ಉಣಕಲ್ಲ ಸಂತೆ ಬಯಲಿಗೆ ಆಧುನಿಕ ಮಾರುಕಟ್ಟೆ ಸ್ಪರ್ಶ

­ಕಾಮಗಾರಿ ಬಹುತೇಕ ಪೂರ್ಣ! ­ತಿಂಗಳಲ್ಲಿ ಉದ್ಘಾಟನೆಗೆ ಸಜ್ಜು!­ಇತರೆ ಕಾರ್ಯಗಳಿಗೂ ಬಳಕೆಯಾಗುವಂತೆ ಅಭಿವೃದ್ಧಿ

Team Udayavani, Jul 16, 2021, 6:11 PM IST

15hub-13

ವರದಿ : ಬಸವರಾಜ ಹೂಗಾರ

ಹುಬ್ಬಳ್ಳಿ: ಸಂತೆಯ ಬಯಲು ಜಾಗಕ್ಕೆ ಆಧುನಿಕ ಬಹುಪಯೋಗಿ ಮಾರುಕಟ್ಟೆ ಸ್ಪರ್ಶ ನೀಡುವ ಕಾರ್ಯ ಸ್ಮಾರ್ಟ್‌ಸಿಟಿ ಯೋಜನೆಯಿಂದ ಆಗುತ್ತಿದ್ದು, ಉಣಕಲ್ಲನಲ್ಲಿ ಬಯಲು ಸಂತೆ ಜಾಗವೀಗ ಸೌಲಭ್ಯಗಳ ಸ್ಪರ್ಶ ಪಡೆಯುತ್ತಿದೆ. ಬಹುತೇಕ ಕಾಮಗಾರಿ ಮುಗಿದಿದ್ದು, ಇನ್ನೆರಡು ತಿಂಗಳಲ್ಲಿ ಉದ್ಘಾಟನೆಗೆ ಸಜ್ಜುಗೊಳ್ಳಲಿದೆ.

ಸ್ಮಾರ್ಟ್‌ ಸಿಟಿ ಯೋಜನೆ ಅಡಿಯಲ್ಲಿ ಅವಳಿನಗರದಲ್ಲಿನ ವಿವಿಧ ಸಂತೆ ಜಾಗಗಳನ್ನು ಕೇವಲ ಸಂತೆಗಷ್ಟೇ ಅಲ್ಲದೆ ಇತರೆ ಕಾರ್ಯಗಳಿಗೂ ಬಳಕೆಯಾಗುವಂತೆ ಆಧುನಿಕ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಅದರಲ್ಲಿ ಉಣಕಲ್ಲ ಸಂತೆಯ ಜಾಗವೂ ಸೇರಿದೆ. ನಗರದಲ್ಲಿ ಬೆಂಗೇರಿ, ಉಣಕಲ್ಲದ ವಾರದ ಸಂತೆ ನಡೆಯುವ ಜಾಗಗಳೂ ಆಧುನಿಕ ಸೌಲಭ್ಯಗಳ ಸ್ಪರ್ಶ ಪಡೆಯುತ್ತಿವೆ.

2.3 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿ: ಹುಬ್ಬಳ್ಳಿ- ಧಾರವಾಡ ಮುಖ್ಯ ರಸ್ತೆಗೆ ಹೊಂದಿಕೊಂಡಿ ರುವಂತೆ ಇರುವ ಉಣಕಲ್ಲ ಸಂತೆ ಬಯಲು ಜಾಗದಲ್ಲಿ ಅಂದಾಜು 2.3 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸ್ವರೂಪದ ಸಂತೆ ಮಾರುಕಟ್ಟೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಸುಮಾರು 668 ಚದರ ಮೀಟರ್‌ ಜಾಗದಲ್ಲಿ ಮಾರುಕಟ್ಟೆ ಹಾಗೂ ಇತರೆ ಬಳಕೆ ಸೌಲಭ್ಯಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಉಣಕಲ್ಲ ಸಂತೆ ಬಯಲು ಜಾಗೆಯಲ್ಲಿ ಪ್ರತಿ ಶನಿವಾರ ಸಂತೆ ನಡೆಯುತ್ತದೆ. ನೂತನ ಮಾರುಕಟ್ಟೆಯಲ್ಲಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಅಂಗಡಿಗಳನ್ನು ನಿರ್ಮಿಸಲಾಗುತ್ತಿದೆ. ಮಧ್ಯದಲ್ಲಿ ತೆರೆದ ಮಾರುಕಟ್ಟೆ ಸ್ಥಳಕ್ಕೆ ಅವಕಾಶ ನೀಡಲಾಗಿದೆ. ಹಿಂಭಾಗದಲ್ಲಿ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ವಿದ್ಯುತ್‌ ಸೌಲಭ್ಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲಾಗುತ್ತಿದೆ.

