Dharwad: ಪಶು ಇಲಾಖೆಯಲ್ಲಿ ಅರ್ಧಕ್ಕಿಂತ ಹೆಚ್ಚು ಹುದ್ದೆ ಖಾಲಿ

ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಲಸಿಕೆ ಹಾಕುವ ಕಾರ್ಯ ಸದಾ ಇದ್ದೇ ಇರುತ್ತದೆ.

Team Udayavani, Nov 3, 2023, 12:09 PM IST

Dharwad: ಪಶು ಇಲಾಖೆಯಲ್ಲಿ ಅರ್ಧಕ್ಕಿಂತ ಹೆಚ್ಚು ಹುದ್ದೆ ಖಾಲಿ

ಧಾರವಾಡ: ಬರಗಾಲದ ಛಾಯೆಯ ಸಂಕಷ್ಟದಲ್ಲಿ ರೈತರ ಜೀವನಾಡಿ ಆಗಿರುವ ಜಾನುವಾರುಗಳ ಸಂರಕ್ಷಣೆ ಹೊಣೆ ಹೊರಬೇಕಾದ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿಯೇ ಶೇ.50ಕ್ಕಿಂತೂ ಹೆಚ್ಚು ಹುದ್ದೆಗಳೇ ಖಾಲಿಯಿವೆ…!

ಹೌದು. ಜಿಲ್ಲೆಯ 2.30 ಲಕ್ಷ ಜಾನುವಾರುಗಳ ಸಂರಕ್ಷಣೆ ಹೊಣೆ ಹೊತ್ತಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಕಾರ್ಯ ಚಟುವಟಿಕೆಗಳ ಭಾರ ಹೊರಬೇಕಾದ ಅಗತ್ಯ ಮಾನವ ಸಂಪನ್ಮೂಲವೇ ನಿಗದಿತ ಪ್ರಮಾಣಕ್ಕಿಂತಲೇ ಕುಸಿದು ಹೋಗಿದೆ. ಇಡೀ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚಿಕಿತ್ಸೆ ನೀಡಬೇಕಾದ ವೈದ್ಯರ ಕೊರತೆ ಜತೆಗೆ ಇಲಾಖೆಯ ಕಾರ್ಯ ಚಟುವಟಿಕೆಗಳ ಅನುಷ್ಠಾನ, ಲಸಿಕಾ ಅಭಿಯಾನಗಳಿಗೂ ಕೆಲಸದ ಒತ್ತಡದ ಭಾರ ಹೆಚ್ಚುವಂತೆ ಮಾಡಿದೆ.

ಜಿಲ್ಲೆಯಲ್ಲಿ ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆಯ ಅಡಿಯಲ್ಲಿ 1 ಉಪನಿರ್ದೇಶಕ (ಆಡಳಿತ) ಕಚೇರಿ, 1 ಪಾಲಿಕ್ಲಿನಿಕ್‌, 11 ಪಶು ಆಸ್ಪತ್ರೆ, 54 ಪಶು ಚಿಕಿತ್ಸಾಲಯ, 42 ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಗಳು ಹಾಗೂ 5 ಸಂಚಾರಿ ಪಶು ಚಿಕಿತ್ಸಾಲಯಗಳಿವೆ. ಇದಲ್ಲದೇ ಪ್ರತಿವರ್ಷ ಲಸಿಕಾ ಕಾರ್ಯಕ್ರಮದಡಿ ಕಾಲಕಾಲಕ್ಕೆ ಜಾನುವಾರುಗಳಿಗೆ ಗಂಟಲು ಬೇನೆ, ಚಪ್ಪೆ ಬೇನೆ, ಕಾಲುಬಾಯಿ ಬೇನೆ, ಕಂದು ರೋಗದ ಲಸಿಕೆ, ಕುರಿ ಮತ್ತು ಮೇಕೆಗಳಲ್ಲಿ ಕರಳು ಬೇನೆ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಲಸಿಕೆ ಹಾಕುವ ಕಾರ್ಯ ಸದಾ ಇದ್ದೇ ಇರುತ್ತದೆ.

