ಕಾಸ್‌ ಬಾತ್‌: ಪಾಲಿಕೆ ಖಜಾನೆ ಖಾಲಿ ಆಗಿದ್ದೇಕೆ?


Team Udayavani, Oct 30, 2017, 12:38 PM IST

h1-hub-cor-off.jpg

ಹುಬ್ಬಳ್ಳಿ: ಪಿಂಚಣಿ ಬಾಕಿ ಅಂದಾಜು 120 ಕೋಟಿ ರೂ. ಬಾರದಿರುವುದು, ಆಸ್ತಿ ಕರ, ಜಾಹೀರಾತು ಶುಲ್ಕ, ಮಳಿಗೆಗಳ ಬಾಡಿಗೆ ಗುರಿ ಮುಟ್ಟದಿರುವುದು, ಭೂ ಬಾಡಿಗೆ ಆಸ್ತಿಯ ತ್ರಿಶಂಕು ಸ್ಥಿತಿ, ಕೈಗಾರಿಕಾ ವಲಯ, ವಿವಿಧ ಬಡಾವಣೆಗಳು ಹಸ್ತಾಂತರವಾಗದಿರುವುದು.

ಅನೇಕ ಆಸ್ತಿಗಳು ಕರ ಸಂಪರ್ಕ ಜಾಲದಿಂದ ಹೊರಗಿರುವುದು ಸೇರಿದಂತೆ ಹತ್ತಾರು ಕಾರಣಗಳಿಂದಾಗಿ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಖ್ಯಾತಿಯ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವೇತನ-ಬಿಲ್‌ ಪಾವತಿಗೂ ಪರದಾಡುವ ಸ್ಥಿತಿಗೆ ತಲುಪಿದೆ. 

ಪಾಲಿಕೆಗೆ ಮಾಸಿಕವಾಗಿ ಸರಾಸರಿ ಆದಾಯ 5ರಿಂದ 6 ಕೋಟಿ ರೂ. ವೆಚ್ಚ ಸುಮಾರು 12 ಕೋಟಿ ರೂ. ಅಲ್ಲಿಗೆ ಪ್ರತಿ ತಿಂಗಳು ಆದಾಯಕ್ಕಿಂತ ಶೇ.50ರಷ್ಟು ವೆಚ್ಚ ಹೆಚ್ಚಾಗಿರುವಾಗ ಯಾವ ಕುಬೇರನ ಆಸ್ಥಾನವಾದರೂ ಉಳಿಯಲು ಸಾಧ್ಯವಾದೀತು ಹೇಳಿ ಎಂಬುದು ಕೆಲವರ ಪ್ರಶ್ನೆಯಾಗಿದೆ. 

ಪಾಲಿಕೆ ತನ್ನ ಆದಾಯ ಮೂಲ ಹೆಚ್ಚಳಕ್ಕೆ ಹೆಚ್ಚಿನ ಆದ್ಯತೆ ನೀಡದೆ ಇದುವರೆಗೆ ಕೇವಲ ಸರ್ಕಾರಗಳಿಂದ ಬರುವ ಅನುದಾನಗಳನ್ನೇ ಹೆಚ್ಚಿಗೆ ಅವಲಂಬಿಸಿದ್ದು ಇದಕ್ಕೆ ಪ್ರಮುಖ ಕಾರಣವಾದರೆ, ಕಳೆದ ಮೂರ್‍ನಾಲ್ಕು ವರ್ಷಗಳಿಂದ ಪಿಂಚಣಿ ಬಾಕಿ ಹಣ ಬಾರದಿರುವುದು ಪಾಲಿಕೆಯ ಆರ್ಥಿಕ ಮುಗ್ಗಟ್ಟು ಸ್ಥಿತಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಈ ನಡುವೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಎರಡನೇ ಹಂತದ ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಸ್ಥಾನ ಪಡೆದಿದೆ. ಸ್ಮಾರ್ಟ್‌ ಸಿಟಿ ಯೋಜನೆಯ ಪ್ರಮುಖ ಅಂಶಗಳಲ್ಲಿ ಪಾಲಿಕೆ ತನ್ನ ಸ್ವಂತ ಆದಾಯ ಮೂಲ ಹೆಚ್ಚಿಸಿಕೊಳ್ಳಬೇಕು ಎಂಬುದಾಗಿದೆ. ಇಲ್ಲಿನ ಪಾಲಿಕೆ ಮಟ್ಟಿಗೆ ಅದೇ ದುಸ್ತರವಾಗಿ ಕಾಡುತ್ತಿದೆ.

ಪಿಂಚಣಿ ಬಾಕಿ ಹಣ ಬಾರದಿರುವುದರಿಂದ ಪಾಲಿಕೆ ಅಭಿವೃದ್ಧಿ ಯೋಜನೆಗೆಂದು ಇರುವ ಹಣವನ್ನು ಅನಿವಾರ್ಯವಾಗಿ ನಿವೃತ್ತ ನೌಕರರಿಗೆ ನೀಡಬೇಕಾಗಿದ್ದರಿಂದ ರಸ್ತೆ ಗುಂಡಿ ಮುಚ್ಚುವುದು, ಪಾಲಿಕೆಯ ವಿವಿಧ ಕಾಮಗಾರಿ ಕೈಗೊಂಡ ಗುತ್ತಿಗೆದಾರರಿಗೆ ಬಿಲ್‌ ಪಾವತಿಗೂ ಹಣದ ಅಡಚಣೆ ಉಂಟಾಗಿದೆ ಎಂಬುದು ಅಧಿಕಾರಿಗಳ ಅನಿಸಿಕೆ.

