ನಿಗದಿತ ಸ್ಥಳದಲ್ಲೇ ವ್ಯಾಪಾರ ನಡೆಸಲು ಶಾಸಕರ ಸೂಚನೆ
Team Udayavani, Oct 31, 2017, 12:56 PM IST
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಮಾರುಕಟ್ಟೆ ಪ್ರದೇಶದಲ್ಲಿ ರಸ್ತೆ ಬದಿ ವ್ಯಾಪಾರದಿಂದ ಸಂಚಾರಕ್ಕೆ ತೀವ್ರ ಅಡಚಣೆಯುಂಟಾಗುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಪ್ರಸಾದ ಅಬ್ಬಯ್ಯ ಪಾಲಿಕೆ ಅ ಧಿಕಾರಿಗಳೊಂದಿಗೆ ತೆರಳಿ ಸೋಮವಾರ ಪರಿಶೀಲನೆ ನಡೆಸಿದರು. ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಇಲ್ಲಿನ ಮಾರುಕಟ್ಟೆ ಸಂಕೀರ್ಣದಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ.
ಆದರೆ ಅಲ್ಲಿ ವ್ಯಾಪಾರವಾಗುವುದಿಲ್ಲವೆಂಬ ತಪ್ಪು ಕಲ್ಪನೆಯಿಂದ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುತ್ತಿರುವುದರಿಂದ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಈ ಕುರಿತು ಸಾರ್ವಜನಿಕರು ಸಾಕಷ್ಟು ದೂರು ನೀಡುತ್ತಿದ್ದಾರೆ. ರಸ್ತೆ ಬದಿ ವ್ಯಾಪಾರಸ್ಥರು ಮಾರುಕಟ್ಟೆ ಸಂಕೀರ್ಣದಲ್ಲಿ ತಮಗೆ ನೀಡಿದ ಸ್ಥಳದಲ್ಲೇ ವ್ಯಾಪಾರ ನಡೆಸಬೇಕು. ನಿಮಗೆ ಬೇಕಾದ ಎಲ್ಲಾ ಸೌಕರ್ಯಗಳನ್ನು ಪ್ರಾಂಗಣದಲ್ಲೇ ಒದಗಿಸಕೊಡುವುದಾಗಿ ಹೇಳಿದರು.
ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಸಂಚಾರ ಸಮಸ್ಯೆ ತೀವ್ರಗೊಳ್ಳುತ್ತಿದೆ. ಅವಳಿ ನಗರ ಸ್ಮಾರ್ಟ್ಸಿಟಿ ಯೋಜನೆಯಲ್ಲಿ ಸೇರ್ಪಡೆಯಾಗಿರುವುದರಿಂದ ಕೆಲ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅನಿವಾರ್ಯ. ಈ ನಿಟ್ಟಿನಲ್ಲಿ ಸುಗಮ ಸಂಚಾರಕ್ಕೆ ವ್ಯಾಪಾರಸ್ಥರೂ ಕೈಜೋಡಿಸಬೇಕು.
ಮಾರುಕಟ್ಟೆ ಪ್ರಾಂಗಣದಲ್ಲಿ ಕುಡಿಯುವ ನೀರು, ಶೌಚಾಲಯ, ಸ್ವತ್ಛತೆ, ಬೀದಿದೀಪ, ಕಾಂಕ್ರೀಟ್ ಪೇವಿಂಗ್ ಸೇರಿದಂತೆ ಅಗತ್ಯ ಕರ್ಯ ಕಲ್ಪಿಸಲಾಗುವುದು. ಶೀಘ್ರದಲ್ಲೇ ಹಣ ಬಿಡುಗಡೆ ಮಾಡಲಿದ್ದು, ಅಲ್ಲಿಯವರೆಗೂ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಶಾಸಕ ಅಬ್ಬಯ್ಯ ಅಧಿಕಾರಿಗಳಿಗೆ ಸೂಚಿಸಿದರು.
ಪಾಲಿಕೆ ಸದಸ್ಯರಾದ ದಶರಥ ವಾಲಿ, ಎ. ಅಮಟೂರ, ಬಷೀರ್ ಗುಡಮಾಲ, ಅಲ್ತಾಫ್ ಕಿತ್ತೂರು, ಮುಖಂಡರಾದ ಬಸು ಮೆಣಸಗಿ, ನಿಜಾಮುದ್ದಿನ್ ಹದ್ಲಿ, ಬಕಾಶ್ ಬಾಗಲಕೋಟ, ಗಣೇಶ ದೊಡ್ಡಮನಿ, ಮುನ್ನಾ ಮಾರ್ಕರ್, ಅಜ್ಜಪ್ಪ ಮಟ್ಟಿ, ಮಂಜುನಾಥ್ ಕಾಟಿಗರ, ಯುವರಾಜ ಕಲಾಲ, ನಾಸಿರ್, ಅಬ್ದುಲ್ ಖಾದರ್ ಕೋಳೂರು, ಗಬ್ಬರ್ ಬಿಜಾಪುರ, ಪಾಲಿಕೆ ಅಧಿಕಾರಿಗಳಾದ ಮಹೇಶ ಅರಳಿಹೊಂಡ, ಆನಂದ ಕಾಂಬ್ಳೆ, ಗಣೇಶ ನಾಯ್ಕ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…