ಈಗಂತೂ ಬರಗಾಲದ ಸಂಕಷ್ಟದಲ್ಲಿ ಈ ಒತ್ತಡ ಮತ್ತಷ್ಟು ಹೆಚ್ಚಿಸಿದ್ದು, ಜಾನುವಾರುಗಳ ಮೇವು ಸೇರಿದಂತೆ ಇಲಾಖಾ ಕಾರ್ಯ ಚಟುವಟಿಕೆಗಳ ಭಾರವೂ ಹೆಚ್ಚಿಸಿದೆ. ಆದರೆ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳ ಸಂಖ್ಯೆ ಮಾತ್ರ ಏರಿಕೆ ಇಲ್ಲದೇ ಕಾರ್ಯ ಭಾರದ ಒತ್ತಡ ಮಾತ್ರ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಸಾಗಿದೆ.

ಹುದ್ದೆಗಳು ಖಾಲಿ-ಖಾಲಿ : ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಅಡಿಯ “ಎ, ಬಿ, ಸಿ, ಡಿ’ ಎಂಬ ನಾಲ್ಕು ದರ್ಜೆಯಲ್ಲಿ ಮಂಜೂರಾದ 448 ಹುದ್ದೆಗಳ ಪೈಕಿ 206 ಹುದ್ದೆಗಳಷ್ಟೇ ಭರ್ತಿಯಾಗಿದ್ದು, 242 ಹುದ್ದೆಗಳು ಖಾಲಿ ಇವೆ. ಈ ಪೈಕಿ “ಎ’ ದರ್ಜೆಯ 78 ಹುದ್ದೆಗಳ ಪೈಕಿ 48 ಭರ್ತಿಯಿದ್ದರೆ 29 ಖಾಲಿಯಿದ್ದರೆ, “ಸಿ’ ದರ್ಜೆಗೆ ಮಂಜೂರಾದ 191 ಹುದ್ದೆಗಳ ಪೈಕಿ 104 ಭರ್ತಿಯಾಗಿದ್ದರೆ 87 ಖಾಲಿ ಉಳಿದಿವೆ. ಇನ್ನು “ಡಿ’ ದರ್ಜೆಯ 168 ಹುದ್ದೆಗಳ ಪೈಕಿ 46 ಭರ್ತಿಯಾಗಿದ್ದರೆ 122 ಹುದ್ದೆಗಳು ಖಾಲಿಯಿದ್ದು, ಪಾಲಿಕ್ಲಿನಿಕ್‌ ಗೆ ಮಂಜೂರಾದ 4 ಹುದ್ದೆಗಳು ಭರ್ತಿಯಾಗದೇ ಹಾಗೇ ಖಾಲಿ ಇವೆ. ಈ ಪೈಕಿ ಜಿಲ್ಲೆಯಲ್ಲಿ ಮುಖ್ಯ ಪಶು ವೈದ್ಯಾಧಿಕಾರಿಗಳು (ವಿಸ್ತರಣೆ)-4, ಮುಖ್ಯ ಪಶು ವೈದ್ಯಾಧಿಕಾರಿಗಳು(ಆಸ್ಪತ್ರೆ)-3, ಮುಖ್ಯ/ಹಿರಿಯ ಪಶು ವೈದ್ಯಾಧಿಕಾರಿಗಳು-4, ಹಿರಿಯ/ಪಶು ವೈದ್ಯಾಧಿಕಾರಿಗಳು-20, ಜಾನುವಾರು ಅಧಿಕಾರಿಗಳು-3, ಹಿರಿಯ ಪಶು ವೈದ್ಯಕೀಯ
ಪರೀಕ್ಷಕರು-21, ಪಶು ವೈದ್ಯಕೀಯ ಪರೀಕ್ಷಕರು-22, ಕಿರಿಯ ಪಶು ವೈದ್ಯಕೀಯ ಪರೀಕ್ಷಕರು-33, ವಾಹನ ಚಾಲಕರು-5, ಬೆರಳಚ್ಚುಗಾರರು-1, ದ್ವಿತೀಯ ದರ್ಜೆ ಸಹಾಯಕರು-1 ಹುದ್ದೆಗಳು ದಶಕಗಳಿಂದಲೇ ಭರ್ತಿಯಾಗದೇ ಹಾಗೇ ಉಳಿದಿವೆ.

