ಪಾಲಿಕೆ ಬಜೆಟ್‌; ಸಾರ್ವಜನಿಕರ ಸಲಹಾ ಸಭೆ


Team Udayavani, Mar 7, 2020, 12:08 PM IST

ಪಾಲಿಕೆ ಬಜೆಟ್‌; ಸಾರ್ವಜನಿಕರ ಸಲಹಾ ಸಭೆ

ಹುಬ್ಬಳ್ಳಿ: ಮಹಾನಗರ ಪಾಲಿಕೆ ಆಯವ್ಯಯ ಮಂಡನೆ ಕೇವಲ ಸಂಪ್ರದಾಯವಾಗುವ ಬದಲು ಘೋಷಣೆಗಳನ್ನು ಕಾರ್ಯರೂಪಕ್ಕೆ ತರಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಯ ಉದ್ಯಾನಗಳ ಅಭಿವೃದ್ಧಿಗೆ ಒತ್ತು ನೀಡಬೇಕು, ಹಿರಿಯ ನಾಗರಿಕರಿಗೆ ಸೌಲಭ್ಯ ಕಲ್ಪಿಸಬೇಕು. ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಬೇಕು. ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಬೇಕು.

ಮಹಾನಗರ ಪಾಲಿಕೆಯ 2020-21ನೇ ಸಾಲಿನ ಆಯವ್ಯಯ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಸಾರ್ವಜನಿಕರು ನೀಡಿದ ಸಲಹೆಗಳಿವು. ಪ್ರತಿ ಬಜೆಟ್‌ನಲ್ಲೂ ಸಾಕಷ್ಟು ಘೋಷಣೆ ಮಾಡಲಾಗುತ್ತದೆ. ಹೊಸ ಭರವಸೆಗಳನ್ನು ಈಡೇರಿಸಲಾಗುತ್ತದೆ. ಆದರೆ ಬಹುತೇಕ ಯೋಜನೆಗಳು ಕಾರ್ಯರೂಪಕ್ಕೆ ಬರುವುದಿಲ್ಲ. ಹಿಂದಿನ ಆಯವ್ಯಯದಲ್ಲಿ ಘೋಷಣೆ ಮಾಡಿದ ಹಾಗೂ ಪ್ರಗತಿಯಲ್ಲಿರುವ ಯೋಜನೆ ಪೂರ್ಣಗೊಳಿಸುವುದಕ್ಕೆ ಮೊದಲ ಪ್ರಾಶಸ್ತ್ಯ ನೀಡಬೇಕು ಎಂದು ಒಕ್ಕೊರಲಿನಿಂದ ಸಲಹೆ ನೀಡಿದರು.

72.97 ಕೋಟಿ ಕರ ಸಂಗ್ರಹ ಗುರಿ: ಆಸ್ತಿ ತೆರಿಗೆ ಸಮರ್ಪಕವಾಗಿ ಸಂಗ್ರಹಿಸುವ ನಿಟ್ಟಿನಲ್ಲಿ ಜಿಐಎಸ್‌ ಸರ್ವೇ ಆಗಬೇಕಿದೆ. ಈ ನಿಟ್ಟಿನಲ್ಲಿ ಈಗಾಗಲೇ 700 ಆಸ್ತಿ ಸರ್ವೇ ಮಾಡಿದ್ದು, ಇದರಲ್ಲಿ 35 ಆಸ್ತಿ ಕರ ವ್ಯಾಪ್ತಿಯಲ್ಲಿಲ್ಲ. 5000 ಆಸ್ತಿಗಳ ಸರ್ವೇ ಮಾಡಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಜಿಐಎಸ್‌ ಸರ್ವೇಗೆ ಅನುಮತಿ ಪಡೆಯಲಾಗುವುದು. ಪ್ರಸಕ್ತ ಸಾಲಿನಲ್ಲಿ 72.97 ಕೋಟಿ ರೂ. ಕರ ಸಂಗ್ರಹ ಗುರಿಯಿತ್ತು. ಈಗಾಗಲೇ 55.35 ಕೋಟಿ ರೂ. ಸಂಗ್ರಹ ಹಾಗೂ 10 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ ತಿಳಿಸಿದರು.

ಬಿಆರ್‌ಟಿಎಸ್‌ ಯೋಜನೆ ಹಂತದಲ್ಲಿ ಬಸ್‌ ಶೆಲ್ಟರ್‌ ತೆರವುಗೊಳಿಸಲಾಗಿತ್ತು. ಇಂತಹ ಸ್ಥಳ ಸೇರಿದಂತೆ ಅಗತ್ಯ ಸ್ಥಳಗಳಲ್ಲಿ ಶೆಲ್ಟರ್‌ ನಿರ್ಮಾಣಕ್ಕೆ ಖಾಸಗಿ ಸಂಘ-ಸಂಸ್ಥೆಗಳು ಮುಂದೆ ಬಂದಿವೆ. ಮಹಾನಗರದಲ್ಲಿರುವ ಕೆಲ ಸಂಸ್ಥೆ, ಕಂಪನಿ ಮುಖ್ಯಸ್ಥರಿಗೆ ಪತ್ರ ಬರೆದು ಬಸ್‌ ಶೆಲ್ಟರ್‌, ವೃತ್ತ ಅಭಿವೃದ್ಧಿಗೆ ಸಹಕಾರ ಕೇಳಲಾಗುವುದು. ಹೊಸೂರು ವೃತ್ತದಲ್ಲಿರುವ ಪಾಲಿಕೆ ಕಟ್ಟಡವಿರುವ ಸ್ಥಳದಲ್ಲಿ ಮಾರುಕಟ್ಟೆ ಕಟ್ಟಡ ನಿರ್ಮಿಸುವ ಕುರಿತು ಕೆಎಸ್‌ಎಸ್‌ಐಡಿಸಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಆಯುಕ್ತರು ಮಾಹಿತಿ ನೀಡಿದರು.

