ವಿನಯ ಪರ ಶಾಸಕ ಪ್ರಸಾದ ಅಭ್ಯಯ ಮತ ಬೇಟ


Team Udayavani, Apr 14, 2019, 11:50 AM IST

hub-2
ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಪಕ್ಷದ ಅಭ್ಯರ್ಥಿ ವಿನಯ ಕುಲಕರ್ಣಿ ಪರ ಲಿಡ್ಕರ್‌ ಅಧ್ಯಕ್ಷ, ಶಾಸಕ ಪ್ರಸಾದ ಅಬ್ಬಯ್ಯ ಶನಿವಾರ ವಾರ್ಡ್‌ 60-61ರ ವಿವಿಧೆಡೆ ಪ್ರಚಾರ ನಡೆಸಿ ಮತಯಾಚಿಸಿದರು. ಹಳೇ ಹುಬ್ಬಳ್ಳಿ ಭಾಗದ ಮಸ್ತಾನ್‌ ಸೋಫಾ, ಜಂಗ್ಲಿಪೇಟೆ, ಅಕ್ಕಿಪೇಟೆ, ಅಕ್ಕಸಾಲಿಗರ ಓಣಿ, ಬಾಗಾರಪೇಟೆ, ಜುಮ್ಮಾ ಮಸೀದಿ ರಸ್ತೆ, ಬೀರಬಂದ ಓಣಿ ಸುತ್ತಲಿನ ಪ್ರದೇಶಗಳ ಮನೆ ಮನೆಗೆ ತೆರಳಿ ಪ್ರಚಾರ ಕೈಗೊಂಡ ಅವರು ಅಭ್ಯರ್ಥಿ ವಿನಯ ಕುಲಕರ್ಣಿ ಪರ ಮತಯಾಚಿಸಿದರು. ದಶರಥ ವಾಲಿ, ಮೆಹಮೂದ ಕೋಳೂರು, ಬಸವರಾಜ ಮೆಣಸಗಿ, ಅಮಟೂರು, ಇಮಾಮ್‌
ಹುಸೇನ್‌ ಮಡಕಿ, ಮುನ್ನಾ ಮಾರ್ಕರ್‌, ಶಪೀ ಯಾದಗಿರಿ ಇನ್ನಿತರರು ಇದ್ದರು.
ಮೈತ್ರಿ ಅಭ್ಯರ್ಥಿಗಳಿಗೆ ಬೆಂಬಲ: ಡಾ| ನಾಡಗೌಡ
ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯರ್ಥಿಗಳನ್ನು ಸಂಯುಕ್ತ ಜನತಾದಳ (ಶರದ್‌ ಯಾದವ ಬಣ) ಬೆಂಬಲಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಡಾ| ಎಂ.ಪಿ. ನಾಡಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಪ್ರತಿ ಬಾರಿ ಒಂದೊಂದು ಬಗೆಯ ಗಾಳಿಯಲ್ಲಿ ಚುನಾವಣೆಗಳಲ್ಲಿ ಆರಿಸಿ ಬರುತ್ತಿದ್ದಾರೆ. ಈ ಬಾರಿ ಮೋದಿ ನೋಡಿ ಮತ ಹಾಕಿ ಎಂದು 3-4 ಬಾರಿ ಆರಿಸಿ ಬಂದವರು ಸಹಿತ ಹೇಳಿಕೊಂಡು ಹೋಗುತ್ತಿರುವುದು ದುರ್ದೈವ. ದೇಶದ ಜನಕ್ಕೆ ಬೇಕಾಗಿರುವುದು ಚಾಯ್‌ ವಾಲಾ ಹಾಗೂ ಚೌಕಿದಾರ ಅಲ್ಲ. ಬದಲಾಗಿ ಜಾತ್ಯತೀತ ಮನೋಭಾವನೆಯುಳ್ಳ, ಬಡವರ, ರೈತರ ಪರವಾಗಿರುವ ಅತ್ಯುತ್ತಮ ಪ್ರಧಾನಿ ಎಂದರು.