ಮುಖ್ಯ ಹಿರಿಯ ಪಶು ವೈದ್ಯಾಧಿಕಾರಿಗಳ ಕೊರತೆ
ಜಿಲ್ಲೆಯಲ್ಲಿ ಮಂಜೂರಾತಿ ಇರುವ 76 ಮುಖ್ಯ/ಹಿರಿಯ ಪಶುವೈದ್ಯಾಧಿಕಾರಿಗಳ ಹುದ್ದೆಗಳಲ್ಲಿ 47 ಭರ್ತಿಯಿದ್ದು, ಉಳಿದ 29 ಹುದ್ದೆಗಳು ಖಾಲಿಯಾಗಿಯೇ ಇವೆ. ಈ ಪೈಕಿ ಧಾರವಾಡ ತಾಲೂಕಿನ 19 ಹುದ್ದೆಗಳಲ್ಲಿ 5, ಹುಬ್ಬಳ್ಳಿ ತಾಲೂಕಿನ 19 ಹುದ್ದೆಗಳಲ್ಲಿ 2, ಕಲಘಟಗಿ ತಾಲೂಕಿನ 14 ಹುದ್ದೆಗಳಲ್ಲಿ 7, ಕುಂದಗೋಳ ತಾಲೂಕಿನ 12 ಹುದ್ದೆಗಳಲ್ಲಿ 9, ನವಲಗುಂದ ತಾಲೂಕಿನ 8 ಹುದ್ದೆಗಳಲ್ಲಿ 5 ಭರ್ತಿಯಾಗದೇ ಖಾಲಿ ಉಳಿದಿವೆ. ಇದಲ್ಲದೇ ಅಣ್ಣಿಗೇರಿಗೆ ಮಂಜೂರಾದ 3 ಹಾಗೂ ಅಳ್ನಾವರಕ್ಕೆ ಮಂಜೂರಾದ 1 ಹುದ್ದೆಗಳು ಸಹ ಭರ್ತಿಯಾಗದೇ ಹಾಗೇ ಇವೆ. ಇದರಿಂದ ಜಾನುವಾರುಗಳಿಗೆ ನಿಗದಿತ ಚಿಕಿತ್ಸೆಗೂ ಸಂಕಷ್ಟ ಎದುರಾಗಿದ್ದರೆ, ಒಬ್ಬರ ಮೇಲೆಯೇ 2-3 ವೈದ್ಯರ ಕೆಲಸದ ಒತ್ತಡವೂ ಬೀಳುವಂತಾಗಿದೆ. ಹೀಗಾಗಿ ಕೆಲ ಕಡೆ 2-3 ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಗಳನ್ನು ಒಬ್ಬರೇ ವೈದ್ಯರು ನೋಡಿಕೊಳ್ಳುವ ಅನಿವಾರ್ಯತೆ ಇದೆ.

ಜಿಲ್ಲೆಗೆ ಮಂಜೂರಾತಿ ಇರುವ ಹುದ್ದೆಗಳ ಪೈಕಿ ಅರ್ಧದಷ್ಟು ಖಾಲಿಯಿದ್ದು, ಈ ಹುದ್ದೆಗಳ ಭರ್ತಿಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಕೊರತೆಯ ಮಧ್ಯೆಯೂ ಪ್ರಸಕ್ತ ಸಾಲಿನ ರಾಷ್ಟ್ರೀಯ ಕಾಲುಬಾಯಿ ರೋಗ ನಿಯಂತ್ರಣ ಕಾರ್ಯಕ್ರಮದಡಿ 1.76 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಶೇ.95.97 ಸಾಧನೆ ಮಾಡಲಾಗಿದ್ದು, ಇದರ ಜತೆಗೆ ಚರ್ಮಗಂಟು ರೋಗಕ್ಕೂ ನಿಗದಿತ ಸಮಯಕ್ಕೆ ಲಸಿಕೆ ಹಾಕುವ ಮೂಲಕ ನಿಯಂತ್ರಣದಲ್ಲಿ ಇಡಲಾಗಿದೆ.
*ರವಿ ಸಾಲಿಗೌಡರ,
ಉಪ ನಿರ್ದೇಶಕರು, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ

*ಶಶಿಧರ್‌ ಬುದಿ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.