ಪಾಲಿಕೆ ಆರೋಗ್ಯ ನಿರೀಕ್ಷಕರಿಬ್ಬರು ಎಸಿಬಿ ಬಲೆಗೆ

ಪೌರಕಾರ್ಮಿಕರಿಗೆ ವೇತನ ಬಿಲ್‌ ಮಂಜೂರಿಗೆ ಹಣದ ಬೇಡಿಕೆ­ಹೋಟೆಲ್‌ನಲ್ಲಿ ರೆಡ್‌ಹ್ಯಾಂಡ್‌ ಆಗಿ ಸೆರೆ

Team Udayavani, Jul 4, 2021, 4:03 PM IST

page

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ಇಬ್ಬರು ಆರೋಗ್ಯ ನಿರೀಕ್ಷಕರು ಶನಿವಾರ ಸ್ವತ್ಛತಾ ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

ಇಲ್ಲಿನ ವಲಯ ಕಚೇರಿ ನಂ.10ರ ಆರೋಗ್ಯ ನಿರೀಕ್ಷಕರಾದ ಹಳೇಹುಬ್ಬಳ್ಳಿಯ ನೂರಂದಪ್ಪ ಭಜಂತ್ರಿ ಹಾಗೂ ತಜಮಿಲ್‌ ಶಿರ್ಸಿ ಸಿಕ್ಕಿ ಬಿದ್ದವರು. ಇವರಿಬ್ಬರು ಸ್ವತ್ಛತಾ ಪೌರಕಾರ್ಮಿಕರಿಗೆ ವೇತನ ಕೊಡುವ ಸಲುವಾಗಿ ಹಳೇಹುಬ್ಬಳ್ಳಿಯ ಪಾಲಿಕೆಯ ಸ್ವತ್ಛತಾ ಗುತ್ತಿಗೆದಾರ ಅಲ್ಲಾಭಕ್ಷ ಸಾಹೇಬ ಕಿತ್ತೂರ ಎಂಬುವರಿಂದ ಪ್ರತಿ ತಿಂಗಳು ಬಿಲ್‌ ಮಂಜೂರು ಮಾಡಲು ಕಮಿಷನ್‌ ರೂಪದಲ್ಲಿ ಒತ್ತಡ ಹಾಕುತ್ತಿದ್ದರು. ಅದರಂತೆ ಮೇ-ಜೂನ್‌ ತಿಂಗಳದ ಬಿಲ್‌ ಮಂಜೂರಿಗಾಗಿ ನೂರಂದಪ್ಪ 12 ಸಾವಿರ ರೂ. ಹಾಗೂ ತಜಮಿಲ್‌ 10 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು. ಅದರಲ್ಲಿ ತಜಮಿಲ್‌ ಮುಂಗಡವಾಗಿ 4 ಸಾವಿರ ರೂ. ಇಸಿದುಕೊಂಡಿದ್ದ. ಈ ಕುರಿತು ಅಲ್ಲಾಭಕ್ಷ ಧಾರವಾಡ ಎಸಿಬಿ ಪೊಲೀಸ್‌ ಠಾಣೆಗೆ ದೂರು ಕೊಟ್ಟಿದ್ದರು.

ಗುತ್ತಿಗೆದಾರ ಅಲ್ಲಾಭಕ್ಷರಿಂದ ಶನಿವಾರ ಹಳೇಹುಬ್ಬಳ್ಳಿ ಗಣೇಶ ನಗರದ ಹೊಟೇಲ್‌ವೊಂದರಲ್ಲಿ ನೂರಂದಪ್ಪ 12 ಸಾವಿರ ರೂ. ಹಾಗೂ ತಜಮಿಲ್‌ 6 ಸಾವಿರ ರೂ. ಇಸಿದುಕೊಳ್ಳುತ್ತಿದ್ದರು. ಈ ಸಂದರ್ಭದಲ್ಲಿ ಎಸಿಬಿ ಉತ್ತರ ವಲಯ ಬೆಳಗಾವಿಯ ಪೊಲೀಸ್‌ ಅಧೀಕ್ಷಕ ಬಿ.ಎಸ್‌. ನೇಮಗೌಡ ಮಾರ್ಗದರ್ಶನದಲ್ಲಿ ಡಿಎಸ್‌ಪಿ ಎಲ್‌. ವೇಣುಗೋಪಾಲ, ಇನ್ಸ್‌ಪೆಕ್ಟರ್‌ಗಳಾದ ಅಲಿ ಎ. ಶೇಖ, ವಿ.ಎನ್‌. ಕಡಿ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿ ಇಬ್ಬರನ್ನು ಹಣದ ಸಮೇತ ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

ಎಸಿಬಿ ಸಿಬ್ಬಂದಿಗಳಾದ ಶ್ರೀಶೈಲ ಕಾಜಗಾರ, ಗಿರೀಶ ಮನ್ಸೂರ, ಶ್ರೀಶೈಲ ಬೀಳಗಿ, ಲೋಕೇಶ ಬೆಂಡಿಕಾಯಿ, ಶಿವಾನಂದ ಕೆಲವಡಿ, ಕಾರ್ತಿಕ ಹುಯಿಲಗೋಳ, ವಿ.ಎಸ್‌. ದೇಸಾಯಿಗೌಡರ, ರವಿ ಯರಗಟ್ಟಿ, ಎಸ್‌. ಎಸ್‌. ನರಗುಂದ, ಎಸ್‌. ವೀರೇಶ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.