ಪ್ರಧಾನಿ ಮೋದಿ 2014ರಲ್ಲಿ ಚುನಾವಣೆಗೂ ಮುನ್ನ ಜನರಿಗೆ ನೀಡಿದ್ದ ಯಾವುದೇ ಆಶ್ವಾಸನೆ ಈಡೇರಿಸಿಲ್ಲ. ಕಪ್ಪು ಹಣ ತಂದು ಜನರ ಖಾತೆಗೆ ಜಮಾ ಮಾಡಲಿಲ್ಲ, ಉದ್ಯೋಗ ಸೃಷ್ಟಿಸಲಿಲ್ಲ. ಈ ಬಾರಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲ್ಲ. ಕಳೆದ ಬಾರಿಗಿಂತ 100ಕ್ಕೂ ಅಧಿಕ ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಮೋದಿ ಮತ್ತೂಮ್ಮೆ ಪ್ರಧಾನಿಯಾಗಲ್ಲವೆಂದು ಭವಿಷ್ಯ ನುಡಿದರು.
ಈ ಬಾರಿ ತಮ್ಮ ಪಕ್ಷ ಅಧಿಕಾರಕ್ಕೆ ಬರುವುದಿಲ್ಲವೆಂಬುದು ಅವರಿಗೂ ಗೊತ್ತಾಗಿದೆ. ಅದಕ್ಕಾಗಿ ತಮ್ಮ ಪ್ರಣಾಳಿಕೆಯಲ್ಲಿ ಬಡವರ, ರೈತರ, ಕಾರ್ಮಿಕರು ಸೇರಿದಂತೆ ಆರು ಹೊಸ ನಿರ್ಣಯಗಳನ್ನು ಕೈಗೊಂಡಿದ್ದಾರೆ.
ಮೋದಿಗೆ ತಾವೇ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ ತಾವೇ ಉತ್ತರ ಬರೆಯುವಂತಾಗಿದೆ. ಬಿಜೆಪಿಯವರು ಶತಾಯಗತಾಯವಾಗಿ ಪ್ರಯತ್ನಿಸಿದರೂ ಅವರು ಮತ್ತೆ ಅಧಿಕಾರಕ್ಕೆ ಬರಲ್ಲ ಎಂದರು.
ಪುಲ್ವಾಮಾ ಘಟನೆಯಲ್ಲಿ 40ಕ್ಕೂ ಅಧಿಕ ಯೋಧರು ಮೃತರಾದರು. ಅಲ್ಲಿಗೆ 350 ಕೆಜಿಯಷ್ಟು ಆರ್‌ ಡಿಎಕ್ಸ್‌ ಹೇಗೆ ಬಂತು. ಇದರಲ್ಲಿ ಗುಪ್ತಚರ ಇಲಾಖೆ ವೈಫಲ್ಯವೇ ಕಾರಣ. ಈ ಘಟನೆ ಬಗ್ಗೆ ಪ್ರಧಾನಿ ಏಕೆ ತನಿಖೆ ನಡೆಸಲಿಲ್ಲ. ತಪ್ಪಿತಸ್ಥರ ಮೇಲೆ ಏಕೆ ಕ್ರಮಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದರು.  ಕುಟುಂಬ ರಾಜಕಾರಣಕ್ಕೆ ನನ್ನ ವಿರೋಧವಿದೆ. ಆದರೆ, ರಾಜಕಾರಣದಲ್ಲಿ ಸ್ವ-ಬಲದಿಂದ ಆರಿಸಿ ಬರುವವರು ಹಾಗೂ ಉತ್ತಮರು ಬಂದರೆ ಅದರಲ್ಲಿ ತಪ್ಪೇನಿಲ್ಲ. ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳಲ್ಲಿ ಕುಟುಂಬ ರಾಜಕಾರಣ ನಡೆಯುತ್ತಲೇ ಇದೆ. ಜೆಡಿಎಸ್‌ ಅಪ್ಪ-ಮಕ್ಕಳ ಪಕ್ಷವೆಂದು ಈ ಹಿಂದೆ ನಾನೇ ಹೇಳಿದ್ದೆ. ಆದರೆ ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಅವರ ಕುಟುಂಬದ ಜನರೇ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸುತ್ತಿರುವುದರಲ್ಲಿ ತಪ್ಪಿಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ಸಾವಿತ್ರಿ ಗುಂಡಿ, ಶ್ರೀಶೈಲಗೌಡ ಕಮತರ, ರತ್ನಾ ಗಂಗಣ್ಣವರ, ಶೇಖರ ಹೈಬತ್ತಿ, ಫಿರೋಜಖಾನ ಹವಾಲ್ದಾರ, ಸವದತ್ತಿಯ ಗದ್ದಿಗೌಡರ ಇದ್ದರು.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.