ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್ ನಿಷೇಧ
Team Udayavani, May 17, 2019, 11:00 AM IST
ಧಾರವಾಡ: ಮತ ಏಣಿಕೆ ನಡೆಯುವ ಕೃಷಿ ವಿವಿಗೆ ಭೇಟಿ ನೀಡಿ ಪರಿಶೀಲಿಸಿದ ಡಿಸಿ ದೀಪಾ ಚೋಳನ್.
ಧಾರವಾಡ: ಮೇ 23ಕ್ಕೆ ಲೋಕಸಭಾ ಚುನಾವಣೆ ಹಾಗೂ ಕುಂದಗೋಳ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಣೆ ಕಾರ್ಯ ಕೃಷಿ ವಿವಿಯಲ್ಲಿ ನಡೆಯಲಿದ್ದು, ಮತ ಎಣಿಕೆ ಕೇಂದ್ರಗಳಿಗೆ ಮೊಬೈಲ್ ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಡಿಸಿ ದೀಪಾ ಚೋಳನ್ ಹೇಳಿದರು.
ಡಿಸಿ ಕಚೇರಿಯಲ್ಲಿ ಗುರುವಾರ ಜರುಗಿದ ಎಣಿಕೆ ಕಾರ್ಯದ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಣಿಕೆ ಕೇಂದ್ರಕ್ಕೆ ಮೂರು ಹಂತಗಳ ಭದ್ರತೆ, ಸಾರ್ವಜನಿಕರಿಗೆ ಧ್ವನಿವರ್ಧಕ ವ್ಯವಸ್ಥೆ ಕಲ್ಪಿಸಲಾಗುವುದು. ಎಣಿಕಾ ಏಜೆಂಟರು ಮೊಬೈಲ್ ತರುವುದನ್ನು ನಿಷೇಧಿಸಲಾಗಿದೆ. ಮಾಧ್ಯಮ ಪ್ರತಿನಿಧಿಗಳು ಮಾಧ್ಯಮ ಕೇಂದ್ರದಲ್ಲಿ ಮಾತ್ರ ಮೊಬೈಲ್ ಬಳಸಬೇಕು. ಎಣಿಕೆ ಕೌಂಟರ್ಗಳಿಗೆ ಬರುವುದನ್ನು ನಿಷೇಧಿಸಲಾಗಿದೆ ಎಂದರು.
ಹು-ಧಾ ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ ಮಾತನಾಡಿ, ಬಿಗಿ ಭದ್ರತೆಗೆ ಗುಣಮಟ್ಟದ ಬ್ಯಾರಿಕೇಡ್ಗಳನ್ನು ಹಾಕಲಾಗುವುದು. ಎಣಿಕೆ ಏಜೆಂಟರು ಅವರಿಗೆ ನಿಗದಿಪಡಿಸಿದ ಕೌಂಟರ್ಗಳಿಗೆ ಮಾತ್ರ ಪ್ರವೇಶಿಸಬೇಕು ಎಂದು ಸೂಚಿಸಿದರು.
ಎಸ್ಪಿ ಜಿ. ಸಂಗೀತಾ, ಅಪರ ಜಿಲ್ಲಾಧಿಕಾರಿ ಡಾ| ಸುರೇಶ ಇಟ್ನಾಳ, ಉಪ ಪೊಲೀಸ್ ಆಯುಕ್ತ ನಾಗೇಶ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ವಿರೂಪಾಕ್ಷ ಯಮನಕನಮರಡಿ, ಎನ್ಐಸಿ ಜಿಲ್ಲಾ ಅಧಿಕಾರಿ ಮೀನಾಕುಮಾರಿ ಇದ್ದರು. ಸಭೆಯ ಬಳಿಕ ಡಿಸಿ ದೀಪಾ ಚೋಳನ್ ನೇತೃತ್ವದ ಅಧಿಕಾರಿಗಳ ತಂಡವು ಕೃಷಿ ವಿವಿಗೆ ಭೇಟಿ ನೀಡಿ ಮತ ಎಣಿಕೆ ಕೇಂದ್ರ, ಪ್ರವೇಶ, ವಾಹನ ನಿಲುಗಡೆ ಸ್ಥಳಗಳನ್ನು ಪರಿಶೀಲಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