13ರಂದು ರಾಷ್ಟ್ರೀಯ ಲೋಕ ಅದಾಲತ್‌

•ರಾಜಿ ಆಗಬಹುದಾದ ಪ್ರಕರಣಗಳ ಶಿಫಾರಸಿಗೆ ಹೈಕೋರ್ಟ್‌ ನ್ಯಾಯಮೂರ್ತಿ ಮನವಿ

Team Udayavani, Jul 5, 2019, 12:55 PM IST

hubali-tdy-4..

ಧಾರವಾಡ: ಪೂರ್ವಭಾವಿ ಸಭೆಯಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿ ಅರವಿಂದಕುಮಾರ ಮಾತನಾಡಿದರು.

ಧಾರವಾಡ: ನ್ಯಾಯಾಧೀಶರು, ನಾಯವಾದಿಗಳು ಸೇರಿದಂತೆ ಎಲ್ಲ ವರ್ಗದ ಜನರಿಗೂ ಸಾಮಾಜಿಕ ಜವಾಬ್ದಾರಿ ಇದೆ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಅರವಿಂದಕುಮಾರ ಹೇಳಿದರು.

ಜು.13ರಂದು ಆಯೋಜಿಸಿರುವ ರಾಷ್ಟ್ರೀಯ ಲೋಕ ಅದಾಲತ್‌ ಹಿನ್ನೆಲೆಯಲ್ಲಿ ಧಾರವಾಡ ವಕೀಲರ ಸಂಘದ ಸಭಾಭವನದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಲೋಕ ಅದಾಲತ್‌ಗೆ ರಾಜಿ ಆಗಬಹುದಾದ ಪ್ರಕರಣಗಳನ್ನು ಉಭಯ ಕಕ್ಷಿದಾರರಿಗೆ ತಿಳಿವಳಿಕೆ ನೀಡುವ ಮೂಲಕ ಶಿಫಾರಸು ಮಾಡಿ, ನ್ಯಾಯ ಕೊಡಿಸುವ ಮೂಲಕ ಸಮಾಜದ ಋಣ ತೀರಿಸಬಹುದು. ಎಲ್ಲರೂ ಕೈ ಜೋಡಿಸಿ ರಾಷ್ಟ್ರೀಯ ಲೋಕ ಅದಾಲತ್‌ ಮೂಲಕ ಸಮಾಜಮುಖೀ ಕಾರ್ಯ ಮಾಡಬೇಕು ಎಂದರು.

ನ್ಯಾಯವಾದಿಗಳು ತಮ್ಮ ವೃತ್ತಿಯೊಂದಿಗೆ ಸಮಾಜದ ಹಿತ ಕಾಯುವ ಕಾರ್ಯ ಮಾಡಬೇಕು. ತಿಂಗಳಲ್ಲಿ ಒಂದು ದಿನ ಕನಿಷ್ಠ 10 ನ್ಯಾಯವಾದಿಗಳು ಸೇರಿ ಸಾರ್ವಜನಿಕರಿಗೆ ಕಾನೂನು ತಿಳಿವಳಿಕೆ ನೀಡಬೇಕು ಎಂದು ಹೇಳಿದರು.

ನ್ಯಾಯವಾದಿಗಳು ಕೌಟುಂಬಿಕ ಪ್ರಕರಣಗಳನ್ನು ಆದ್ಯತೆ ಮೆರೆಗೆ ಮಾನವೀಯತೆ ಹಿನ್ನಲೆಯಲ್ಲಿ ಬಗೆಹರಿಸಲು ಕ್ರಮ ವಹಿಸಬೇಕು. ನ್ಯಾಯಾಲಯವು ಕುಟುಂಬಗಳನ್ನು, ಕುಟುಂಬ ಸದಸ್ಯರನ್ನು ಒಗ್ಗೂಡಿಸಲು ಶ್ರಮಿಸುತ್ತದೆ. ಪ್ರತಿಯೊಬ್ಬ ನ್ಯಾಯವಾದಿಯೂ ತಮ್ಮಲ್ಲಿರುವ ಪ್ರಕರಣಗಳನ್ನು ಪರಿಶೀಲಿಸಿ ಉಭಯ ಪಕ್ಷಗಾರರಲ್ಲಿ ರಾಜಿ ಮಾಡಬಹುದಾಗಿದ್ದರೆ ಅವುಗಳನ್ನು ಲೋಕ ಅದಾಲತ್‌ಗೆ ಶಿಫಾರಸು ಮಾಡಬೇಕು ಎಂದರು.

ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಈಶಪ್ಪ ಕೆ. ಭೂತೆ ಮಾತನಾಡಿ, ಜಿಲ್ಲೆಯಲ್ಲಿ ಜು. 13ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಧಾರವಾಡದಲ್ಲಿ 14, ಹುಬ್ಬಳ್ಳಿಯಲ್ಲಿ 16, ಕುಂದಗೋಳ, ಕಲಘಟಗಿ, ನವಲಗುಂದ ಕೋರ್ಟ್‌ಗಳಲ್ಲಿ ತಲಾ ಎರಡು ಪೀಠಗಳು ಕಲಾಪ ನಡೆಸಲಿವೆ. ಈಗಾಗಲೇ ರಾಜಿ ಆಗಬಹುದಾದ 7095 ಪ್ರಕರಣಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧಿಧೀಶ ಚಿಣ್ಣನ್ನವರ ಆರ್‌.ಎಸ್‌. ಮಾತನಾಡಿ, ಎಲ್ಲ ನ್ಯಾಯಾಲಯಗಳು ಸೇರಿ 7918 ಸಿವಿಲ್ ಮತ್ತು 5390 ಕ್ರಿಮಿನಲ್ ಪ್ರಕರಣಗಳು ಜಿಲ್ಲೆಯಲ್ಲಿ ಬಾಕಿ ಇವೆ. ನ್ಯಾಯವಾದಿಗಳು ರಾಜಿ ಆಗಬಹುದಾದ ಪ್ರಕರಣಗಳನ್ನು ಅಲ್ಲಿನ ನ್ಯಾಯಾಧೀಶರಿಗೆ ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಗಮನಕ್ಕೆ ತಂದು ಸಹಕರಿಸಬೇಕು ಎಂದರು.

ಧಾರವಾಡ ವಕೀಲರ ಸಂಘದ ಅಧ್ಯಕ್ಷ ಆರ್‌.ಯು. ಬೆಳ್ಳಕ್ಕಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ವಕೀಲರ ಪರಿಷತ್‌ ಸದಸ್ಯ ವಿ.ಡಿ. ಕಾಮರಡ್ಡಿ, ಎಸ್‌.ಎಂ. ಜಾಲವಾದಿ, ಪ್ರಕಾಶ ಉಡಕೇರಿ, ಹೇಮಂತ ಕಣಕಿಕೊಪ್ಪ ಇನ್ನಿತರರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.