ಇತರೆ ಕಾರ್ಯಗಳಿಗೆ ಬಳಕೆ: ಉಣಕಲ್ಲನಲ್ಲಿ ಸಂತೆ ಜಾಗ ಪ್ರತಿ ಶನಿವಾರ ಸಂತೆಯ ಬಳಕೆ ಬಿಟ್ಟರೆ ಬೇರೆ ಕಾರ್ಯಕ್ಕೆ ಹೆಚ್ಚಿನದಾಗಿ ಬಳಕೆ ಆಗುತ್ತಿರಲಿಲ್ಲ. ಸ್ಮಾರ್ಟ್‌ಸಿಟಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ಮಾರುಕಟ್ಟೆಯಲ್ಲಿ, ಸಂತೆ ಇಲ್ಲದ ದಿನಗಳಲ್ಲಿ ವಿವಿಧ ಕಾರ್ಯಗಳಿಗೂ ಬಳಕೆಯಾಗುವಂತೆ ನಿರ್ಮಿಸಲಾಗುತ್ತಿದೆ. ವಿವಿಧ ಸಭೆ-ಸಮಾರಂಭ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಬಳಕೆಯಾಗುವಂತೆ ಮಾರುಕಟ್ಟೆ ಸ್ಥಳ ಅಭಿವೃದ್ಧಿ ಪಡಿಸಲಾಗುತ್ತಿದೆ. ಉಣಕಲ್ಲ ಸಂತೆ ನಡೆಯುವ ಜಾಗದ ಎದುರಿಗೆ ಉಳವಿ ಚನ್ನಬಸವೇಶ್ವರ ದೇವಸ್ಥಾನ, ಉಣಕಲ್ಲ ಕೆರೆ ಇದ್ದು, ಸಂಜೆಯಾಗುತ್ತಿದ್ದಂತೆ ಜನರು ಸಹ ಮಾರುಕಟ್ಟೆ ಸ್ಥಳದಲ್ಲಿ ಕುಳಿತು ಕೆರೆಯ ವಿಹಂಗಮ ನೋಟ ವೀಕ್ಷಿಸಬಹುದಾಗಿದೆ.

ಎಸ್‌ಕೆಎಸ್‌ ಕಾರ್ಕಳ ಇನ್ಫ್ರಾ ಪ್ರೊಜೆಕ್ಟ್ ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆಯ ಮಾರುಕಟ್ಟೆ ನಿರ್ಮಾಣದ ಗುತ್ತಿಗೆ ಪಡೆದಿದೆ. ಈಗಾಗಲೇ ಶೇ.70 ಕಾಮಗಾರಿ ಮುಕ್ತಾಯಗೊಂಡಿದ್ದು, ಇನ್ನು ಶೇ.30 ಕಾಮಗಾರಿ ನಡೆಯಬೇಕಿದೆ. ಮಾರುಕಟ್ಟೆಯ ನೆಲ ಹಾಸಿಗೆಗೆ ಫೇವರ್ ಅಳವಡಿಸಲಾಗುತ್ತಿದ್ದು, ವೇದಿಕೆಯ ಕಟ್ಟೆ, ಶೌಚಾಲಯ ಕಟ್ಟಡ ನಿರ್ಮಿಸಲಾಗಿದ್ದು, ಇನ್ನುಳಿದಂತೆ ವಿದ್ಯುತ್‌, ಕುಡಿಯುವ ನೀರಿನ ಕಾಮಗಾರಿ, ಬೀದಿದೀಪದ ಕಾಮಗಾರಿ ಹಾಗೂ ರೂಫ್‌ ಹಾಕುವುದು ಬಾಕಿ ಉಳಿಸಿದ್ದು, ಇನ್ನೆರಡು ತಿಂಗಳಲ್ಲಿ ಮಾರುಕಟ್ಟೆ ಸಾರ್ವಜನಿಕರಿಗೆ ಮುಕ್ತವಾಗಲಿದೆ.

ಉಳವಿ ಚನ್ನಬಸವೇಶ್ವರ ದೇವಸ್ಥಾನ, ಉಣಕಲ್ಲ ಕೆರೆ, ಉಣಕಲ್ಲ ಸಂತೆ , ಆಧುನಿಕ ಮಾರುಕಟ್ಟೆ ,

 

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.