2004ರಿಂದ ಜಾರಿಗೆ ಬಂದ ನಿಧಿ ಆಧಾರಿತ ಖಾತೆ ವ್ಯವಸ್ಥೆಯಿಂದ ಇಂತಹ ಪರಿಸ್ಥಿತಿ ಉದ್ಭವಿಸಿರಲಿಲ್ಲ. ಈ ವ್ಯವಸ್ಥೆಯಲ್ಲಿ ಯಾವುದೋ ಹಣವನ್ನು ಇನ್ನಾವುದೋ ಕಾರ್ಯಗಳಿಗೆ ಬಳಸುವಂತಿರಲಿಲ್ಲ. ಹೀಗಾಗಿ ಇರುವ ಅನುದಾನದಲ್ಲಿ ಯೋಜನೆ ಸಿದ್ಧವಾಗುತ್ತಿತ್ತು. ಹೀಗಾಗಿ ಪಾಲಿಕೆಗಳಿಗೆ ಹಣದ ಕೊರತೆ ಉಂಟಾಗುತ್ತಿರಲಿಲ್ಲ.

ಆದರೆ, 2014ರಲ್ಲಾದ ಎಡವಟ್ಟಿನಿಂದ ಪಾಲಿಕೆ ಆರ್ಥಿಕ ಮುಗ್ಗಟ್ಟಿಗೆ ತಳ್ಳಲ್ಪಟ್ಟಿದೆ. ಪ್ರತಿ ತಿಂಗಳು ಪಾಲಿಕೆಗೆ ಆದಾಯದ ರೂಪದಲ್ಲಿ ಸರಾಸರಿ 6 ಕೋಟಿ ರೂ. ಬರುತ್ತಿದೆ. ಆದರೆ ಪಿಂಚಣಿ 3 ಕೋಟಿ ರೂ., ಸುಮಾರು 1880 ಗುತ್ತಿಗೆ ಪೌರ ಕಾರ್ಮಿಕರಿಗೆ 3 ಕೋಟಿ ರೂ. ವೇತನ ಸೇರಿದಂತೆ ಇತರೆ ಎಲ್ಲಾ ಖರ್ಚುಗಳನ್ನು ನೋಡಿದರೆ ಸುಮಾರು 12 ಕೋಟಿ ರೂ. ಬೇಕಾಗುತ್ತದೆ. 

ಸರ್ಕಾರ ಪಿಂಚಣಿ ನೀಡದ ಕಾರಣ ಪಾಲಿಕೆ ಪ್ರತಿ ತಿಂಗಳು 3.30 ಕೋಟಿ ರೂ. ಸಾಮಾನ್ಯ ನಿಧಿಯಿಂದ ಪಾವತಿ ಮಾಡುತ್ತಿದೆ. ಇದಕ್ಕಾಗಿ ಬೇರಾವ ಆದಾಯ ಅಥವಾ ಅನುದಾನಗಳಿಲ್ಲ. ಇನ್ನು ಪಾಲಿಕೆಗೆ ಆದಾಯದ ಮೂಲವಾದ ಕರ-ಶುಲ್ಕ ರೂಪದಲ್ಲಿ ಪ್ರಸಕ್ತ ಸಾಲಿನಲ್ಲಿ 59 ಕೋಟಿ ರೂ. ನಿರೀಕ್ಷೆ ಮಾಡಲಾಗಿತ್ತು. ಆದರೆ ವಾಸ್ತವದಲ್ಲಿ ಶೇ.65-75ರಷ್ಟು ಮಾತ್ರ ಕರ ಸಂಗ್ರಹವಾಗಿದೆ.

ಸರ್ಕಾರ ಈ ಹಿಂದೆ ಎಸ್‌ಎಫ್ಸಿ ಅನುದಾನದಲ್ಲಿ ಹಾಲಿ ನೌಕರರ ವೇತನ ಹಾಗೂ ಪಿಂಚಣಿಯನ್ನು ನೀಡುತ್ತಿತ್ತು. ಆದರೆ, 2014ರಲ್ಲಿ ಪಾಲಿಕೆಗೆ ಬೇಕಾದ ಅನುದಾನ ಬೇಡಿಕೆಯನ್ನು ಸಲ್ಲಿಸುವಲ್ಲಿ ಪಿಂಚಣಿ ಬಗ್ಗೆ ಪ್ರಸ್ತಾಪ ಮಾಡದಿರುವುದೆ ಈ ಆರ್ಥಿಕ ಮುಗ್ಗಟ್ಟಿಗೆ ಕಾರಣ ಎಂಬ ಅಭಿಪ್ರಾಯವಿದೆ.

ಅಲ್ಲದೇ ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಅಧಿಕಾರದಲ್ಲಿರುವುದರಿಂದ ಉದ್ದೇಶಪೂರ್ವಕವಾಗಿ ರಾಜ್ಯ ಸರ್ಕಾರ ಪಿಂಚಣಿ ಹಣ ನೀಡುತ್ತಿಲ್ಲ ಎಂಬ ಆರೋಪವೂ ಇದೆ. ಒಟ್ಟಾರೆ ಹಲವು ಕಾರಣದಿಂದ ಪಾಲಿಕೆ ಆರ್ಥಿಕ ಮುಗ್ಗಟ್ಟಿನಿಂದ ನಗರದಲ್ಲಿ ಸಣ್ಣ ಕಾಮಗಾರಿಗಳನ್ನೂ ಕೈಗೊಳ್ಳಲು ಪರದಾಡುವಂತಾಗಿದ್ದು ಮಾತ್ರ ವಿಪರ್ಯಾಸ. 

* „ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.