ನೂತನ ಸರ್ಕಾರದೆದುರು ನೂರಾರು ನಿರೀಕ್ಷೆ!


Team Udayavani, May 23, 2018, 5:11 PM IST

23-may-21.jpg

ಹುಬ್ಬಳ್ಳಿ: ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದು, ನೂತನ ಸರಕಾರದಿಂದ ಹುಬ್ಬಳ್ಳಿ-ಧಾರವಾಡ ಮಹಾನಗರ ಹಲವು ಅಭಿವೃದ್ಧಿ ಕಾರ್ಯಗಳ ಬಹು ದೊಡ್ಡ ನಿರೀಕ್ಷೆ ಹೊಂದಿದೆ.

ಬೆಂಗಳೂರು ನಂತರದಲ್ಲಿ ರಾಜ್ಯದ ಎರಡನೇ ದೊಡ್ಡ ಮಹಾನಗರ ಎಂಬ ಖ್ಯಾತಿ ಇದೆಯಾದರೂ, ಕನಿಷ್ಠ ಮೂಲಭೂತ ಸೌಕರ್ಯಗಳಿಗೂ ಪರದಾಡುವ ಸ್ಥಿತಿ ಇದೆ. ರಸ್ತೆ, ನೀರು, ತ್ಯಾಜ್ಯ ವಿಲೇವಾರಿ, ಮಾರುಕಟ್ಟೆ ಅಭಿವೃದ್ಧಿ, ಒಳಚರಂಡಿ, ಫ್ಲೈಓವರ್‌, ಕೊಳಗೇರಿಗಳ ಅಭಿವೃದ್ಧಿ ಹೀಗೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ವೇಗ ದೊರೆಯಬೇಕಿದೆ.

ನೀರಿಗಾಗಿ ಪರದಾಟ: ದೇಶಕ್ಕೆ ಮೊದಲೆನ್ನುವ ರೀತಿಯಲ್ಲಿ 24/7 ನೀರು ಪೂರೈಕೆ ಹೊಂದಿದ ಮಹಾನಗರ ಎಂಬ ಹೆಗ್ಗಳಿಕೆ ಜತೆಗೆ 10-15 ದಿನಕ್ಕೊಮ್ಮೆ ನೀರು ಪೂರೈಕೆಯ ದುಃಸ್ಥಿತಿಯೂ ಇಲ್ಲಿಯದ್ದಾಗಿದೆ. ಮಲಪ್ರಭಾ ನದಿಯ ರೇಣುಕಾ ಸಾಗರ ಹಾಗೂ ಧುಮ್ಮವಾಡದ ನೀರಸಾಗರ ಮಹಾನಗರಕ್ಕೆ ನೀರು ಪೂರೈಕೆ ಮೂಲಗಳಾಗಿವೆ. ಸತತ ಬರದಿಂದಾಗಿ ನೀರಸಾಗರ ಒಣಗಿ ಎರಡು ವರ್ಷಗಳಾಗುತ್ತಿದ್ದು, ಸುಮಾರು 40 ಎಂಎಲ್‌ಡಿ ನೀರಿನ ಕೊರತೆ ಅನುಭವಿಸುವಂತಾಗಿದೆ.

24/7 ನೀರು ಪೂರೈಕೆ ಯೋಜನೆ ಎಲ್ಲ 67 ವಾರ್ಡ್‌ ಗಳಿಗೆ ವಿಸ್ತರಣೆ ಪ್ರಸ್ತಾಪ ಹಲವು ವರ್ಷಗಳಿಂದ ಮೊಳಗುತ್ತಲೇ ಇದೆ. ಮತ್ತೊಂದು  ಕಡೆ ನೀರಿನ ಕೊರತೆ ನೀಗಿಸುವ ನಿಟ್ಟಿನಲ್ಲಿ ಮಲಪ್ರಭಾದಿಂದ ಸಗಟು ನೀರು ತರುವ ಯೋಜನೆ ರೂಪುಗೊಂಡು ಐದು ವರ್ಷ ಕಳೆದರೂ ಅದಕ್ಕೆ ಮುಕ್ತಿ ಇಲ್ಲದಂತಾಗಿದೆ. ಮಹಾನಗರಕ್ಕೆ ನೀರಿನ ಸಮರ್ಪಕ ಪೂರೈಕೆ ನಿಟ್ಟಿನಲ್ಲಿ ಮಲಪ್ರಭಾದಿಂದ ಸಗಟು ನೀರು ತರಲು ಅಂದಾಜು 24 ಕೋಟಿ ರೂ.ಗಳ ಯೋಜನೆ ರೂಪಿಸಲಾಗಿದ್ದು, ಮಹಾನಗರ ಪಾಲಿಕೆಯಲ್ಲಿ ಹಣ ಇದ್ದರೂ ಸರಕಾರದಿಂದ ಅನುಮೋದನೆ ದೊರೆಯುತ್ತಿಲ್ಲವಾಗಿದೆ.

