ನರೇಂದ್ರ ಮೋದಿ ಸಾಧನೆಯಿಂದ ಬಲಿಷ್ಠ ಭಾರತ
Team Udayavani, Apr 9, 2019, 10:30 AM IST
ಹುಬ್ಬಳ್ಳಿ: ಚೀನಾ ದೇಶಕ್ಕೂ ಎದುರುತ್ತರ ನೀಡುವಷ್ಟು ಭಾರತ ಬಲಿಷ್ಠವಾಗಿ ಬೆಳೆದಿದೆ. ಇದು ಅರವತ್ತೆಂಟರ ಭಾರತ ಅಲ್ಲ, ಹದಿನೆಂಟರ ಮೋದಿ ಭಾರತ ಎಂದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಹೇಳಿದರು.
ನವಲಗುಂದ ತಾಲೂಕಿನ ನಲವಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ಕಾಂಗ್ರೆಸ್ಸಿನವರು ಸೈನಿಕರ ಕೈ ಕಟ್ಟಿಹಾಕುವ ಕೆಲಸ ಮಾಡುತ್ತಾರೆ. ದೇಶದಲ್ಲೀಗ ಭಯೋತ್ಪಾದನೆ ನಿಗ್ರಹವಾಗಲು ಸೈನಿಕರಿಗೆ ಕೊಟ್ಟ ವಿಶೇಷ ಅಧಿಕಾರ ಕಾರಣವಾಗಿದ್ದು, ಸದೃಢ ದೇಶಕ್ಕೆ ಮೋದಿ ಅವಶ್ಯಕ ಎಂದು ಹೇಳಿದರು. ಅಣ್ಣಿಗೇರಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಶಾಸಕ ಶಂಕರಪಾಟೀಲ ಮುನೇನಕೊಪ್ಪ, ಮೋದಿಯವರು ಮತ್ತೆ ಪ್ರಧಾನಿಯಾಗಲು ಸರಳ ಹಾಗೂ ಪ್ರಾಮಾಣಿಕ ಸಂಸದರಾಗಿರುವ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು. ರಾಜಶೇಖರ ಕಂಪ್ಲಿ, ನಿಂಗಪ್ಪ ಮಾಯಣ್ಣವರ, ಷಣ್ಮುಖ ಗುರಿಕಾರ, ಎಚ್.ಕೆ. ಪಾಟೀಲ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ
Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ
L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ
Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ
UPSC ಪರೀಕ್ಷೆಯಲ್ಲಿ 101ನೇ ರ್ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