Politics: ಈ ಬಾರಿ ಸಿದ್ದರಾಮಯ್ಯ ಅವರನ್ನು ಜನರೇ ಮನೆಗೆ ಕಳುಹಿಸುತ್ತಾರೆ: ಸಂಸದ ಮುನಿಸ್ವಾಮಿ
Team Udayavani, Feb 14, 2024, 2:52 PM IST
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಈಗ ನಿವೃತ್ತಿ ಸಮಯವಾಗಿದ್ದು, ಜನರೇ ಅವರನ್ನು ಮನೆಗೆ ಕಳುಹಿಸಲು ತಿರ್ಮಾನಿಸಿದ್ದಾರೆ ಎಂದು ಸಂಸದ ಎ. ಮುನಿಸ್ವಾಮಿ ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಡ್ರಾಮಾ ಕಂಪನಿ ತಂಡ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿದೆ ಎಂದು ದೆಹಲಿಗೆ ತೆರಳಿದ್ದರು. ಆದರೆ, ಪ್ರಧಾನಮಂತ್ರಿ ಮೋದಿ ಅವರು ರಾಜ್ಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆ. ಅನುದಾನ ಹಂಚಿಕೆ ವಿಷಯದಲ್ಲಿ ಸಿದ್ದರಾಮಯ್ಯ ಸುಮ್ಮನೆ ಕೇಂದ್ರದ ಮೇಲೆ ಗೂಬೆ ಕೂರಿಸುವಂತಹ ಕೆಲಸ ಮಾಡುತ್ತಿದ್ದಾರೆ. ಅವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದರು.
ಕಾಂಗ್ರೆಸ್ ನವರ ಗ್ಯಾರಂಟಿಗಳಿಗೆ ವಾರಂಟಿ ಇಲ್ಲ. ಅವುಗಳು ಅಳುವಿನಂಚಿನಲ್ಲಿವೆ. ಹೀಗಾಗಿ ಇನ್ನಿಲ್ಲದ ಗಿಮಿಕ್ ಕಾಂಗ್ರೆಸ್ ನವರು ಮಾಡುತ್ತಿದ್ದಾರೆ. ಮನೆಗೆ ನೀರು ಬಾರದಿದ್ದರೂ ಮೋದಿಯತ್ತ ಬೊಟ್ಟು ಮಾಡುತ್ತಾರೆ. ಒಂದೇ ಸಮುದಾಯಕ್ಕೆ ಹತ್ತು ಕೋಟಿ ರೂ. ಅನುದಾನ ನೀಡುವ ಮೂಲಕ ದೇಶ ಇಬ್ಭಾಗಿಸುವ ಕಾರ್ಯ ಕಾಂಗ್ರೆಸ್ ನವರು ಮಾಡುತ್ತಿದ್ದಾರೆ. ಇದೇ ಉದ್ದೇಶದಿಂದ ಸಂಸದ ಡಿ.ಕೆ. ಸುರೇಶ ದಕ್ಷಿಣ ಭಾರತದ ಹೇಳಿಕೆ ನೀಡಿದ್ದಾರೆ ಎಂದರು.
ಶೇ. 5ರಷ್ಟು ಜನರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು ತಲುಪಿವೆ. ಈ ನಿಟ್ಟಿನಲ್ಲಿ ಚುನಾವಣೆ ಬರಲಿ, ಸಿದ್ದರಾಮಯ್ಯ ನಮ್ಮ ಮನೆಗೆ ಬರಲಿ ಆಗ ತಕ್ಕ ಉತ್ತರ ಕೊಡುತ್ತೇವೆ ಎಂದು ಜನರು ಕಾಯುತ್ತಿದ್ದಾರೆ ಎಂದರು.
ಇದನ್ನೂ ಓದಿ: Vijayapura: ಅಕ್ರಮ ಗೋವುಗಳ ಸಾಕಾಣಿಕೆ; 11 ಕರುಗಳ ಸಾವು, 110 ಗೋವುಗಳ ರಕ್ಷಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