ಮಹಾನಗರಕ್ಕೆ ಪೂರೈಕೆಯಾಗುವ ನೀರಿನಲ್ಲೇ ಜಿಲ್ಲೆಯ ಹುಬ್ಬಳ್ಳಿ, ನವಲಗುಂದ, ಕುಂದಗೋಳ ತಾಲೂಕಿನ ಹಲವು ಗ್ರಾಮಗಳು ಅವಲಂಬನೆಯಾಗಿದ್ದು, ಅಲ್ಲಿಗೂ ನೀರು ನೀಡಬೇಕಿದೆ. ನೀರು ಪೂರೈಕೆಗೆ ಪ್ರತ್ಯೇಕ ವಿದ್ಯುತ್‌ ಎಕ್ಸ್ಪ್ರೆಸ್‌ ಲೈನ್‌ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದರೂ, ವಿದ್ಯುತ್‌ ಸಮಸ್ಯೆಯಿಂದ ನೀರು ಪೂರೈಕೆಯ ಸ್ಥಿತಿಯನ್ನು ಇನ್ನಷ್ಟು ಹದಗೆಡುವಂತೆ ಮಾಡತೊಡಗಿದೆ.

ಒಳಚರಂಡಿ ಎಂಬ ಮೆಗಾ ಧಾರಾವಾಹಿ ಹಲವು ಆವಾಂತರಗಳೊಂದಿಗೆ ಒಂದು ಅಂಕ ಮುಗಿಸಿದ್ದು, ಇನ್ನಷ್ಟು ಪ್ರದೇಶಕ್ಕೆ ಒಳಚರಂಡಿ ವ್ಯವಸ್ಥೆ ವಿಸ್ತರಣೆಗೊಳ್ಳಬೇಕಿದೆ. ಒಳಚರಂಡಿ, ಮನೆಗಳಿಗೆ ಅಡುಗೆ ಅನಿಲ ಪೂರೈಕೆ ಪೈಪ್‌ಲೈನ್‌, ವಿವಿಧ ಕಂಪೆನಿಗಳ ಕೇಬಲ್‌ ಇನ್ನಿತರ ಕಾರಣಕ್ಕೆ ರಸ್ತೆಗಳ ಅಗೆತ ಅನೇಕ ಕಡೆ ರಸ್ತೆಗಳ ಅಸ್ತಿತ್ವಕ್ಕೆ ಧಕ್ಕೆ ತರುವ ಕಾರ್ಯ ಮಾಡಿವೆ. ರಸ್ತೆಗಳನ್ನು ಸುಧಾರಿಸುವ ಕೆಲಸ ತುರ್ತಾಗಿ ಆಗಬೇಕಿದೆ.

ತ್ಯಾಜ್ಯ ವಿಲೇವಾರಿ ಘಟಕ ಮರೀಚಿಕೆ: ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಕಳೆದ ಏಳೆಂಟು ವರ್ಷಗಳಿಂದ ಇಂದು, ನಾಳೆ ಎಂದು ಸುಳಿದಾಡುತ್ತಲೇ ಇದೆಯಾದರೂ ಇಂದಿಗೂ ಅದು ಸಾಧ್ಯವಾಗಿಲ್ಲ. ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಕುರಿತಂತೆ ಪಾಲಿಕೆಯಿಂದ ಪ್ರಸ್ತಾವನೆ ಸಿದ್ಧ ಪಡಿಸುವುದು, ಸರಕಾರದಿಂದ ಅದಕ್ಕೆ ಕೊಕ್ಕೆ ಹಾಕುವುದು ನಡೆಯುತ್ತಲೇ ಬಂದಿದೆ. ಯೋಜನೆ ಬಹುತೇಕ ಸಿದ್ಧಗೊಂಡಿದ್ದು, ಟೆಂಡರ್‌ ಕರೆಯಬೇಕಿದೆ ಎಂಬ ಕಥೆಯನ್ನು ಇಂದಿಗೂ ಹೇಳಲಾಗುತ್ತಿದೆ. ಪಾಲಿಕೆಗೆ ಬರಬೇಕಾದ ಸುಮಾರು 130ಕೋಟಿ ರೂ. ಪಿಂಚಣಿ ಬಾಕಿ ಹಣದ ಕುರಿತಾಗಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವಿನ ಹಗ್ಗ ಜಗ್ಗಾಟ, ಆರೋಪ-ಪ್ರತ್ಯಾರೋಪ ಅರ್ಭಟಿಸುತ್ತಿದೆಯಾದರೂ, ನಿರೀಕ್ಷಿತ ಹಣ ಇಂದಿಗೂ ಬಂದಿಲ್ಲ.

