ಮುರುಘೇಂದ್ರ ಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಚಾಲನೆ
Team Udayavani, Jan 19, 2018, 12:50 PM IST
ಧಾರವಾಡ: ಸಾಂಸ್ಕೃತಿಕ ಮಟ್ಟ ಕುಸಿಯುತ್ತಿರುವ ಇಂದಿನ ದಿನಮಾನದಲ್ಲಿ ನಮ್ಮ ಸಂಸ್ಕೃತಿ ಬಿಂಬಿಸುವ ಜಾತ್ರಾ ಮಹೋತ್ಸವ, ಉತ್ಸವಗಳಲ್ಲಿ ಯುವ ಪೀಳಿಗೆ ತೊಡಗಿಸಿಕೊಳ್ಳುವ ತುರ್ತು ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
ನಗರದ ಮುರುಘಾ ಮಠದಲ್ಲಿ ಗುರುವಾರದಿಂದ ಆರಂಭಗೊಂಡ ಶ್ರೀ ಮದಥಣಿ ಮುರುಘೇಂದ್ರ ಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಮಾಜದಲ್ಲಿ ಯುವಕರು ಉತ್ಸವ, ಸಮಾರಂಭಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿಲ್ಲ.
ಈ ಕಾರ್ಯಗಳು ನಮ್ಮ ಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ನಿಂತಿರುತ್ತವೆ.ಇದಲ್ಲದೇ ಮುದ್ರಣ ಮತ್ತು ದೃಶ್ಯ ಮಾಧ್ಯಮದಲ್ಲಿ ಕೇವಲ ಕೊಲೆ-ದರೋಡೆ ಪ್ರಕರಣಗಳನ್ನು ಕಾಣುತ್ತಿದ್ದೇವೆ. ಇಂತಹ ಸಮಯದಲ್ಲಿ ನಮ್ಮತನ ಉಳಿಸಿಕೊಳ್ಳುವುದಕ್ಕಾಗಿ ಜಾತ್ರಾ ಮಹೋತ್ಸವ ನಡೆಯುತ್ತವೆ.
ಸಮಾಜದ ಕಾರ್ಯಕ್ರಮಗಳಲ್ಲಿ ಯುವ ಪೀಳಿಗೆ ಹೆಚ್ಚೆಚ್ಚು ತೊಡಗುವಂತೆ ಮಾಡಬೇಕು ಎಂದರು. ವೀರಣ್ಣ ಮತ್ತಿಗಟ್ಟಿ ಮಾತನಾಡಿ, ಮಾನವೀಯ ಮೌಲ್ಯಗಳು ವಿಕಸನಗೊಳ್ಳಲು ಶಿಕ್ಷಣ ಮುಖ್ಯ. ಆ ಕಾಲದಲ್ಲಿ ಶಿಕ್ಷಣ ನೀಡಲು ಕಾಯಕಲ್ಪ ಹಾಕಿದ್ದು ಧಾರವಾಡದ ಮುರುಘಾ ಮಠ ಎಂದು ಹೇಳಿದರು.
ಚಿತ್ರದುರ್ಗದ ಮುರುಘ ರಾಜೇಂದ್ರ ಸಂಸ್ಥಾನ ಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಸಾನ್ನಿಧ್ಯ ವಹಿಸಿದ್ದರು. ಹುಬ್ಬಳ್ಳಿಯ ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಮೋಹನ ಲಿಂಬಿಕಾಯಿ, ಪಂಪಾವತಿ ಮರಿಗೌಡರ ಪಾಟೀಲ, ನೀಲಂ ಬಾಳಿಕಾಯಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