ಬಡ ಕೂಲಿಕಾರ್ಮಿಕರಿಗೆ ವರದಾನವಾದ ನರೇಗಾ


Team Udayavani, Apr 30, 2020, 12:24 PM IST

huballi-tdy-7

ಸಾಂದರ್ಭಿಕ ಚಿತ್ರ

ಕಲಘಟಗಿ: ಲಾಕ್‌ಡೌನ್‌ ಕಾರಣ ಕೆಲಸವಿಲ್ಲದೆ ಮನೆಯಲ್ಲಿ ಕುಳಿತಿದ್ದ ಕೂಲಿ ಕಾರ್ಮಿಕರಿಗೆ ನರೇಗಾ ಕಾಮಗಾರಿ ಜೀವನೋಪಾಯಕ್ಕೆ ಎಡೆಮಾಡಿಕೊಟ್ಟಿದ್ದು, ಗಲಗಿನಗಟ್ಟಿ ಗ್ರಾಮದ ಬಡಿಕಟ್ಟಿ ಕೆರೆ ಹೂಳೆತ್ತುವ ಕಾರ್ಯದಲ್ಲಿ ಕೂಲಿ ಕಾರ್ಮಿಕರು ನಿರತರಾಗಿದ್ದಾರೆ.

ದಿನದ ದುಡಿಮೆಯನ್ನೇ ನಂಬಿಕೊಂಡಿದ್ದ ಅದೆಷ್ಟೋ ಕೂಲಿಕಾರ್ಮಿಕ ಕುಟುಂಬಗಳು ಹುಬ್ಬಳ್ಳಿಯ ಕೂಲಿಯನ್ನೇ ನೆಚ್ಚಿಕೊಂಡು ಬಾಳು ನಡೆಸುತ್ತಿದ್ದರು. ಲಾಕ್‌ಡೌನ್‌ ಘೋಷಣೆ ಬಳಿಕ ಕೆಲಸವಿಲ್ಲದೆ ಅರೆಹೊಟ್ಟೆಯಲ್ಲಿ ಕಾಲ ಕಳೆಯುತ್ತಿದ್ದ ಜನತೆಗೆ ನರೇಗಾ ನೆರವಾಗುತ್ತಿದೆ. ಕೆರೆ ಹೂಳೆತ್ತುವುದು, ಕಾಲುವೆ ನಿರ್ಮಾಣ, ಅರಣ್ಯೀಕರಣ, ಕೃಷಿ ಹೊಂಡ, ದನದ ಕೊಟ್ಟಿಗೆ ಸೇರಿ ಒಟ್ಟು 6.91 ಲಕ್ಷ ಮಾನವ ದಿನಗಳು ಮಂಜೂರಾಗಿದ್ದು, ಇದರಲ್ಲಿ ಈಗಾಗಲೇ 10 ಸಾವಿರ ಮಾನವ ದಿನಗಳನ್ನು ಸೃಜಿಸಲಾಗಿದೆ ಎಂದು ತಾಪಂ ಇಒ ಎಂ.ಎಸ್‌. ಮೇಟಿ ಮಾಧ್ಯಮಕ್ಕೆ ತಿಳಿಸಿದರು.

ದೇವಿಕೊಪ್ಪ, ಜಿನ್ನೂರ, ಗಳಗಿಹುಲಕೊಪ್ಪ, ಜಿ.ಬಸವನಕೊಪ್ಪ ಸೇರಿದಂತೆ ತಾಲೂಕಿನ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಸಾವಿರಾರು ಕೂಲಿ ಕಾರ್ಮಿಕರು ಉದ್ಯೋಗದಲ್ಲಿ ನಿರತರಾಗಿದ್ದಾರೆ. ಉದ್ಯೋಗದಲ್ಲಿ ನಿರತರಾದವರಿಗೆ ಒಂದು ಜಾಬ್‌ ಕಾರ್ಡ್‌ಗೆ 100 ಮಾನವ ದಿನಗಳಿದ್ದು, ಒಂದು ದಿನದ ಕೂಲಿ 275 ಹಾಗೂ 10 ಸಾಮಗ್ರಿ ವೆಚ್ಚ ಸೇರಿ 285 ರೂ. ಪಾವತಿಸಲಾಗುತ್ತದೆ. ಜನರು ತಮ್ಮ ಗ್ರಾಪಂಗಳಿಗೆ ಭೇಟಿ ನೀಡಿ ಕೆಲಸ ಪಡೆಯಬಹುದು ಎಂದು ನರೇಗಾ ಸಹಾಯಕ ನಿರ್ದೇಶಕ ಚಂದ್ರು ಪೂಜಾರ ತಿಳಿಸಿದರು

ತಾಪಂ ಇಒ ಎಂ.ಎಸ್‌. ಮೇಟಿ, ನರೇಗಾ ಸಹಾಯಕ ನಿರ್ದೇಶಕ ಚಂದ್ರು ಪೂಜಾರ, ಪಿಡಿಒ ಚನ್ನಮಲ್ಲಪ್ಪ ಉಳ್ಳಾಗಡ್ಡಿ, ಗ್ರಾಪಂ ಅಧ್ಯಕ್ಷೆ ಚನ್ನವ್ವ ಆಲದಮರದ, ಉಪಾಧ್ಯಕ್ಷೆ ಈರವ್ವ ಬೇಗೂರ ಮುಂತಾದವರು ಕಾರ್ಯನಿರತ ಕಾರ್ಮಿಕರಿಗೆಲ್ಲಾ ಉಚಿತವಾಗಿ ಮಾಸ್ಕ್ಗಳನ್ನು ವಿತರಿಸಿದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.