ಹೊಸ ಪರಿಕಲ್ಪನೆ-ಯೋಜನೆ ಸಿದ್ಧ: ಕೊಳ್ಳೇಗಾಲ

ಸೈಬರ್‌ ಕ್ರೈಂ ತಡೆಗಟ್ಟಲು ಪ್ರತ್ಯೇಕವಾಗಿ ಘಟಕ ಸ್ಥಾಪಿಸಿ ಸಿಐಎಸ್‌ಒ ಹಿರಿಯ ಅಧಿಕಾರಿ ನೇಮಕಕ್ಕೆ ಕ್ರಮ

Team Udayavani, Aug 19, 2019, 10:18 AM IST

Untitled-1

ಹುಬ್ಬಳ್ಳಿ: ಬ್ಯಾಂಕ್‌ ಆಫ್‌ ಇಂಡಿಯಾದ ಹುಬ್ಬಳ್ಳಿ ಕ್ಷೇತ್ರದ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ರಾಘವೇಂದ್ರ ಕೊಳ್ಳೆಗಾಲ ಮಾತನಾಡಿದರು.

ಹುಬ್ಬಳ್ಳಿ: ಬ್ಯಾಂಕ್‌ ಆಫ್‌ ಇಂಡಿಯಾದ ಹು-ಧಾ ವಲಯವು ಸಾಲ ನೀಡಿಕೆ ಸೇರಿದಂತೆ ಇನ್ನಿತರೆ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲು ಹೊಸ ಪರಿಕಲ್ಪನೆ, ಯೋಜನೆ ರೂಪಿಸಿದೆ ಎಂದು ಬ್ಯಾಂಕ್‌ನ ಮಹಾ ಪ್ರಬಂಧಕ ರಾಘವೇಂದ್ರ ವಿ. ಕೊಳ್ಳೇಗಾಲ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬ್ಯಾಂಕ್‌ನ ಹು-ಧಾ ವಲಯ ಕಚೇರಿಯಿಂದ ವಲಯ ಮಟ್ಟದಲ್ಲಿ ಕೆಳ ಹಂತದಿಂದ ಮೇಲ್ಮಟ್ಟದ ವರೆಗಿನ ವಿಚಾರ-ವಿಮರ್ಶೆಗಳ ಆರಂಭಿಕ ಹಂತದ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಅರ್ಥವ್ಯವಸ್ಥೆಯ ವಿಭಿನ್ನ ಕ್ಷೇತ್ರಗಳಲ್ಲಿ ಯಾವ ರೀತಿ ಸಾಲಗಳ ಉಪಲಬ್ಧತೆ ಪಡೆಯಬಹುದು ಎಂಬುದನ್ನು ಚರ್ಚಿಸಲಾಗಿದೆ. ಬ್ಯಾಂಕ್‌ ಅನ್ನು ನಾಗರಿಕ ಕೇಂದ್ರಿತ ಮಾಡುವುದು ಹಾಗೂ ಹಿರಿಯ ನಾಗರಿಕರು, ರೈತರು, ಸಣ್ಣ ಉದ್ಯಮ, ವ್ಯವಸಾಯ, ಯುವ ಜನಾಂಗ, ಮಹಿಳೆಯರ ಆಕಾಂಕ್ಷೆಗಳಿಗೆ ಸಂವೇದನೆ ವ್ಯಕ್ತಪಡಿಸುವುದು ಇದರ ಉದ್ದೇಶವಾಗಿದೆ. ಆ ಮೂಲಕ 2024-25ನೇ ಸಾಲಿಗೆ ಭಾರತದ ಅರ್ಥವ್ಯವಸ್ಥೆಯನ್ನು 5 ಟ್ರಿಲಿಯನ್‌ ಡಾಲರ್‌ಗೆ ಏರಿಸುವಲ್ಲಿ ಯಶಸ್ವಿಯಾಗಬಹುದು ಎಂದರು.

