ನರೇಗಾ ವ್ಯಾಪಕ ಪ್ರಚಾರ ಮಾಡಿ
Team Udayavani, Jun 8, 2020, 9:21 AM IST
ಧಾರವಾಡ: ನರೇಗಾ ಕುರಿತು ಎಲ್ಲ ಗ್ರಾಮಗಳಲ್ಲಿ ವ್ಯಾಪಕ ಪ್ರಚಾರ ಮಾಡಿ ಎಂದು ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ ತಿಳಿಸಿದರು.
ಕೋವಿಡ್ ಸಂದರ್ಭದಲ್ಲಿ ಗ್ರಾಮೀಣ ಜನರ ನೋವಿಗೆ ಸ್ಪಂದಿಸಲು ವಿಶೇಷ ಚಟುವಟಿಕೆ ಕೈಗೊಂಡ ಕುರಿತ ಭಿತ್ತಿಚಿತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು. ನರೇಗಾ ಕುರಿತು ತಿಳಿವಳಿಕೆ ಮೂಡಿಸುವುದರ ಜತೆಗೆ ಗ್ರಾಮೀಣ ಜನರಿಗೆ ಹೆಚ್ಚೆಚ್ಚು ಉದ್ಯೋಗ ಒದಗಿಸಬೇಕು. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ರೈತರಿಗೆ ಪೂರಕ ಚಟುವಟಿಕೆ ಕೈಗೆತ್ತಿಕೊಳ್ಳಬೇಕೆಂದರು. ಉಪಾಧ್ಯಕ್ಷ ಶಿವಾನಂದ ಕರಿಗಾರ ಮಾತನಾಡಿ, ಪ್ರಸ್ತುತ ಕೋವಿಡ್-19 ಹಿನ್ನೆಲೆಯಲ್ಲಿ ಬೇರೆ ಬೇರೆ ಜಿಲ್ಲೆ ಮತ್ತು ರಾಜ್ಯಗಳಲ್ಲಿ ಉದ್ಯೋಗ ಅರಸಿ ಹೋದ ಜನರು ಪುನಃ ತಮ್ಮ ಸ್ವಗ್ರಾಮಗಳಿಗೆ ಬಂದಿದ್ದು, ಅವರಿಗೆ ಅವರ ಗ್ರಾಮಗಳಲ್ಲೇ ಉದ್ಯೋಗ ಒದಗಿಸುವ ಸಲುವಾಗಿ ಗ್ರಾಪಂಗಳಿಂದ ಉದ್ಯೋಗ ಚೀಟಿಗಳನ್ನು ಒದಗಿಸಲಾಗಿದೆ ಎಂದರು.
ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ|ಬಿ.ಸಿ.ಸತೀಶ ಮಾತನಾಡಿ, ಮಾಹಿತಿ ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳ ಅಡಿಯಲ್ಲಿ ವಿವಿಧ ಏಳು ರೀತಿಯ ಪೋಸ್ಟರ್ಗಳನ್ನು ಮುದ್ರಿಸಿ ಗ್ರಾಪಂಗಳ ವ್ಯಾಪ್ತಿಯ ಗ್ರಾಪಂ ಸೇರಿ ಇತರೆ ಎಲ್ಲ ಕಚೇರಿಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ ಎಂದರು. ಜಿಪಂ ಉಪ ಕಾರ್ಯದರ್ಶಿ, ಮುಖ್ಯ ಯೋಜನಾಧಿಕಾರಿ, ಸಹಾಯಕ ಕಾರ್ಯದರ್ಶಿಗಳು ಮತ್ತು ಸಿಬ್ಬಂದಿ ವರ್ಗದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