ಅವಳಿನಗರದ ಮಾರುಕಟ್ಟೆಗಳ ಅಭಿವೃದ್ಧಿ ಭಾಷಣ-ಹೇಳಿಕೆಗಳಿಗೆ ಸೀಮಿತವಾದಂತಾಗಿದ್ದು, ಯಾವುದೇ ಮಾರುಕಟ್ಟೆಯ ಅಭಿವೃದ್ಧಿ ಭಾಗ್ಯವನ್ನು ಇಂದಿಗೂ ಕಂಡಿಲ್ಲ. ಹುಬ್ಬಳ್ಳಿಯಲ್ಲಿ ಜನತಾ ಬಜಾರ್‌, ಎಂ.ಜಿ. ಮಾರುಕಟ್ಟೆ, ಧಾರವಾಡದ ಸೂಪರ್‌ ಮಾರ್ಕೆಟ್‌ಗಳ ಅಭಿವೃದ್ಧಿಗೆ ಗಮನ ನೀಡಬೇಕಾಗಿದೆ.

ಅವಳಿನಗರದಲ್ಲಿ ಸಂಚಾರ ವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡತೊಡಗಿದೆ. ವಾಹನಗಳ ಸಂಖ್ಯೆ ಹೆಚ್ಚುತ್ತಿದೆ. ಸಂಚಾರ ಮಾರ್ಗ ಇದ್ದಷ್ಟೇ ಇದೆ ಎನ್ನುವುದಕ್ಕಿಂತ ಇದ್ದ ರಸ್ತೆ ಅನ್ಯ ಬಳಕೆಗೆ ಮೀಸಲಾಗುತ್ತಿದೆ. ಸುಗಮ ಸಂಚಾರಕ್ಕೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳು ಇಲ್ಲವಾಗುತ್ತಿವೆ. ಇದೇ ಸ್ಥಿತಿ ಮುಂದುವರಿದರೆ ಸಂಚಾರ ದೃಷ್ಟಿಯಿಂದ ಬೆಂಗಳೂರಿನಲ್ಲಿನ ದುಃಸ್ಥಿತಿ ಇಲ್ಲಿಯೂ ಗೋಚರಿಸುವುದು ದೂರವಿಲ್ಲ ಎಂದೆನಿಸುತ್ತಿದೆ.

ಸುಗಮ ಸಂಚಾರ ನಿಟ್ಟಿನಲ್ಲಿ ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಫ್ಲೈಓವರ್‌ ನಿರ್ಮಾಣ ಪ್ರಸ್ತಾವನೆ ಇದ್ದು, ಕೇಂದ್ರ ಸರಕಾರ ಅಗತ್ಯ ಹಣ ನೀಡಿಕೆಗೆ ಸಿದ್ಧವಿದೆ. ರಾಜ್ಯ ಸರಕಾರ ಕೂಡಲೇ ಡಿಪಿಆರ್‌ ಸಿದ್ಧ ಮಾಡಿ ಪ್ರಸ್ತಾವನೆ ಸಲ್ಲಿಸಲು ಮೀನ-ಮೇಷ ಎಣಿಸುತ್ತಿದೆ ಎಂಬ ಆರೋಪ ಬಿಜೆಪಿಯದ್ದಾಗಿದೆ. ಫ್ಲೈಓವರ್‌ ಸಾಧ್ಯತೆ ಬಗ್ಗೆ ನೂತನ ಸರಕಾರ ತುರ್ತು ಗಮನ ನೀಡಬೇಕಿದೆ. ಕೊಳಗೇರಿಗಳ ಅಭಿವೃದ್ಧಿಗೆ ಮುತುವರ್ಜಿ ವಹಿಸಬೇಕಿದೆ. 

ಆಮೆ ನಡಿಗೆಗೂ ಸವಾಲಾಗುವ ರೀತಿಯಲ್ಲಿ ಹೆಜ್ಜೆ ಇರಿಸುತ್ತಿರುವ ಬಿಆರ್‌ಟಿಎಸ್‌ ಜನರ ತಾಳ್ಮೆಯನ್ನು ಎಷ್ಟು ಸಾಧ್ಯವೋ ಎಲ್ಲವನ್ನೂ ಪರೀಕ್ಷಿಸಿದ್ದು, ಇನ್ನಾದರೂ ಯೋಜನೆ ವೇಗ ಪಡೆಯುವ ನಿಟ್ಟಿನಲ್ಲಿ ನೂತನ ಸರಕಾರ ಮಹತ್ವದ ಹೆಜ್ಜೆ ಇರಿಸಬೇಕಿದೆ. ನೂತನ ಸರಕಾರ ಅವಳಿನಗರಕ್ಕೆ ಹೆಚ್ಚು ಆದ್ಯತೆ ಹಾಗೂ ವಿಶೇಷ ಪ್ಯಾಕೇಜ್‌ ನೀಡಲು ಮುಂದಾದೀತೇ
ಎಂಬ ನಿರೀಕ್ಷೆ ಮಹಾನಗರದ ಜನತೆಯದ್ದಾಗಿದೆ.

ಅಮರೇಗೌಡ ಗೋನವಾರ 

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.