ಆರ್ಥಿಕ ಅಭಿವೃದ್ಧಿಯಲ್ಲಿ ವಿಭಿನ್ನ ರಾಷ್ಟ್ರೀಯ ಪ್ರಾಥಮಿಕತೆಗಳಿಗೆ ಬ್ಯಾಂಕ್‌ನ ಕೊಡುಗೆ ಬಗ್ಗೆ ಸಮೀಕ್ಷೆ, ಆರ್ಥಿಕ ವೃದ್ಧಿಯಲ್ಲಿ ಸಾಲ ವಿತರಣೆ, ಮೂಲಸೌಕರ್ಯ ಹಾಗೂ ಉದ್ಯೋಗ, ಕೃಷಿ ಕ್ಷೇತ್ರ, ಲಘು ಉದ್ಯಮ, ಮುದ್ರಾ ಸಾಲ, ಶೈಕ್ಷಣಿಕ ಸಾಲ, ಮಹಿಳಾ ಸಬಲೀಕರಣ, ನೇರ ಲಾಭ ವರ್ಗಾವಣೆ, ನಗದು ರಹಿತ/ಡಿಜಿಟಲ್ ಅರ್ಥವ್ಯವಸ್ಥೆ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಚರ್ಚಿಸಲಾಗಿದೆ ಎಂದು ತಿಳಿಸಿದರು.

ವಲಯ ಪ್ರಬಂಧಕ ಬಿ.ವಿ. ರಾಮಕೃಷ್ಣ, ಉಪ ವಲಯ ಪ್ರಬಂಧಕ ಪಿ.ಜಿ. ಪಪ್ಪು ಇನ್ನಿತರರಿದ್ದರು.

3500 ಕೋಟಿ ಸಾಲ ನೀಡಿಕೆ: ಬ್ಯಾಂಕ್‌ ಆಫ್‌ ಇಂಡಿಯಾ ಈಗಾಗಲೇ ಆದ್ಯತೆ ಕ್ಷೇತ್ರಕ್ಕೆ 3500 ಕೋಟಿ ರೂ. ಸಾಲ ನೀಡಿದೆ. ಅದರಲ್ಲಿ ಮುದ್ರಾ ಯೋಜನೆಯಡಿ ಎಂಎಸ್‌ಎಂಇಗೆ 500 ಕೋಟಿ ರೂ. ನೀಡಿದೆ. ಎನ್‌ಪಿಆರ್‌ಎಸ್‌ ಶೇ. 7.5ರಷ್ಟಿದೆ. ಒಟ್ಟು 3500 ಕೋಟಿ ರೂ. ಸಾಲ ನೀಡಿಕೆಯಲ್ಲಿ 260 ಕೋಟಿ ರೂ. ಬಾಕಿಯಿದೆ. ಅದರಲ್ಲಿ 160 ಕೋಟಿ ರೂ. ಕೃಷಿಯದ್ದಾಗಿದೆ. ಗ್ರಾಹಕರಿಗೆ ಬ್ಯಾಂಕ್‌ನ ಸೌಲಭ್ಯ, ಸವಲತ್ತು ಕುರಿತು ತಿಳಿಸಲು ಬ್ಯಾಂಕಿನ ಸಿಬ್ಬಂದಿಗೆ ಪುನಶ್ಚೇತನ ಹಾಗೂ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಸೈಬರ್‌ ಕ್ರೈಂ ತಡೆಗಟ್ಟಲು ಪ್ರತ್ಯೇಕವಾಗಿ ಘಟಕ ಸ್ಥಾಪಿಸಿ ಸಿಐಎಸ್‌ಒ ಹಿರಿಯ ಅಧಿಕಾರಿ ನೇಮಿಸಲಾಗುವುದು. ಗ್ರಾಮೀಣ ಭಾಗಗಳಲ್ಲಿ ಬ್ಯಾಂಕಿಂಗ್‌ ವ್ಯವಹಾರ ಹೆಚ್ಚಿಸಲು ಬ್ಯುಸಿನೆಸ್‌ ಕರೆಸ್ಪಾಂಡೆನ್ಸ್‌ಗಳ ಸಂಖ್ಯೆ ಹೆಚ್ಚಿಸಲಾಗುವುದು. ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವ ಸಲುವಾಗಿ ಬ್ಯಾಂಕಿನ ಸಿಬ್ಬಂದಿಯಿಂದ ಒಂದು ದಿನದ ಸಂಬಳ ನೀಡಲಾಗುವುದು ಎಂದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.