸಿದಂತೆ ಬೇರೆ ಅಧಿ ಕಾರಿಗಳು ಆಗಮಿಸಿದ್ದಾರೆ ಎಂದು ವೀರಕರ ಹೇಳಿದಾಗ ಸಿಡಿಮಡಿಗೊಂಡ ಶಾಸಕರು, ಇಷ್ಟು ದಿನ ತಾವೇ ಈ ಇಲಾಖೆ ಪ್ರಭಾರಿಗಳಾಗಿದ್ದೀರಿ ಏನು ಮಾಡಿದ್ದೀರಿ. ಎಷ್ಟು ಘಟಕಗಳಿವೆ ಎಂದು ಕೇಳಿದರು. 79 ಘಟಕಗಳಿದ್ದು, ಇವುಗಳನ್ನು ಆಯಾ ಗ್ರಾಪಂನವರೇ ನಿರ್ವಹಣೆ ಮಾಡಬೇಕು. ಪ್ರತಿ ತಿಂಗಳು ಮೂರು ಸಾವಿರ ರೂ. ನಿರ್ವಹಣೆ ವೆಚ್ಚ ನೀಡಲಾಗುತ್ತಿದೆ ಎಂದು ವೀರಕರ ಹೇಳಿದರು. ತಾಪಂ ಇಒ ಡಾ| ಮಹೇಶ ಕುರಿ ಪಿಡಿಒಗಳಿಗೆ ದುರಸ್ತಿ ಮಾಡಲು ಸೂಚಿಸುವುದಾಗಿ ಹೇಳಿದರು.

ಅಸಹಾಯಕತೆ ತೋಡಿಕೊಂಡ ಅಧಿಕಾರಿ ಜಿಪಂ ಸಹಾಯಕ ಅಧಿಕಾರಿ ಎಸ್‌.ಆರ್‌. ವೀರಕರ ಮಾತನಾಡಿ, ನಮ್ಮ ಇಲಾಖೆಯಲ್ಲಿ 9 ಸಹಾಯಕ ಎಂಜಿನಿಯರ್‌ಗಳು ಇರಬೇಕಾಗಿದ್ದು ಇಬ್ಬರೇ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಇನ್ನೊಬ್ಬರು ವರ್ಗಾವಣೆ ಮಾಡಿಕೊಂಡು ಹೋಗುತ್ತಿದ್ದಾರೆ. ಕೆಲಸ ಮಾಡಲು ತುಂಬಾ ತೊಂದರೆ ಆಗುತ್ತಿದೆ. ಸಹಾಯಕ ಎಂಜಿನಿಯರ್‌ಗಳನ್ನು ನೇಮಕ ಮಾಡಿಕೊಡಬೇಕೆಂದು ಕೇಳಿಕೊಂಡರು. ಆಗ ಪ್ರತಿಕ್ರಿಯಿಸಿದ ಶಾಸಕರು, ಯಾರನ್ನೂ ರಿಲೀವ್‌ ಮಾಡಬೇಡಿ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರಕಾರಕ್ಕೆ ಒತ್ತಾಯ ಮಾಡುವುದಾಗಿ ಹೇಳಿದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.