ಧಾರವಾಡ ಜಿಲ್ಲಾಡಳಿತದಿಂದ ತಂತ್ರಾಂಶ ಆಧಾರಿತ ಆ್ಯಂಬುಲೆನ್ಸ್ ಸೇವೆ ಆರಂಭ
Team Udayavani, Apr 24, 2021, 12:53 PM IST
ಹುಬ್ಬಳ್ಳಿ: ಕೋವಿಡ್ ರೋಗಿಗಳಿಗೆ ತುರ್ತು ಚಿಕಿತ್ಸೆಗೆ ಅನುಕೂಲವಾಗುವಂತೆ ಧಾರವಾಡ ಜಿಲ್ಲಾಡಳಿತ ತಂತ್ರಾಂಶ ಆಧಾರಿತ ಸುಸಜ್ಜಿತ ಆ್ಯಂಬ್ಯುಲೆನ್ಸ್ ಸೇವೆ ಆರಂಭಿಸಿದೆ.
ಕೋವಿಡ್ ದೃಢಪಟ್ಟ ರೋಗಿಗಳಿಗೆ ತುರ್ತು ಚಿಕಿತ್ಸೆ ಅವಶ್ಯವಿದ್ದರೆ ಮಾಹಿತಿ ಬಂದ 15 ನಿಮಿಷಕ್ಕೆ ಆ್ಯಂಬ್ಯುಲೆನ್ಸ್ ರೋಗಿಯ ಮನೆಯ ಮುಂದೆ ಇರಲಿದೆ.
ತಹಶಿಲ್ದಾರ ಕಚೇರಿಯಲ್ಲಿ ಇದಕ್ಕಾಗಿ ವಾರ್ ರೂಂ ಆರಂಭಿಸಲಾಗಿದ್ದು, 10 ಜನ ವೈದ್ಯರು ಇರಲಿದ್ದು, ಸೋಂಕಿತ ಪ್ರಕರಣ ವರದಿ ಬರುತಿದ್ದಂತೆಯೇ ಸೋಂಕಿತರನ್ನು ಸಂಪರ್ಕಿಸಿ ಕೌನ್ಸಲಿಂಗ್ ಆರಭಿಸುತ್ತಿದ್ದು, ತಕ್ಷಣಕ್ಕೆ ಆ್ಯಂಬ್ಯುಲೆನ್ಸ್ ಕಳುಹಿಸಿ ರೋಗಿಗಳು ಬಯಸಿದಲ್ಲಿ ಖಾಸಗಿ ಆಸ್ಪತ್ರೆ ಇಲ್ಲವೆ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗುತ್ತದೆ.
ಆ್ಯಂಬ್ಯುಲೆನ್ಸ್ ಗಳಿಗೆ ಜಿಪಿಎಸ್ ಅಳವಡಿಸಲಾಗಿದ್ದು ವಾಹದ ಚಲನೆ ಮಾಹಿತಿ ವಾರ್ ರೂಂ ಗೆ ರವಾನೆಯಾಗುತ್ತದೆ. ಆ್ಯಂಬ್ಯುಲೆನ್ಸ್ ನಲ್ಲಿ ಆಕ್ಸಿಜನ್, ನರ್ಸ್, ಇನ್ನಿತರ ಸೌಲಭ್ಯಗಳು ಇರಲಿವೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ, ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಆ್ಯಂಬ್ಯುಲೆನ್ಸ್ ಗಳಿಗೆ ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