ಪ್ರಮುಖರಾದ ರಾಘವೇಂದ್ರ ಮುರಗೋಡ, ವೀರಣ್ಣ ಕಾಡಪ್ಪನವರ, ಅಶೋಕ ಬೆಳ್ಳಿಗಟ್ಟಿ, ಡಾ| ಸುರೇಶ ಮೆಣಸಗಿ, ಸಂಗಿತಾ ಇಜಾರದ, ಚನ್ನಬಸಪ್ಪ ಧಾರವಾಡಶೆಟ್ಟರ, ಈಶ್ವರ ನಾಯ್ಕರ, ಸರಸ್ವತಿ ಮೆಹರವಾಡೆ, ಸುನಂದಾ ಜಡಿ ಇನ್ನಿತರಿದ್ದರು.

ಒತ್ತುವರಿ ತೆರವಿಗೆ ವಿಶೇಷ ಕಾರ್ಯಯೋಜನೆ : ಏಪ್ರೀಲ್‌ ಹಾಗೂ ಮೇ ತಿಂಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಲಾಗುವುದು. ಇದಕ್ಕಾಗಿ ವಿಶೇಷ ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ ಹೇಳಿದರು. ಸಾರ್ವಜನಿಕರಿಂದ ಸಲಹೆ ಪಡೆದ ನಂತರ ಮಾತನಾಡಿದ ಅವರು, ಮಹಾನಗರ ವ್ಯಾಪ್ತಿಯಲ್ಲಿ 421 ಉದ್ಯಾನವನಗಳಿದ್ದು, ಇದರಲ್ಲಿ 70 ಪಾಲಿಕೆಯಿಂದ ನಿರ್ವಹಣೆಯಾಗುತ್ತಿವೆ. 50 ಉದ್ಯಾನಗಳನ್ನು ತೋಟಗಾರಿಕೆ ಇಲಾಖೆಗೆ ವಹಿಸುವ ಚಿಂತನೆಯಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಉದ್ಯಾನದ ಅಭಿವೃದ್ಧಿಗೆ ಸಿಎಸ್‌ ಆರ್‌ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದ್ದು, ಇದಕ್ಕಾಗಿ 50 ಉದ್ಯಾನವನಗಳನ್ನು ಗುರುತಿಸಲಾಗಿದೆ. ವಾಕಿಂಗ್‌ ಪಾಥ್‌, ಮಕ್ಕಳ ಆಟಿಕೆ ಸಾಮಗ್ರಿ, ಫೆನಿಷಿಂಗ್‌ ಹಾಕಲಾಗುವುದು. ವೃತ್ತಗಳ ಸೌಂದಯೀìಕರಣಕ್ಕೆ ಖಾಸಗಿ ಸಂಘ-ಸಂಸ್ಥೆಗಳು ಮುಂದಾಗಿದ್ದು, ಅವರೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

ಬೀದಿದೀಪ ನಿರ್ವಹಣೆ  ಅವೈಜ್ಞಾನಿಕವಾಗಿದ್ದು, ಹೆಚ್ಚಿನ ಕೆಲಸಗಾರರನ್ನು ನೇಮಿಸಿ ಸಮಯ ನಿರ್ವಹಣೆಗೆ ಒತ್ತು ನೀಡಬೇಕು. ಗಣೇಶ ಮೂರ್ತಿ ವಿಸರ್ಜನಾ ಬಾವಿ ಅಭಿವೃದ್ಧಿಯಾಗಬೇಕು. ಹಿಂದಿನ ಬಜೆಟ್‌ನಲ್ಲೂ ಈ ಬಗ್ಗೆ ಪ್ರಸ್ತಾಪವಿದ್ದರೂ ಹಬ್ಬದ ಸಂದರ್ಭದಲ್ಲಿ ಮಾತ್ರ ಗಮನ ಹರಿಸಲಾಗುತ್ತಿದೆ. -ಅಮರೇಶ ಹಿಪ್ಪರಗಿ

ಬಿಬಿಎಂಪಿಯಲ್ಲಿ ಹಿರಿಯ ನಾಗರಿಕರಿಗಾಗಿ 3 ಕೋಟಿ ಮೀಸಲಿಡುತ್ತಿದ್ದು, ಇಲ್ಲಿ 10 ಲಕ್ಷ ರೂ. ಇಡಲಾಗುತ್ತಿದೆ. ಆದರೆ ಇದನ್ನು ಯಾವುದಕ್ಕೆ ಖರ್ಚು ಮಾಡಲಾಗುತ್ತಿದೆ ಎನ್ನುವ ಮಾಹಿತಿಯಿಲ್ಲ. ಈ ಬಾರಿ 50 ಲಕ್ಷ ರೂ. ಮೀಸಲಿಡಬೇಕು. ಉದ್ಯಾನವನಗಳನ್ನು ಅಭಿವೃದ್ಧಿಪಡಿಸಬೇಕು. ವಿಶ್ರಾಂತಿ ವ್ಯವಸ್ಥೆ ಮಾಡಿ, ದಿನಪತ್ರಿಕೆ ಹಾಗೂ ಕುಡಿವ ನೀರು ಒದಗಿಸಬೇಕು. -ಬಿ.ಎ. ಪಾಟೀಲ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.