ಕುಂದಗೋಳದಲ್ಲಿ ಮುತ್ತಣ್ಣವರ ಎಲೆಕ್ಷನ್ ನಿಲ್ತಾರಂತೆ
Team Udayavani, Apr 26, 2019, 1:22 PM IST
ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿಯಿಂದ ಪ್ರಬಲ ಆಕಾಂಕ್ಷಿಯಾಗಿದ್ದು, ಏ. 29ರಂದು ನಾಮಪತ್ರ ಸಲ್ಲಿಸುವುದಾಗಿ ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಕುಂದಗೋಳ ಕ್ಷೇತ್ರದಲ್ಲಿ ಕುರುಬ ಸಮಾಜದ ಮತಗಳು ಹೆಚ್ಚಿದ್ದು, ಈ ಸಮಾಜಕ್ಕೆ ಸೇರಿದ ನನಗೆ ಕ್ಷೇತ್ರದ ಜನತೆ ಕೈಹಿಡಿಯಲಿದ್ದಾರೆ.
ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಮುಖಂಡರಾದ ಕೆ.ಎಸ್. ಈಶ್ವರಪ್ಪ, ಜಗದೀಶ ಶೆಟ್ಟರ, ಪ್ರಹ್ಲಾದ ಜೋಶಿ ಅವರಿಗೆ ಮನವರಿಕೆ ಮಾಡಿದ್ದೇನೆ. ಮುಖಂಡರಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ. ಪಕ್ಷದಲ್ಲಿ ಕುರುಬ ಸಮಾಜದ ಮುಖಂಡರ ಬೆಳವಣಿಗೆ ಅಗತ್ಯವಿರುವ ಕಾರಣ ಸ್ಪರ್ಧೆ ಮಾಡಲು ಇಚ್ಛಿಸಿದ್ದೇನೆ. ಪಕ್ಷದ ಮುಖಂಡರು ನನ್ನನ್ನು ಪರಿಗಣಿಸಿದರೆ ಜಯ ನಿಶ್ಚಿತವಾಗಿದೆ. 29ರಂದು ಕುಂದಗೋಳದ ಶ್ರೀ ಗಾಳಿ ಮಾರೆಮ್ಮ ದೇವಸ್ಥಾನದಿಂದ ಚುನಾವಣಾ ಕಚೇರಿವರೆಗೂ ಬೃಹತ್ ಮೆರವಣಿಗೆ ಮೂಲಕ ತೆರಳಿ ಮಧ್ಯಾಹ್ನ 12:15ಕ್ಕೆ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