ಮಂಗಳೂರು ಪ್ರಕರಣದಲ್ಲಿ ಹುಬ್ಬಳ್ಳಿಯ ಪ್ರೇಮರಾಜ್ ಹೆಸರು: ನಕಲಿ ಆಧಾರ್ ಕಾರ್ಡ್ ಎಂದ ಪೊಲೀಸರು
Team Udayavani, Nov 20, 2022, 3:00 PM IST
ಹುಬ್ಬಳ್ಳಿ: ಮಂಗಳೂರಿನ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ನಕಲಿ ವಿಳಾಸ ಪತ್ತೆಯಾಗಿದ್ದು, ಅದು ಹುಬ್ಬಳ್ಳಿಯ ಪ್ರೇಮ್ ರಾಜ್ ಅವರಿಗೆ ಸೇರಿದೆ.
ಆಟೋರಿಕ್ಷಾದಲ್ಲಿ ಪತ್ತೆಯಾದ ಆಧಾರ ಕಾರ್ಡ್ ಹುಬ್ಬಳ್ಳಿಯ ಕೇಶ್ವಾಪುರ ಮಧುರಾ ಕಾಲೋನಿ ನಿವಾಸಿ ಪ್ರೇಮರಾಜ್ ಹೆಸರಿನಲ್ಲಿದೆ. ಆದರೆ ಈ ಆಧಾರ್ ಕಾರ್ಡ್ ಕಳೆದು ಹೋಗಿತ್ತು. ಇವರದೇ ವಿಳಾಸವನ್ನು ಬ್ಲಾಸ್ಟ್ ನಲ್ಲಿ ಬಳಕೆ ಮಾಡಲಾಗಿದೆ. ಪ್ರೇಮ್ ರಾಜ್ಗೂ ಈ ಪ್ರಕರಣಕ್ಕೆ ಸಂಬಂಧ ಇಲ್ಲ ಎನ್ನುತ್ತಿದ್ದಾರೆ ಕುಟುಂಬದವರು.
“ನನ್ನ ಮಗ ಅಂಥವನಲ್ಲ. ಈ ಪ್ರಕರಣಕ್ಕೂ ನನ್ನ ಮಗನಿಗೂ ಯಾವುದೇ ಸಂಬಂಧವಿಲ್ಲ. ಈಗ ದಾಖಲಾತಿ ಪರಿಶೀಲನೆ ನಡೆಯುತ್ತಿದೆ. ಪೊಲೀಸರು ಕೇಳಿದ ಎಲ್ಲ ಮಾಹಿತಿ ಹಂಚಿಕೊಂಡಿದ್ದೇವೆ. ಪ್ರೇಮರಾಜ್ ಆಧಾರ ಕಾರ್ಡ್ ಕಳೆದುಕೊಂಡಿದ್ದ. ಆಗ ದೂರು ಕೊಡು ಎಂದು ಸಲಹೆ ಕೊಟ್ಟಿದ್ದೆ. ತುಮಕೂರಿನಲ್ಲಿ ನನ್ನ ಮಗನ ವಿಚಾರಣೆ ಮಾಡಿದ್ದಾರೆ. ಈ ಬಗ್ಗೆ ಬೆಳಗ್ಗೆ ನನ್ನ ಮಗನ ಜೊತೆ ಮಾತನಾಡಿದ್ದೇನೆ” ಎಂದು ಅವರ ತಂದೆ ಮಾರುತಿ ಹುಟಗಿ ಹೇಳಿದರು.
ಇದನ್ನೂ ಓದಿ:ಎರಡು ಬಾರಿ ಕ್ಯಾನ್ಸರ್.., ಬ್ರೈನ್ ಸ್ಟ್ರೋಕ್ 24 ರ ಹರೆಯದಲ್ಲೇ ಉಸಿರು ಚೆಲ್ಲಿದ ಖ್ಯಾತ ನಟಿ
ಪ್ರೇಮರಾಜ್ ರೈಲ್ವೆ ಇಲಾಖೆಯಲ್ಲಿ ಡಿ ಗ್ರೂಪ್ ನೌಕರನಾಗಿದ್ದು, ತುಮಕೂರಿನಲ್ಲಿ ಟ್ರ್ಯಾಕ್ ಮೆಂಟೇನರ್ ಆಗಿ ಕೆಲಸ ಮಾಡುತ್ತುದ್ದಾರೆ. ಇತ್ತೀಚೆಗೆ ಶಿಕ್ಷಕರ ಹುದ್ದೆ ಪರೀಕ್ಷೆ ಬರೆದು ಅದರಲ್ಲಿ ತೇರ್ಗಡೆಯಾಗಿದ್ದು, ಅದಕ್ಕಾಗಿ ದಾಖಲಾತಿಗಳ ಪರಿಶೀಲನೆ ನಡೆದಿದೆ. ಅದರಲ್ಲಿ ಆತ ಮಗ್ನನಾಗಿದ್ದಾನೆ. ಆರು ತಿಂಗಳ ಹಿಂದಷ್ಟೇ ಹಾವೇರಿಗೆ ಪರೀಕ್ಷೆ ಬರೆಯಲು ಹೋಗಿದ್ದಾಗ ಆಧಾರ ಕಾರ್ಡ್ ಕಳೆದುಕೊಂಡಿದ್ದ ಎಂದು ತಿಳಿದುಬಂದಿದೆ.
ಇವರ ತಂದೆ ಮಾರುತಿ ಅವರ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಮಗನ ಬಗ್ಗೆ ಇಂತಹ ಸುದ್ದಿ ಕೇಳಿ ಅವರ ತಾಯಿ ರೇಣುಕಾ ಅವರು ಕೆಲಹೊತ್ತು ದಿಗಿಲುಗೊಂಡಿದ್ದರು. ನಂತರ ಅವರಿಗೆ ಕುಟುಂಬಸ್ಥರು ಮನವರಿಕೆ ಮಾಡಿದ ಮೇಲೆ ಸಾವರಿಸಿಕೊಂಡರು.
ಮಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖಾಧಿಕಾರಿಗಳು ಸ್ಥಳೀಯ ವಿಳಾಸ ಇರುವ ವ್ಯಕ್ಯಿಯ ಬಗ್ಗೆ ಮಾಹಿತಿ ಕೊಟ್ಟಾಗ ಸಂಬಂಧಪಟ್ಟ ಠಾಣೆಯ ಅಧಿಕಾರಿ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿದ್ದಾರೆ ಎಂದು ಹು-ಧಾ ಪೊಲೀಸ್ ಆಯುಕ್ತ ಲಾಭೂ ರಾಮ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